Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ

ವಿಜಯಪುರ: ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ (Vijayapura) ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ (Almatti Dam) ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಜಿಲ್ಲೆಯ ಜನರು ನೀರಿಗಾಗಿ ಕೃಷ್ಣಾ ನದಿ (Krishna River) ಮೇಲೆ ಅವಲಂಬಿತರಾಗಿದ್ದಾರೆ. ಪಕ್ಕದ ಬಾಗಲಕೋಟೆ (Bagalkote) ಜಿಲ್ಲೆ ಕೂಡ ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದಲೇ ನೀರು ಸಪ್ಲೈ ಆಗುತ್ತದೆ. ಆದರೆ ಸದ್ಯ ಜಲಾಶಯದಲ್ಲಿ 9 ಟಿಎಂಸಿ ನೀರು ಮಾತ್ರ ಬಳಕೆಗೆ ಸಂಗ್ರಹವಿದ್ದು, ಇಷ್ಟರಲ್ಲಿಯೇ ಜೂನ್ ತಿಂಗಳು ಕೂಡ ಕಳೆಯಬೇಕಾಗಿದೆ. ಇದರಿಂದ ಅವಳಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ – ಯಾರಿದು ಅಭಿಜಿತ್ ದಿಪ್ಕೆ?