ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್ ಮಾಡಲಾಗಿದೆ.