ರಾಜ್ಯಸಭೆಗೆ ಹೋಗಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ; ಮಾಜಿ ಸಿಎಂ ಸದಾನಂದ ಗೌಡ
ಮೈಸೂರು; ರಾಜ್ಯಸಭೆಗೆ ಹೋಗಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಮತ್ತು ಜೆಡಿಎಸ್ ಒಂದೇ ಮೈತ್ರಿಕೂಟದಲ್ಲಿ ಇದ್ದೇವೆ. ನಮಗೆ ೬೩ ಮತ್ತು ಜೆಡಿಎಸ್ಸಿಗೆ ೧೭ ಸ್ಥಾನವಿದ್ದರೂ, ನನ್ನನ್ನು ರಾಜ್ಯಸಭೆಗೆ ಕಳುಹಿಸುವ ವಿಚಾರವನ್ನು ರಾಷ್ಟಿçÃಯ ನಾಯಕರು ನೋಡಿಕೊಳ್ಳುತ್ತಾರೆ. ನಾನು, ರಾಜ್ಯಸಭೆಗೆ ಆಯ್ಕೆಯಾಗಲು ಆಕಾಂಕ್ಷಿಯಾಗಿದ್ದೇನೆ. ಚುನಾವಣಾ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಲೋಕಸಭಾ ಚುನಾವಣೆಯ ವೇಳೆಯೇ ಹೇಳಿದ್ದೇನೆ. ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದರು.ನಮ್ಮಲ್ಲಿ…