Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ

ಹೈಕಮಾಂಡ್​​ ಬುಲಾವ್​​ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಈ ವೇಳೆ ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ನಿಖರವಾಗಿ ಯಾವ ವಿಷಯದ ಸಂಬಂಧ ಸಭೆ ಕರೆಯಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ರಾಜ್ಯಸಭಾ ಮತ್ತು ಪರಿಷತ್​​ ಚುನಾವಣೆ ಸೇರಿ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿಯೂ ಮಾತುಕತೆಯ ನಿರೀಕ್ಷೆ ಇದೆ.