3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ
೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ
ಮೈಸೂರು: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ ೨೮ ರಿಂದ ಜುಲೈ ೧ ರವರೆಗೆ ನಡೆಯಲಿದ್ದು, ೦-೫ ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ತಿಳಿಸಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜೂನ್ ೨೮ ರಂದು ೧೬೪೧ ಬೂತ್ ಗಳನ್ನು ತೆರೆದು ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಜೂನ್ ೨೮:ರಂದು ಪೋಷಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ತಪ್ಪದೇ ಲಸಿಕೆ ಹಾಕಿಸಿ. ಜೂನ್ ೨೯ ರಿಂದ ಜುಲೈ ೧ ರವರೆಗೆ ಲಸಿಕೆ ಪಡೆಯದ ಮಕ್ಕಳನ್ನು ಪತ್ತೆ ಹಚ್ಚಿ ಲಸಿಕೆ ನೀಡಲು ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಲಸಿಕೆ ನೀಡಲು ಜಿಲ್ಲೆಯಲ್ಲಿ ೭೭೮೦೫೯ ಮನೆಗಳನ್ನು ಹಾಗೂ ೦-೫ ವರ್ಷದೊಳಗಿನ ೨೧೯೫೨೧ ಮಕ್ಕಳನ್ನು ಗುರುತಿಸಲಾಗಿದೆ ೧೬೪೧ ಬೂತ್ ತೆರೆದು ಲಸಿಕೆ ನೀಡಲಾಗುವುದು, ಲಸಿಕೆ ನೀಡಲು ೬೭೭೨ ವ್ಯಾಕ್ಸಿನೇಟರ್ ಹಾಗೂ ೩೨೮ ಸೂಪರ್ ವೈಸರ್ ಗಳನ್ನು ನೇಮಕ ಮಾಡಲಾಗುವುದು ಎಂದರು.
ಲಸಿಕೆಯಿAದ ಯಾರು ವಂಚಿತರಾಗಬಾರದು ಎಂದು ಕಟ್ಟಡ ಕಾರ್ಮಿಕರು, ಇಟ್ಟಿಗೆ ತಯಾರು ಮಾಡುವ ಕಾರ್ಮಿಕರು, ವಲಸೆ ಕಾರ್ಮಿಕರು ವಾಸಿಸುವ ಸ್ಥಳ ಸೇರಿದಂತೆ ಇನ್ನಿತರೆ ಒಟ್ಟು ೧೩೯೬ ಹೈ ರಿಸ್ಕ್ ಏರಿಯಾಗಳನ್ನು ಗುರುತು ಮಾಡಲಾಗಿರುತ್ತದೆ. ಲಸಿಕೆ ನೀಡಲು ೫೧ ಮೊಬೈಲ್ ಟೀಂ ಸಹ ರಚಿಸಲಾಗಿರುತ್ತದೆ. ಹೈ ರಿಸ್ಕ್ ಏರಿಯಾ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.
ಆರ್.ಸಿ.ಹೆಚ್ ಅಧಿಕಾರಿ ಡಾ: ಸಿರಾಜ್ ಅಹಮದ್ ಮಾತನಾಡಿ,ದೇಶದಲ್ಲಿ ೨೦೧೧ ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿದ್ದು ನಂತರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ೨೦೧೪ ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟçಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನಗಳಲ್ಲಿ ಕೆಲವು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚಿನ ನಿಗಾ ವಹಿಸುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದರು.
ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಇನ್ನಿತರೆ ಪ್ರವಾಸಿ ತಾಣಗಳಲ್ಲಿ, ಜೂನ್ ೨೮ ರಂದು ಟ್ರನ್ಸಿಟ್ ಬೂತ್ ತೆರೆಯಲು ಅಗತ್ಯ ಸಿದ್ಧತೆ ಮಾಡುಕೊಳ್ಳಿ.ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ವಾಸಿಸುವ ಸ್ಥಳಗಳಲ್ಲಿ ಲಸಿಕಾ ಪಡೆಯುವಂತೆ ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಿ ಎಂದರು.
೨೦೨೫ ನೇ ಸಾಲಿನಲ್ಲಿ ನಡೆದ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಜಿಲ್ಲೆಯಲ್ಲಿ ೨೨೨೦೮೪ ಮಕ್ಕಳಿಗೆ ಲಸಿಕೆ ನೀಡಲು ಗುರಿ ನಿಗದಿಪಡಿಸಲಾಗಿತ್ತು. ೨೩೩೪೮೪ ಮಕ್ಕಳಿಗೆ ಲಸಿಕೆ ನೀಡಿ ಶೇ ೧೦೫.೧೩ ಸಾಧನೆ ಮಾಡಲಾಗಿದೆ ಎಂದರು
ಪಲ್ಸ್ ಪೊಲೀಯೋ ಕಾರ್ಯಕ್ರಮದ ಯಶಸ್ವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಸ್ವಯಂ ಸೇವಾ ಸಂಸ್ಥೆಗಳು,, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಗೋಪಿನಾಥ್, ಡಾ. ನಾಗರಾಜ್, ಡಾ. ಬೃಂದ, ಡಾ. ಸುವರ್ಣ, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ: ರವಿ ಕುಮಾರ್, ಡಾ. ಪುಟ್ಟತಾಯಮ್ಮ, ಡಾ.ಈಶ್ಚರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.