ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವ : ಶಾಸಕ ಟಿ.ಎಸ್.ಶ್ರೀವತ್ಸ
ಮೈಸೂರು; ಇದೇ ಮೊದಲ ಬಾರಿಗೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಮೇ 28 ರಂದು ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯ ವೇಳೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ವಾಸುದೇವಚಾರ್ಯರ ಜನ್ಮ ದಿನಾಚರಣ ಮಹೋತ್ಸವಕ್ಕೆ ಒಪ್ಪಿಗೆ ನೀಡಿದ್ದಾರೆ. ಹಾಗಾಗಿ…