Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು : ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಗೃಹಬಳಕೆದಾರರ ಮನೆಯ ಛಾವಣಿಯಲ್ಲಿ ಸೌರಫಲಕಗಳನ್ನು ಸ್ಥಾಪಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ವಾಹನಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರದಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್‌ಇಡಿ ಪರದೆ ಅಳವಡಿಸಿರುವ ವಾಹನದ ಮೂಲಕ ಪ್ರಚಾರ ಕಾರ್ಯಕ್ಕೆ ಚಾವಿಸನಿನಿ ತಾಂತ್ರಿಕ ನಿರ್ದೇಶಕರಾದ ಶರಣಮ್ಮ ಎಸ್. ಜಂಗಿನ ಹಾಗೂ ಚಾವಿಸನಿನಿ ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಎಲ್….

Read More

45 ಕೋಟಿ ರೂ ವೆಚ್ಚದ ಬಾಕ್ಸ್ ಡ್ರೆöÊನ್ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಚಾಲನೆ

ಮೈಸೂರು; ಇಲ್ಲಿನ ಕೆ ಆರ್ ಕ್ಷೇತ್ರದಲ್ಲಿ 45 ಕೋಟಿ ರೂಗಳ ವೆಚ್ಚದ ಬಾಕ್ಸ್ ಡ್ರೆöÊನ್ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಶುಕ್ರವಾರ ಚಾಲನೆ ನೀಡಿದರು.ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 57.59. 60. 62. 64. 65 ರಲ್ಲಿ ಬಾಕ್ಸ್ ಟ್ರೆöÊನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 20 ಕೋಟಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು.ಈ…

Read More

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಕ್ರಮಕ್ಕೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಒತ್ತಾಯ

ಮೈಸೂರು; ಆಹಾರ, ನಾಗರಿಕ ಸರಬರಾಜು ಇಲಾಖಾ ವತಿಯಿಂದ ನ್ಯಾಯಬೆಲೆ ಅಂಗಡಿ ಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರ ಅಕ್ಕಿಯು ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಒತ್ತಾಯಿಸಿದೆ.ಈ ಕುರಿತು ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬುರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಂಟೇಸ್ವಾಮಿ ರವರಿಗೆ ಲಿಖಿತ ಮನವಿ ಸಲ್ಲಿಸಿರುವ ಘಟಕದ ಮುಖಂಡರುಗಳು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ತಮ್ಮ ಪಡಿತರ…

Read More

ಮೈಸೂರು ಸಂಸ್ಥಾನದ ಸಂಗೀತ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಾಸುದೇವಾಚಾರ್ಯರ ಕೊಡುಗೆ ಅಪಾರ; ಸಂಸದ ಯದುವೀರ್

ಮೈಸೂರು: ಮೈಸೂರು ಸಂಸ್ಥಾನದ ಸಂಗೀತ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಾಸುದೇವಾ ಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ನಗರದ ನಾರಾಯಣಶಾಸ್ತಿç ರಸ್ತೆಯ ಲ್ಲಿರುವ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಯೋಗ ದಲ್ಲಿ ನಡೆದ ಅರಮನೆ ನಗರಿ ಮೈಸೂರಿನ ಸಂಗೀತ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ವಾಗ್ಗೇಯಕಾರ, ಸಂಗೀತ ಕಲಾನಿಧಿ ಮೈಸೂರು ಕೆ.ವಾಸುದೇವಾಚಾರ್ಯ, ಅವರ 192ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು…

Read More

ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ

ಮೈಸೂರು; ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 27ನೇ ಬ್ರಹ್ಮೋತ್ಸವ ಅಂಗವಾಗಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ ವಿಜೃಂಭಣೆಯಿAದ ನಡೆಯಿತು.ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸುತ್ತಿದ್ದ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಮಂಗಳವಾದ್ಯ, ವೇದಘೋಷಗಳೊಂದಿಗೆ ಸರೋವರದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಮಾಡಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಶ್ರಮಕ್ಕೆ ಆಗಮಿಸಿದ್ದರು.ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರು ತೆಪ್ಪೋತ್ಸವದಲ್ಲಿದ್ದು ಭಕ್ತರಿಗೆ ಆಶೀರ್ವಚನ ನೀಡಿದರು. ನೆರೆದಿದ್ದ ಭಕ್ತರು ತೆಪ್ಪೋತ್ಸವ ವೀಕ್ಷಿಸಿದರು.

Read More

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯನವರ ನಡೆ ಮಾದರಿಯಾಗಿದೆ; ಮಾಜಿ ಸಚಿವ ದಿನೇಶ್ ಗುಂಡೂರಾವ್

ಮೈಸೂರು: ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಅವರ ನಡೆ ನಿಜಕ್ಕೂ ಎಲ್ಲರಿಗೂ ಮಾದರಿಯಾಗಿದೆ. ಅವರು ನಮ್ಮ ಪ್ರಶ್ನಾತೀತ ನಾಯಕರು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಶುಕ್ರವಾರ ಮೈಸೂರಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಇದೊಂದು ಪ್ರಕ್ರಿಯೆ. ಹೈಕಮಾಂಡ್ ತೀರ್ಮಾನದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಈ ಹಿಂದೆಯೂ ಅವರು ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ. ಅವರ…

Read More