3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್

ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.
ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .
ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
“ಅಭಿವೃದ್ಧಿ ಕೆಲಸಗಳಿಗಾಗಿ ಶುಕವನವನ್ನು ಮಾತ್ರ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಇದರಿಂದ ವೀಕ್ಷಕರಿಗೆ ಉಂಟಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ. ಸಾರ್ವಜನಿಕರು ಮತ್ತು ಭಕ್ತಾದಿಗಳು ಎಂದಿನAತೆ ತಮ್ಮ ಸಹಕಾರವನ್ನು ಮುಂದುವರಿಸಬೇಕಾಗಿ ಮನವಿ ಮಾಡಿದೆ.