3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೋಡುಗೆ


ಮೈಸೂರು; ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಅವಧಿಯವರೆಗೆ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೋಡಲಾಯಿತು.
ಪಿಎಸ್‌ಐಗಳಾದ ಭಾಸ್ಕರ್ ಕೆ.ಎಸ್, ಗೋಪಾಲಕೃಷ್ಣ ಕೆ, ಎಆರ್‌ಎಸ್‌ಐಗಳಾದ ಚಿಕ್ಕಮಲ್ಲಪ್ಪ, ನಂಜುAಡಯ್ಯ ಸಿ.ಎಂ , ಪ್ರಶಾಂತ್ ಎಎಸ್‌ಐಗಳಾದ ಮನೋಹರ್, ರಾಮಸ್ವಾಮಿ ಹೆಚ್.ಜಿ ಹಾಗೂ ಮುಖ್ಯಪೇದೆ ಮಿತ್ರಕುಮಾರ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ ರವರು, ನಿವೃತ್ತ ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತ ಜೀವನವು ಆರೋಗ್ಯ, ಸಂತೋಷ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.