ಮೇಕೆದಾಟು ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ರಾಜ್ಯಕ್ಕೆ ನ್ಯಾಯ ಒದಗಿಸಬೇಕು; ಸಿ. ಎನ್. ಮಂಜೇಗೌಡ
ಮೈಸೂರು; ರಾಜ್ಯ ಸರ್ಕಾರ ಕುಡಿಯುವ ನೀರಿನ ಸಂಗ್ರಹಣೆಗಾಗಿ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಯ ಜಾರಿ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ ಆಗ್ರಹಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿಯಾದ ಚಿತ್ರ ನಟ ಜೋಸೆಫ್ ವಿಜಯ್ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಕರ್ನಾಟಕ ರಾಜ್ಯ ಕೈಗೆತ್ತಿಕೊಂಡಿರುವ…