ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರ ೮೪ನೇ ಜನ್ಮದಿನೋತ್ಸವ: ದತ್ತ ಪೀಠ ಪ್ರಶಸ್ತಿ ಪ್ರದಾನ
ಮೈಸೂರು: ನಗರದಲ್ಲಿರುವ ಶ್ರೀ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮದಿನೋತ್ಸವ ಮತ್ತು ನಾದಮಂಟಪದ ೨೮ನೇ ವಾರ್ಷಿಕೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ.ಗಣ್ಯಾತಿಗಣ್ಯರು,ಪೀಠಾಧಿಪತಿಗಳು ಆಶ್ರಮಕ್ಕೆ ಭೇಟಿ ನೀಡಿ ಗಣಪತಿ ಶ್ರೀಗಳಿಗೆ ಶುಭ ಕೋರಿದ್ದಾರೆ. ಇಂದು ಬುಧವಾರ ಅಧಿಕ ಜೇಷ್ಠ ಶುದ್ಧ ಏಕಾದಶಿ ಪ್ರಯುಕ್ತ ಬೆಳಗ್ಗೆ ೭ ಗಂಟೆಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರಾಭಿಷೇಕ ನೆರವೇರಿಸಲಾಯಿತು೧೦ ಗಂಟೆಗೆ ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ…