ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯ.
ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ.ಬಸವರಾಜು ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಕೂಡಲೇ ನೇಮಕ ಮಾಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟ ಆಗ್ರಹಿಸಿದೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು ೯ರಿಂದ ೧೦ ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ ಈ ಭಾಗದಲ್ಲಿ ಯಾರನ್ನು ಕೂಡ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್…