3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗ್ರಾಹಕರಿಲ್ಲದೆ ಭಣಗುಡುತ್ತಿವೆ ಜ್ಯುವೆಲ್ಲರಿ ಶಾಪ್‌ಗಳು!

ಚಿನ್ನದ ವಹಿವಾಟು ಶೇಕಡಾ 70 ರಷ್ಟು ಡೌನ್ ಹೊಸದೆಹಲಿ; ದೇಶಾದ್ಯಂತ ಚಿನ್ನದ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ. ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ ಕಂಡುಬAದಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.ವಿದೇಶದಿಂದ ಆಮದು ಪ್ರಮಾಣ ಕೇವಲ 7.5 ಟನ್‌ಗೆ ಕುಸಿದಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಚಿನ್ನದ ಆಮದು ಪ್ರಮಾಣದಲ್ಲಿ ಶೇಕಡಾ 70 ರಷ್ಟು ಬೃಹತ್ ಇಳಿಕೆಯಾಗಿದೆ. ಕಳೆದ…

Read More

ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ

ಮೈಸೂರು; ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜೂನ್ 4 ರಂದು ಮೈಸೂರಿನಲ್ಲಿ “ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ ಮಾಡಲಾಗುವುದು ಎಂದು ಪರಿಷತ್‌ನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಾಲ್ಮಡಿ ಅವರ ಕುರಿತು ‘ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು’ ಎಂಬ ಪುಸ್ತಕ ಪ್ರಕಟಿಸಿ, ಬೆಂಗಳೂರಿನಲ್ಲಿ ಜನಾರ್ಪಣೆ ಮಾಡಿ ಅವರಿಗೆ ಕೃತಜ್ಞತೆ ಮತ್ತು ಗೌರವಗಳನ್ನು…

Read More

ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಮೈಸೂರು: ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನಸಾಧನೆಯ ಶಿಖರಗಳು (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು)’ ಕೃತಿಯು ಇಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮAದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.ಭಾರತೀ ಪ್ರಕಾಶನ, ಮೈಸೂರು ವತಿಯಿಂದ ಪ್ರಕಟಿತ ಈ ಕೃತಿಯನ್ನು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ, ವ್ಯಕ್ತಿಗಳ ಸಾಧನೆಗಳನ್ನು ದಾಖಲಿಸಿ ಸಮಾಜಕ್ಕೆ ಸ್ಫೂರ್ತಿ ನೀಡುವ ಇಂತಹ ಕೃತಿಗಳು ಯುವಜನತೆಗೆ ಮಾರ್ಗದರ್ಶಿಯಾಗುತ್ತವೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್…

Read More

ಒಗ್ಗಟ್ಟಿನಿಂದ ಇದ್ದರೆ ಬಾಂಧವ್ಯ ವೃದ್ಧಿ: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್

ಮೈಸೂರು: ಬ್ರಾಹ್ಮಣ ಸಮುದಾಯವು ಸಂಘಟಿತವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಮಾತ್ರ, ಸಮಾಜದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲು ಸಾಧ್ಯ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದರು.ಮೈಸೂರಿನ ದಟ್ಟಗಳ್ಳಿಯ ಸಾ.ರಾ.ಕನ್ವೆನ್ಸನ್ ಹಾಲ್‌ನಲ್ಲಿ ನಡೆದ ಮೂಗೂರು ಕರ್ನಾಟಕ ಬ್ರಾಹ್ಮಣ ಸಂಘದ ಶತಮಾನೋತ್ಸವ ಸಂಭ್ರಮ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಪುರ ಸ್ಥಾರ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮುದಾಯದ ಪ್ರಗತಿಗೆ ಆಂತರಿಕ ಒಗ್ಗಟ್ಟು ಮತ್ತು ಸಂಘಟನಾ ಶಕ್ತಿ ಪ್ರಮುಖ ಆಧಾರಗಳಾಗಿವೆ….

Read More

ಡಾ.ಹೆಚ್.ಸಿ.ಮಹದೇವಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

*ದಲಿತರಿಗೆ ಸಮರ್ಪಕ ಸ್ಥಾನಮಾನಗಳನ್ನು ಒದಗಿಸಿದಿದ್ದರೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆಮೈಸೂರು: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಪ್ರಬಲ ಖಾತೆ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿ ಸೋಮವಾರ ಮೈಸೂರಿನಲ್ಲಿ ಅಖಿಲ ಕರ್ನಾಟಕ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಮೈಸೂರು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪರವಾಗಿ ನಾನಾ ಘೋಷಣೆಗಳನ್ನು ಕೂಗಿದರು. ಸ್ವಾತಂತ್ರ÷್ಯ ಬಂದ ದಿನಗಳಿಂದಲೂ…

Read More

ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಶ್ರೀಗರ್ಭ ಗರ್ಭಸಂಸ್ಕಾರವು ಅತ್ಯಗತ್ಯ

ಮೈಸೂರು; ಶ್ರೀಗರ್ಭ ಗರ್ಭಸಂಸ್ಕಾರವು ಸನಾತನ ಪರಂಪರೆಯಿAದ ಬಂದ ಅಮೂಲ್ಯ ಸಂಸ್ಕಾರವಾಗಿದ್ದು, ಮುಂದಿನ ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಇದು ಅತ್ಯಂತ ಅನಿವಾರ್ಯವೆಂದು ಆಯುಷ್ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲಕ್ಷಿö್ಮ ನಾರಾಯಣ ಹೇಳಿದರು.ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಪರಮಹಂಸ ಯೋಗ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಶ್ರೀಗರ್ಭ ಗರ್ಭಸಂಸ್ಕಾರ ಮಹಾವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶ್ರೀಗರ್ಭ ಸಂಸ್ಥಾಪಕರಾದ ಡಾ. ಕಾವ್ಯಾ ಎಸ್ ಅವರು ಗರ್ಭ ಸಂಸ್ಕಾರದ ಮಹತ್ವವನ್ನು ವೈಜ್ಞಾನಿಕ ಹಾಗೂ ಸಂಸ್ಕಾರಯುತ ದೃಷ್ಟಿಕೋನದಿಂದ…

Read More

ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲು ಆಗ್ರಹ

ಮೈಸೂರು; ಮಾಜಿ ಸಚಿವ ಸತೀಶ್ ಜಾರಕಿ ಹೊಳಿಗೆಯವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಆಗ್ರಹಿಸಿದರು. ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿರವರು ರಾಜ್ಯದ ಪ್ರಶ್ನಾತೀತ ನಾಯಕರು, ಆಹಿಂದ ಮತ್ತು ಶೋಷಿತ ಸಮುದಾಯಗಳ ಪರವಾಗಿ ಸುಮಾರು 30 ವರ್ಷಗಳಿಂದ ನಿರಂತರವಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿರುವ ರಾಜ್ಯದ ಏಕೈಕ ವ್ಯಕ್ತಿ.  ಇವರು ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ, ಸಾಮಾಜಿಕವಾಗಿಯೂ…

Read More

ಜಿಲ್ಲೆಯಲ್ಲಿ ಆರಂಭವಾದ ಶಾಲೆಗಳಲ್ಲಿ ಮಕ್ಕಳ ಕಲರವ

*ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿ ಸ್ವಾಗತ, ಆರತಿ ಬೆಳಗಿದರು, ಪುಸ್ತುಗಳು, ಹೂವುಗಳನ್ನು ನೀಡಿ ಸ್ವಾಗತಿಸಿದರು. ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ: ಶಾಸಕ ಟಿ.ಶ್ರೀವತ್ಸಮೈಸೂರು: ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು, ಮಕ್ಕಳ ಕಲರವ ಶುರುವಾಗಿದೆ. ಸೋಮವಾರ ಶಾಲೆಗಳ ಬಾಗಿಲು ತೆರೆಯುತ್ತಿದ್ದಂತೆ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ ಶಾಸಕರು, ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯವರು, ವಿವಿಧ ಸಂಘ, ಸಂಸ್ಥೆಗಳವರು ಭರ್ಜರಿ ಸ್ವಾಗತವನ್ನು ನೀಡಿ, ಬರಮಾಡಿಕೊಂಡರು. ಕೆಲವಡೆ ಮಕ್ಕಳಿಗೆ ಆರತಿ ಬೆಳಗಿ, ಹೂವುಗಳನ್ನು ನೀಡಿದರೆ, ಮತ್ತೆ ಹಲವಡೆ ಮಕ್ಕಳಿಗೆ ಪುಸ್ತಕ, ಸಿಹಿಯನ್ನು…

Read More