3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ಜಿಲ್ಲೆಯಾದ್ಯಾಂತ ಕೃಷಿ ಭೂಮಿ ಉಳಿಸಿ ಅಭಿಯಾನ


ಮೈಸೂರು; ಕೃಷಿ ಭೂಮಿ ಫಲವತ್ತತೆ ರಕ್ಷಿಸಿ, ಸುಸ್ಥಿರ ಬೇಸಾಯಕ್ಕೆ ಉತ್ತೇಜನ ನೀಡಲು ಕೇಂದ್ರ ಕೃಷಿ ಮತ್ತು ರೈತರಕಲ್ಯಾಣ ಮಂತ್ರಾಲಯ ದಿಂದ ಮಹತ್ವಾಕಾಂಕ್ಷಿ ಕೃಷಿ ಭೂಮಿ ಉಳಿಸಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಐಸಿಎಆರ್ ಕೃಷಿ ವಿಜ್ಞಾನಕೇಂದ್ರ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಆಂದೋಲನವು ಜೂನ್ 1 ರಿಂದ ಅಧಿಕೃತವಾಗಿ ಪ್ರಾರಂಭವಾಗಿದ್ದು, ಜೂನ್ 30ರವೆರೆವಿಗೂ ನಿರಂತರವಾಗಿ ಜರುಗಲಿದೆ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ತಿಳಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಇಳುವರಿ ಪಡೆಯುವ ಸಲುವಾಗಿ ರೈತರು ಕೃಷಿ ಭೂಮಿಗೆ ಅತಿಯಾದ ಹಾಗೂ ಅವೈಜ್ಞಾನಿಕವಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿದ್ದಾರೆ. ಕೀಟ ಹಾಗೂ ರೋಗಗಳ ಹತೋಟಿಗೆ ಅತಿಯಾಗಿ ಕೀಟನಾಶಕಗಳ ಬಳಕೆಯಿಂದ ಭೂಮಿಯ ಫಲವತ್ತತೆ ಕುಸಿಯುತ್ತಿದೆ. ಇದರಿಂದಾಗಿ ಮಣ್ಣಿ£ Àಆರೋಗ್ಯ ಹದಗೆಡುತ್ತಿದ್ದು, ಮುಂದಿನ ಪೀಳಿಗೆಗೆ ಆಹಾರ ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಂಭವವಿದೆ.
ಈ ಗಂಭೀರ ಪರಿಸ್ಥಿತಿ ಮನಗಂಡು ಮಣ್ಣಿನ ಆರೋಗ್ಯದ ಮಹತ್ವ, ವೈಜ್ಞಾನಿಕ ಮಣ್ಣು ಪರೀಕ್ಷೆಯ ಅನಿವಾರ್ಯತೆ, ಸಮತೋಲನ ಪೋಷಕಾಂಶಗಳ ನಿರ್ವಹಣೆ, ಸಾವಯವ ಹಾಗೂ ನೈಸರ್ಗಿಕ ಗೊಬ್ಬರಗಳ ಬಳಕೆ, ಜೀವಾಮೃತ, ಗೋಕೃಪಾಮೃತ, ಬೀಜಾಮೃತಗಳ ಮಹತ್ವ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಗ್ರಾಮಗಳಿಗೆ ತೆರಳಿ ರೈತರಿಗೆಅರಿವು ಮೂಡಿಸುವುಸುವುದ ಈ ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಕ್ಷೇತ್ರದ ಭವಿಷ್ಯವನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಮಣ್ಣಿನ ಆರೋಗ್ಯಕಾಪಾಡುವುದು ಪ್ರಮುಖ ಹೆಜ್ಜೆಯಾಗಿದೆ. ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿ, ಮಣ್ಣಿನ ಆರೋಗ್ಯ ಕಾರ್ಡ್ ಆಧಾರದ ಮೇಲೆ ಆಗತ್ಯವಿರುವ ರಸಗೊಬ್ಬರವನ್ನು ಬಳಸಬೇಕು, ಜೊತೆಗೆ ಅಮೂಲ್ಯವಾದ ಕೃಷಿ ಭೂಮಿಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಸುರಕ್ಷಿತ ಹಾಗೂ ಫಲವತ್ತಾದ ಸ್ಥಿತಿಯಲ್ಲಿ ಕೃಷಿ ಭೂಮಿಯನ್ನು ಹಸ್ತಾಂತರಿಸುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ, ಕೃಷಿ ವಿಜ್ಞಾನಕೇಂದ್ರದಲ್ಲಿರುವ 6 ವಿಷಯತಜ್ಞರುಗಳನ್ನು 2 ತಂಡಗಳನ್ನಾಗಿ ವಿಭಜಿಸಿ ಪ್ರತಿ ದಿನ ಜಿಲ್ಲೆಯ ವಿವಿಧತಾಲ್ಲೂಕಿನ 2 ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ.
ಮೈಸೂರು ತಾಲ್ಲೂಕಿನ ಜಯಪುರ ಗ್ರಾಮದಲ್ಲಿ ಶಾಸಕ ಜಿ.ಟಿದೇವೇಗೌಡರು ಕೃಷಿ ಭೂಮಿ ಉಳಿಸಿ ಅಭಿಯಾನದಲ್ಲಿ ಭಾಗವಹಿಸಿ ರೈತರಿಗೆ ರಸಗೊಬ್ಬರದ ಬಳಕೆ ಹಾಗೂ ಮಣ್ಣು ಪರೀಕ್ಷೆಯ ಅಗತ್ಯವನ್ನು ತಿಳಿಸಿದ್ದಾರೆ.
ಕೃಷಿ ಇಲಾಖೆ, ಮೈಕ್ಯಾಪ್ಸ್, ಐಟಿಸಿ, ಜೆಎಸ್‌ಎಸ್‌ಆರ್ಯುವೇದಕಾಲೇಜುಇವರ ಸಹಯೋಗದೊಂದಿಗೆ ಪರಿಯಾಪಟ್ಟಣತಾಲ್ಲೂಕಿನಕಣಗಾಲ್, ಕೆ. ಬಸವನಹಳ್ಳಿ, ನಂಜನಗೂಡುತಾಲ್ಲೂಕಿನ ಸುತ್ತೂರು, ಚಿನ್ನಂಬಳ್ಳಿ, ಕಿರುಗುಂದ, ಹೊರಳವಾಡಿ, ಆಲಂಬೂರುಮೈಸೂರುತಾಲ್ಲೂಕಿನ ಆಯರಹಳ್ಳಿ ಹಾಗೂ ಹಡಜನ ಗ್ರಾಮಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಕೃಷಿ ವಿಜ್ಞಾನಕೇಂದ್ರದ ವಿಷಯತಜ್ಞರುಗಳಾದ ಶ್ರೀಮತಿ ಹೆಚ್.ವಿ. ದಿವ್ಯಾ, ಶ್ರೀ ಶಾಮರಾಜ್, ಡಾ. ರಕ್ಷಿತ್‌ರಾಜ್, ಡಾ. ಜಿ.ಎಂ. ವಿನಯ್, ಡಾ. ವೈ.ಪಿ ಪ್ರಸಾದ್, ಡಾ. ದೀಪಕ್, ಕೃಷಿ, ತೋಟಗಾರಿಕೆ ಹಾಗೂ ಪಶು ಇಲಾಖೆಯ ಅಧಿಕಾರಿಗಳು ಈ ಅಭಿಯಾನದಲ್ಲಿ ಸಕ್ರಿಯಾಗಿ ತೊಡಗಿಸಿಕೊಂಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.