3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಳೆಗಾಲದಲ್ಲಿ ನೇರಳೆ ಹಣ್ಣು ತಿನ್ನುವುದು ವೆರಿ ಡೇಂಜರ್ … ಯಾಕೇ ಗೊತ್ತಾ !

ಈಗ ನೇರಳೆ ಹಣ್ಣಿನ ಕಾಲ. ಹಲವು ರೋಗಿಗಳಿಗೆ ರಾಮಬಾಣ ವಾಗಿ ಕೆಲಸ ಮಾಡುವ ನೆರಳೆ ಹಣ್ಣು, ಮಳೆಗಾಲದಲ್ಲಿ ವೆರಿ ಡೇಂಜರ್ ! ಮಳೆಗಾಲದಲ್ಲಿ ಈ ಹಣ್ಣನ್ನು ತಿಂದರೆ ಅನಾರೋಗ್ಯಕ್ಕೀಡಾಗುವುದು ಗ್ಯಾರಂಟಿ. ಎಲ್ಲದಕ್ಕಿಂತ ಮುಖ್ಯವಾಗಿ ಯಾರಿಗೆ ಈಗಾಗಲೇ ಶ್ವಾಸಕೋಶದ ತೊಂದರೆ ಇರುತ್ತದೆಯೋ, ಅಂತವರು ಮಳೆಗಾಲದ ನೇರಳೆ ಹಣ್ಣಿನ ತಂಟೆಗೆ ಹೋಗಲೇಬಾರದು. ನೇರಳೆ ಹಣ್ಣು ಸ್ವಾಭಾವಿಕವಾಗಿ ದೇಹದಲ್ಲಿ ತಂಪು ಮೂಡಿಸುವ ಗುಣವನ್ನು ಹೊಂದಿದೆ. ಮಳೆಗಾಲದ ತಣ್ಣನೆಯ ಹವಾಮಾನದ ಜೊತೆಗೆ ಈ ಹಣ್ಣನ್ನು ತಿಂದರೆ ಶ್ವಾಸಕೋಶದ ನರಗಳು ಕುಗ್ಗುವ ಸಾಧ್ಯತೆ ಇರುತ್ತದೆ.ನಮ್ಮ…

Read More

ಶಂಕರಾಚಾರ್ಯರು ಹಿಂದೂ ಧರ್ಮವನ್ನು ಜಗತ್ತಿನ ಉದ್ದಗಲಕ್ಕೂ ವಿಸ್ತರಿಸಿದರು; ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ

ಮೈಸೂರು; ಶಂಕರಾಚಾರ್ಯರು ದೈವಾಂಶ ಸಂಭೂತರು, ಹಿಂದೂ ಧರ್ಮವನ್ನು ಜಗತ್ತಿನ ಉದ್ದಗಲಕ್ಕೂ ವಿಸ್ತರಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.ಭಾನುವಾರ ನಗರದ ಶೃಂಗೇರಿ ಶ್ರೀಶಂಕರ ವ್ಮಠದ ಸಭಾಂಗಣದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಏರ್ಪಡಿಸಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿಶ್ವ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೂಧರ್ಮವನ್ನು ಪುನುರುತ್ತಾನಗೊಳಿಸಿದ ಆಚಾರ್ಯತ್ರಯರು ಶ್ರೀ ಶಂಕರಾಚಾರ್ಯರು.ಅತೀ ಚಿಕ್ಕ ವಯಸ್ಸಿನಲ್ಲೇ ದೇಶ ಪರ್ಯಟನೆ ಮಾಡಿದವರು. ಈಗಿನ ವಿದ್ಯಾರ್ಥಿಗಳು ಅವರಂತೆ ಮೇಧಾವಿ ತತ್ವಙ್ನನಿಗಳಾಬೇಕು. ಸಮಯವನ್ನು ವ್ಯರ್ಥ ಮಾಡದೆ ಚೆನ್ನಾಗಿ…

Read More

100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಮೈಸೂರು:ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ ಆವರಣದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿರುವ 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಶ್ರೀ ರಾಮಕೃಷ್ಣ ವಿದ್ಯಾ ಶಾಲೆಯ ನಿವೃತ್ತ ಪ್ರಾಂಶುಪಾಲ ಎಸ್ ಬಾಲಾಜಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಹೇಳಿದರು.ಪ್ರತಿಯೊಂದು…

Read More

ಹೈನುಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕ ಜ್ಞಾನಕ್ಕೆ ಉತ್ತೇಜನ

ಮೈಸೂರು: ಗ್ರಾಮೀಣ ರೈತರ ಆರ್ಥಿಕ ಸಬಲೀಕರಣ ಮತ್ತು ವೈಜ್ಞಾನಿಕ ಹೈನುಗಾರಿಕೆ ಉತ್ತೇಜಿಸುವ ಉದ್ದೇಶದಿಂದ ಹಾರ್ಟ್ ಸಂಸ್ಥೆಯ ವತಿಯಿಂದ “ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ” ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮೈಸೂರಿನ ರಿಂಗ್ ರೋಡ್ ಸಮೀಪವಿರುವ ಹಾರ್ಟ್ ಸಂಸ್ಥೆ ಯಶಸ್ವಿಯಾಗಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾರ್ಟ್ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಮಾತನಾಡಿ., ಹೈನುಗಾರಿಕೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ರೈತರು ಸಾಂಪ್ರದಾಯಿಕ ವಿಧಾನಗಳ ಜೊತೆಗೆ ವೈಜ್ಞಾನಿಕ ಪಶುಪಾಲನಾ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.ಉತ್ತಮ…

Read More

ಸಂಗ್ರಹಕ ಕಾಳಿಹುಂಡಿ ಶಿವಕುಮಾರ್‌ರಿಂದ ಬೃಹತ್ ಪುಸ್ತಕಗಳ ಪ್ರದರ್ಶನ

ಮೈಸೂರು; ನಗರದ ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಮೊದಲ ಮಹಡಿಯ ಕಟ್ಟಡದಲ್ಲಿ ಪತ್ರಿಕಾ ಮತ್ತು ಪುಸ್ತಕ ಸಂಗ್ರಹಕ ಕಾಳಿಹುಂಡಿ ಶಿವಕುಮಾರ್ ಅವರು ಸಂಗ್ರಹಿಸಿರುವ ಬೃಹತ್ ಪುಸ್ತಕಗಳ ಪ್ರದರ್ಶನಗಳ ಕಾರ್ಯಕ್ರಮ ನೆರವೇರಿತು.ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ ಚಂದ್ರಶೇಖರ್, ಶಿಕ್ಷ ಪಿಯು ಕಾಲೇಜಿನ ಪ್ರಾಂಶುಪಾಲ ದೇವರಾಜ್ ಪಿ ಚಿಕ್ಕಹಳ್ಳಿ, ಮೈಸೂರು ಆಕಾಶವಾಣಿ ಕೇಳುಗರ ಬಳಗ ಸಮುದ್ಯತಾದ ಅಧ್ಯಕ್ಷ, ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ರವಿ ಕೆ, ಹಾಗೂ…

Read More

ಮುಂದಿನ ವರ್ಷ ಎರಡು ಕೋಟಿ ಜನರಿಂದ ಯೋಗಾಭ್ಯಾಸಕ್ಕೆ ಸಂಕಲ್ಪ

*ರಾಜ್ಯಾದ್ಯAತ ಯೋಗ ವಿಸ್ತರಣೆಗೆ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿ ಸಲಹೆ —–ಬಾಕ್ಸ್ ನ್ಯೂಸ್ —500ಕ್ಕೂ ಹೆಚ್ಚು ಜನರಿಂದ ಯೋಗಾಭ್ಯಾಸಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಆಯೋಜಿಸಿದ್ದ ಸಂಕಲ್ಪ ದಿನದಲ್ಲಿ 500ಕ್ಕೂ ಹೆಚ್ಚು ಯೋಗಪಟುಗಳು ವಿಶ್ವ ಯೋಗ ದಿನದ ಶಿಷ್ಟಾಚಾರದನ್ವಯ ಯೋಗ ತಾಲೀಮು ನಡೆಸಿದರು.ಯೋಗ ಪೂರ್ವಾಭ್ಯಾಸದಲ್ಲಿ ಯೋಗಪಟುಗಳು, ಸಾಧಕರು ಹಾಗೂ ಬೋಧಕರು ಭಾಗವಹಿಸಿದ್ದರು.ಸುಮಾರು 45 ನಿಮಿಷಗಳ ಕಾಲ ಪ್ರಾರ್ಥನೆ, ಚಾಲನಾ ಕ್ರಿಯೆ, ತಾಡಾಸನ, ವೃಕ್ಷಾಸನ, ಪಾದ-ಹಸ್ತಾಸನ, ಅರ್ಧ ಚಕ್ರಾಂತಾಸನ ಮತ್ತು ತ್ರಿಕೋಣಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟಾçಸನ, ಉಷ್ಟಾçಸನ, ಶಶಕಾಸನ,…

Read More

ಯಾವಾಗಲೂ ಹಿರಿಯರ ಮಾರ್ಗದರ್ಶನದಲ್ಲಿಯೇ ಜೀವನ ನಿರ್ವಹಣೆ ಮಾಡಬೇಕು; ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು: ಮಕ್ಕಳು ಹೆತ್ತವರ ಮಾತನ್ನು ಕೇಳಬೇಕು. ಯಾವಾಗಲೂ ಹಿರಿಯರ ಮಾರ್ಗದರ್ಶನದಲ್ಲಿಯೇ ಜೀವನ ನಿರ್ವಹಣೆ ಮಾಡಬೇಕು ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು.ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಉತ್ತರಾದಿ ಮಠವು ಮೈಸೂರಿನ ಅಗ್ರಹಾರದ ಕಾಶಿ ವಿಶ್ವೇಶ್ವರ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಧರ್ಮ ಸಭೆಯಲ್ಲಿ ಅವರು ಭಾಗವತ ಸಂದೇಶ ನೀಡಿದರು.ಗೋಕುಲದಲ್ಲಿ ಬೆಳೆಯುತ್ತಿದ್ದ ಶ್ರೀ ಕೃಷ್ಣ, ಎಲ್ಲರ ಮನೆಯಲ್ಲಿ ಮೊಸರು, ಬೆಣ್ಣೆ ಕದಿಯುತ್ತಿದ್ದ. ಯಾವ ವಸ್ತು ಅತ್ಯಂತ ಶ್ರೇಷ್ಠವೋ…

Read More