Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಹಿತಿ ಬನ್ನೂರು ರಾಜುಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪ್ರದಾನ


ಮೈಸೂರು: ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಮತ್ತು ಸಾಧನೆಗಾಗಿ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ ಪ್ರಸ್ತುತ 2026 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.
ಮೈಸೂರು ಜಿಲ್ಲಾಡಳಿತದಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಲು ಆಯ್ಕೆಗಿದ್ದ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರು ಪಾರ್ಶ್ವವಾಯುವಿನಿಂದ ಅನಾರೋಗ್ಯವಾಗಿದ್ದ ಕಾರಣ, ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮಕ್ಕೆ ಅವರು ಆಗಮಿಸಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಮೈಸೂರು ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ ಸುದರ್ಶನ್ ಅವರು, ಮೈಸೂರಿನ ಅಗ್ರಹಾರದಲ್ಲಿರುವ ಬನ್ನೂರು ಕೆ. ರಾಜು ಅವರ ಮನೆಗೆ ಭೇಟಿ ನೀಡಿ, ಅವರಿಗೆ ಮೈಸೂರು ಪೇಟ ತೊಡಿಸಿ , ಶಾಲು ಹೊದಿಸಿ , ಫಲ ತಾಂಬೂಲ ಸಹಿತ ಪ್ರಶಸ್ತಿ ಫಲಕ ನೀಡಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಚಳವಳಿಗಾರರಾದ ಅರವಿಂದ್ ಶರ್ಮ ಉಪಸ್ಥಿತರಿದ್ದರು.