3Kaala News

ಸುಭಾಷಿತ 

ಯಾವುದಕ್ಕಾಗಿ ಚಿಂತೆ ಯಾವುದಕ್ಕಾಗಿ ದುಃಖ ಪಡುತ್ತಿದ್ದಿ , ನೆನ್ನೆ ಇದ್ದ ಖುಷಿ ಇವತ್ತು ಇಲ್ಲ ಅಂದಮೇಲೆ ಇವತ್ತು ಇರೋದು ನಾಳೆ ಇರುತ್ತಾ? ಈ ಜಗತ್ತಿನ ಸೃಷ್ಟಿಯಲ್ಲಿ ಯಾವುದೂ ಕೂಡ ಶಾಶ್ವತ ಅಲ್ಲ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ಮೈಸೂರು; ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದರು.ಮೈಸೂರಿನ ಮೇಟಗಳ್ಳಿಯಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವಿನ ಪ್ರಕರಣಗಳ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ ಅವರು ಬುಧವಾರ ಜಯದೇವ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಅಧೀಕ್ಷಕರು, ಜಯಸಂಸ್ಥೆಯ…

Read More

ಮಾಡಿಕೊಂಡು ತಿಂದು ನೋಡಿ ರವೆ ವೆಜಿಟೇಬಲ್ ಟೋಸ್ಟ್, ರವೆ ಪಡ್ಡು, ರವೆ ದೋಸೆ

ಮಾಡಿಕೊಂಡು ತಿಂದು ನೋಡಿ ರವೆ ವೆಜಿಟೇಬಲ್ ಟೋಸ್ಟ್, ರವೆ ಪಡ್ಡು, ರವೆ ದೋಸೆಪ್ರತಿಯೊಂದು ಮಹಿಳೆ ಬೆಳಗ್ಗಿನ ಚಿಂತೆ ಎಂದರೆ ತಿಂಡಿ ಏನು ಮಾಡುವುದು ಎಂದು. ಇವತ್ತು ಯಾವ ತಿಂಡಿ ಮಾಡುವುದು, ನಾಳೆ ಏನು ಮಾಡುವುದು ಎಂದು ಚಿಂತಿಸುತ್ತಾರೆ. ಅಂತವರಿಗೆ ಏನೇನು ತಿಂಡಿ ಮಾಡಬಹುದು ಎಂಬ ರೆಸಿಪಿ ಇಲ್ಲಿದೆ ನೋಡಿ ಬೆಳಗಿನ ಉಪಹಾರವು ದಿನದ ಪ್ರಮುಖ ಊಟ. ಬೆಳಗ್ಗೆ ಆರೋಗ್ಯಕರ ತಿಂಡಿ ತಿಂದರೆ ದಿನವಿಡೀ ಉತ್ಸಾಹದಿಂದ ಇರಬಹುದು. ಹೀಗಾಗಿ ರವೆಯಿಂದ ಮಾಡಿರುವ ಆಹಾರ ತಿಂದರೆ ಇನ್ನೂ ಉತ್ತಮ. ಯಾಕೆಂದರೆ…

Read More

ಇನ್ನೊಬ್ಬರನ್ನು ಮಲಗೋಕೆ ಬಿಡಲ್ಲ

ಶಿವ ಜಗತ್ತನ್ನು ಸೃಷ್ಟಿ ಮಾಡಿ ಮಲಗಿಬಿಟ್ಟ ಬ್ರಹ್ಮ ಜೀವಗಳನ್ನು ಸೃಷ್ಟಿ ಮಾಡಿ ಮಲಗಿಬಿಟ್ಟ ಆದರೆ ಮನುಷ್ಯ ಇದ್ದಾನಲ್ಲ ಮೊಬೈಲ್ ಸೃಷ್ಟಿ ಮಾಡಿ ತಾನು ಮಲಗುವುದಿಲ್ಲ ಇನ್ನೊಬ್ಬರನ್ನು ಮಲಗೋಕೆ ಬಿಡಲ್ಲ

Read More

ವಿಪರೀತವಾದ ಫಸಲು ಬಿಡುವ ಮೂಲಕ ಭೀಕರ ಬರಗಾಲ ಬರುವ ಸೂಚನೆ ನೀಡ್ತಾ ನೇರಳೆ ಹಣ್ಣು !

ಬೆಂಗಳೂರು; ಮಧುಮೇಹ ಸೇರಿದಂತೆ ಹಲವಾರು ಅನಾರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿರುವ ನೇರಳೆ ಹಣ್ಣು,ಈ ಬಾರಿ ವಿಪರೀತ ಎನ್ನಿಸುವಷ್ಟು ಫಸಲು ಬಿಟ್ಟಿದೆ. ಕಳೆದ 30-40 ವರ್ಷಗಳಿಗಿಂತಲೂ ಈ ಬಾರಿ ಅಧಿಕ ಫಸಲು ಬಂದಿದೆ ಹೇಳಲಾಗುತ್ತಿದೆ. ಈ ರೀತಿ ವಿಪರೀತ ಎನಿಸುವಷ್ಟು ಫಸಲು ಬಿಟ್ಟಿರುವುದು ರೈತರಿಗೂ ಸಕತ್ ಆಶ್ಚರ್ಯವನ್ನುಂಟು ಮಾಡಿದೆ. ಆದರೆ ನೂರಾರು ವರ್ಷಗಳಿಂದ ಇರುವ ಗಾದೆ ಮಾತೊಂದು ಈ ವರ್ಷ ಹಿರಿಯರ ಬಾಯಲ್ಲಿ ಭಯಂಕಾರವಾದ ಸುದ್ದಿಯನ್ನು ಹೊರ ಹಾಕುತ್ತಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದೆ. ಅದೇನೆಂದರೆ, ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು…

Read More

ವಿದ್ಯಾರ್ಥಿಗಳು ಸಮಯ ಪರಿಪಾಲನೆಯನ್ನು ಓದಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು

ಮೈಸೂರು; ವಿದ್ಯಾರ್ಥಿಗಳು ಸಮಯ ಪರಿಪಾಲನೆಯನ್ನು ಓದಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಶಾರದಾವಿಲಾಸ ಸಂಸ್ಥೆಯ ಗೌರವ ಕಾರ್ಯದರ್ಶಿ ದಿನೇಶ್.ಆರ್ ಹೇಳಿದರು.ಮೈಸೂರಿನ ಶಾರದಾವಿಲಾಸ ಪದವಿಪೂರ್ವಕಾಲೇಜಿನ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ನವಿಶೇಷ ಸಿಇಟಿ ಬೋಧನಾ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕಾಲೇಜಿನಲ್ಲಿ ಸಿಗುವ ವಿಶೇಷ ಬೋಧನಾ ತರಗತಿಗಳ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಮುಂದೆ ಬರಬೇಕೆಂದು ತಿಳಿಸಿದರು. ತಾಳ್ಮೆಯಿಂದ ಏಕಾಗ್ರತೆಯಲ್ಲಿ ಓದಿನಲ್ಲಿ ತೊಡಗಿದಾಗ ಗುರಿಯನ್ನು ಹಾಗೂ ಜೀವನದಲ್ಲಿ ಯಶಸ್ಸನ್ನು ತಲುಪಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಿ ಮುಂಬರುವ…

Read More

14 ಮಂದಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ ಪ್ರತಿಭಟನೆ

ಮೈಸೂರು; ನಗರದಲ್ಲಿರುವ ಪೇಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್‌ನಲ್ಲಿ 8-25 ವರ್ಷ ಸೇವೆ ಸಲ್ಲಿಸಿದ 14 ಮಂದಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ, ಮೈಸೂರು ಡಿವಿಜನ್ ಯುನೈಟೆಡ್ ಇಂಡಸ್ಟಿçಯಲ್ ವರ್ಕಸ್ ಯೂನಿಯನ್‌ನಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.ಮೈಲ್ಯಾಕ್ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.ಮೈಸೂರು ಪೇಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್ (ಕರ್ನಾಟಕ ಸರ್ಕಾರದ ಉದ್ದಿಮೆ) ಸಂಸ್ಥೆಯಲ್ಲಿ ಶ್ರೀ ನಿಮಿಷಾಂಬಾ ಸೆಕ್ಯುರಿಟಿ ಬ್ಯೂರೋ & ಯುಟಿಲಿಟಿ ಸರ್ವೀಸಸ್ ಮೂಲಕ ಕಳೆದ 8 ರಿಂದ…

Read More

ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ

ಮೈಸೂರು; ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ ಎಂದು ಮೈಸೂರು ಜಿಲ್ಲೆ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತೆ ಟಿ ರಮ್ಯ ಹೇಳಿದರು.ಬುಧವಾರ ಮೈಸೂರಿನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಹೇಳಿದ ಅವರು ಯಾವ ಕೋರ್ಸ್ ಆಯ್ಕೆ ಮಾಡಿದರೆ…

Read More

ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿಫಲಾನುಭವಿಗಳು ಮೃತಪಟ್ಟಿದ್ದಾರೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು

ಮೈಸೂರು: ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿ ಫಲಾನುಭವಿಗಳು ಮೃತಪಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾಹಿತಿ ನೀಡಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಗೃಹ ಲಕ್ಷಿö್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 13,677 ಗೃಹಲಕ್ಷಿ÷್ಮ ಫಲಾನುಭವಿಗಳು ಮರಣ ಹೊಂದಿದ್ದಾರೆ. ಮನೆ – ಮನೆಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ನೀಡುತ್ತಿದ್ದಾರೆ. ಪರಿಶೀಲನೆ ಕೆಲಸವನ್ನು…

Read More

ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ ಪ್ರಾಂಜಲಿ ರಾಜ್ ಎ.

ಮೈಸೂರು: ಮೈಸೂರಿನ ಜೆಎಸ್‌ಎಸ್ ಲೇಔಟ್ 2ನೇ ಹಂತದ ಪುಟ್ಟ ಪ್ರತಿಭೆ ಪ್ರಾಂಜಲಿ ರಾಜ್ ಎ. ಅವರು ತಮ್ಮ ಅದ್ಭುತ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕೇವಲ 2 ವರ್ಷ 8 ತಿಂಗಳ ವಯಸ್ಸಿನಲ್ಲೇ, 22 ಕನ್ನಡ ಹಾಡುಗಳನ್ನು ಹಾಡಿದ ಸಾಧನೆಗಾಗಿ “ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ 2026” ಪ್ರಶಸ್ತಿ ಪಡೆದ ಮೊದಲ ಬಾಲ ಪ್ರತಿಭೆಯಾಗಿದ್ದಾರೆ.ಇದರ ಜೊತೆಗೆ, ಅತಿ ಹೆಚ್ಚು ಕನ್ನಡ ಹಾಡುಗಳನ್ನು ಹಾಡಿದ ಪುಟ್ಟ ಮಗುವೆಂಬ ದಾಖಲೆಯೊಂದಿಗೆ “ಇಂಡಿಯಾ ಬುಕ್ ಆಫ್ ರೆಕಾರ್ಡ್್ಸ 2024″ರಲ್ಲಿ ಸ್ಥಾನ ಪಡೆದು…

Read More

ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು

ಮೈಸೂರು; ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆದ ಅಗ್ನಿ ಅವಘಡದ ಸಂಬAಧ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು ಮಾಡಲಾಗಿದೆ.ಮೈಸೂರಿನ ದಟ್ಟಗಳ್ಳಿ 3 ನೇ ಹಚಿತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನ ಕಟ್ಟಡದ ರೂಪ್ ಟಾಪ್ ನಲ್ಲಿ ಅನುಮತಿ ಪಡೆಯದೆ ಒಣ ಹುಲ್ಲು ಮತ್ತು ಗರಿಗಳಿಂದ ನಿರ್ಮಿಸಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿದ್ದು, ಈ ಸಂಬAಧ ಪರಿಶೀಲಿಸದೆ ಕರ್ತವ್ಯ…

Read More