ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ
ಮೈಸೂರು; ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದರು.ಮೈಸೂರಿನ ಮೇಟಗಳ್ಳಿಯಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವಿನ ಪ್ರಕರಣಗಳ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ ಅವರು ಬುಧವಾರ ಜಯದೇವ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಅಧೀಕ್ಷಕರು, ಜಯಸಂಸ್ಥೆಯ…