ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಆಗಬೇಕು; ಶಾಸಕ ಟಿ.ಎಸ್.ಶ್ರೀವತ್ಸ
ಮೈಸೂರು; ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಆಗ್ರಹಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಗೂ ಕೂಡ ಮತ ಚಲಾವಣೆ ಮಾಡುವಂತೆ ಪಕ್ಷದಿಂದ ಸ್ಪಷ್ಟವಾದ ಆದೇಶವನ್ನು ನೀಡಲಾಗಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಅಡ್ಡ ಮತದಾನವನ್ನು ಮಾಡಲಾಗಿದೆ. ಯಾರ್ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷರು ಪತ್ತೆ ಹಚ್ಚಿದ್ದಾರೆ. ಈ…