3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಿಜೆಪಿ ಎಸ್ ಟಿ ಮೋರ್ಚಾ ವತಿಯಿಂದ ಜುಲೈ 7 ರಂದು ಮೈಸೂರಿನಲ್ಲಿ ಜಾಗೃತಿ ಸಮಾವೇಶ

ಮೈಸೂರು; ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ ಟಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತ ಬಂದಿದ್ದು, ಎಸ್ ಟಿ ಸಮುದಾಯಕ್ಕೆ ಸಂವಿಧಾನ ಬದ್ಧ ಶೇ 7ರ ಮೀಸಲಾತಿ ಜಾರಿಯಾಗಲೇ ಬೇಕೆಂದು ರಾಜ್ಯ ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಅದರಂತೆ ಮೈಸೂರಿನಲ್ಲಿಯೂ ಜುಲೈ ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ. ಅದರ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಎಸ್ ಟಿ ಮೋರ್ಚಾ ಪದಾಧಿಕಾರಿಗಳ ಮೈಸೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ…

Read More

ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ; ಶ್ರೀಹರಿ

ಮೈಸೂರು; ನಗರದ ಶಾರದಾ ವಿಲಾಸ ಫಾರ್ಮಸಿ ಕಾಲೇಜು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ 12 ದಿನಗಳ ಯೋಗ ಶಿಬಿರದ ಸಮಾರೋಪ ಸಮಾರಂಭವನ್ನು ನಗರದ ಶಾರದಾ ವಿಲಾಸ ಮೈದಾನದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಗೌರವ ಅಥಿತಿಗಳಾಗಿ ಆಗಮಿಸಿದ್ದ ಜಿಎಸ್‍ಎಸ್ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ ಮಾತನಾಡಿ, ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ. ಭಾರತದಲ್ಲಿ ಮಾತ್ರವಲ್ಲ ಬೇರೆ ದೇಶಗಳಲ್ಲೂ ವ್ಯಾಪಕವಾಗಿ ಯೋಗ ಅಭ್ಯಾಸ ಮಾಡಲಾಗುತ್ತಿದ್ದು ಆರೋಗ್ಯ ವರ್ಧನೆಗೆ ತುಂಬಾ ಅನುಕೂಲ ಆಗಿದೆ. ಇದು ಕೇವಲ ದೈಹಿಕ ಕಸರತ್ತಾಗದೆ…

Read More

ಕಾಲಾವಕಾಶ ನೀಡದೆ ವ್ಯಾಪಾರ ಸ್ಥಗಿತ ಆದೇಶ ಸರಿಯಲ್ಲ; ಸಿ.ನಾರಾಯಣಗೌಡ

ಮೈಸೂರು: ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಒಂದು ಪಬ್‍ನಲ್ಲಿ ಸಂಭವಿಸಿದ ಅಗ್ನಿ ದುರಂತದ ಘಟನೆಯ ನಂತರ ಮೈಸೂರು ಮಹಾನಗರ ಪಾಲಿಕೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಏಕಾಏಕಿ ಅನೇಕ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ಪರಿಶೀಲನೆ ನಡೆಸಿ, ಕೆಲವು ಸಂಸ್ಥೆಗಳನ್ನು ತಕ್ಷಣವೇ ಮುಚ್ಚಲು ಸೂಚಿಸಿರುವುದು ಉದ್ಯಮಿಗಳಿಗೆ ತೀವ್ರ ಸಂಕಷ್ಟವನ್ನು ಉಂಟುಮಾಡಿದೆ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೈಸೂರು ನಗರ ತನ್ನ ಸಾಂಸ್ಕೃತಿಕ ಪರಂಪರೆ ಮತ್ತು…

Read More

ಮೈಸೂರು ರೈಲ್ವೆ ವಿಭಾಗದಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಅಂತರರಾಷ್ಟ್ರೀಯ ಯೋಗ ದಿನವನ್ನು ಇಂದು ಮೈಸೂರು ರೈಲ್ವೆ ಸಮುದಾಯ ಭವನದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಮಾತನಾಡಿ, ಆರೋಗ್ಯಕರ ಮತ್ತು ಸಮತೋಲನಯುತ ಸಮಾಜ ನಿರ್ಮಾಣದಲ್ಲಿ ಯೋಗದ ಮಹತ್ವವನ್ನು ತಿಳಿದರು. ಯೋಗವು ದೈಹಿಕ ಆರೋಗ್ಯ, ಮಾನಸಿಕ ಸಮತೋಲನ ಮತ್ತು ಆಂತರಿಕ ಶಾಂತಿಯನ್ನು ಉತ್ತೇಜಿಸುವ ಸಮಗ್ರ ವಿಧಾನವಾಗಿದ್ದು, ಸಮತೋಲನಯುತ ಹಾಗೂ ಅರ್ಥಪೂರ್ಣ ಜೀವನಶೈಲಿಗೆ ಸಹಕಾರಿಯಾಗಿದೆ ಎಂದು ಹೇಳಿದರು.ಇಂದಿನ ವೇಗದ ಮತ್ತು ಒತ್ತಡಭರಿತ ಜೀವನಶೈಲಿಯನ್ನು ಗಮನದಲ್ಲಿಟ್ಟುಕೊಂಡು, ಉತ್ತಮ ಆರೋಗ್ಯ, ಮಾನಸಿಕ…

Read More

ಕರಾಮುಕ್ತ ವಿವಿಯಲ್ಲಿ ಯೋಗ ದಿನಾಚರಣೆ

ಮೈಸೂರು; ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕರಾಮುಕ್ತ ವಿವಿಯ ಡೀನ್ ಪೆÇ್ರ. ಎಂ ರಾಮನಾಥಂ ನಾಯುಡು ಮಾತನಾಡಿ,ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವ ಉಪಯೋಗ ವಿಶೀಷ್ಟತೆ ಬಗ್ಗೆ ತಿಳಿಸಿದರು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ರಾಧ ಎಂ.ಡಿ ಮಾತನಾಡಿ, ಪ್ರಸ್ತುತ ವಿದ್ಯಾಮಾನಗಳಿಗೆ ಯೋಗ ಎಷ್ಟು ಅವಶ್ಯಕತೆ ಎಂಬುದನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಲಸಚಿವ ಪೆÇ್ರ.ನವೀನ್ ಕುಮಾರ್ ಎಸ್ ಕೆ ಮಾತನಾಡಿ, ತಾಳ್ಮೆ, ಏಕಾಗ್ರತೆಗೆ ಯೋಗ ಎಷ್ಟು ಪರಿಣಾಮಕಾರಿ…

Read More

ಯೋಗದ ಮೂಲಕ ಸಮುದಾಯ ಸೌಹಾರ್ದತೆ:ಮೈಸೂರಿನ ಜೆ.ಪಿ.ನಗರದಲ್ಲಿ ಬೀದಿ ಮಕ್ಕಳು ಮತ್ತು ಮಹಿಳೆಯರಿಂದ `ಮನೆ ಮನೆಗೂ ಯೋಗ’ ಕಾರ್ಯಕ್ರಮ

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೈಸೂರಿನ ಜೆ.ಪಿ.ನಗರ 2ನೇ ಹಂತದ 15ನೇ ಕ್ರಾಸ್, 24ನೇ ಮುಖ್ಯರಸ್ತೆಯಲ್ಲಿ ಇಂದು ಮನೆ ಮನೆಗೂ ಯೋಗ” ಎಂಬ ವಿಶಿಷ್ಟ ಸಮುದಾಯ ಯೋಗ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೀದಿ ಮಕ್ಕಳು, ಮಹಿಳೆಯರು, ಯುವಕರು ಹಾಗೂ ಸ್ಥಳೀಯ ನಿವಾಸಿಗಳು ಉತ್ಸಾಹದಿಂದ ಭಾಗವಹಿಸಿ ಯೋಗದ ಮೂಲಕ ಆರೋಗ್ಯ, ಸೌಹಾರ್ದತೆ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದರು. ಬೀದಿಯಲ್ಲಿಯೇ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ವಿಶ್ರಾಂತಿ ವಿಧಾನಗಳನ್ನು…

Read More

ಮೌನ ಹಾಗೂ ನಿರಂತರ ಪ್ರಯತ್ನವೇ ನಿಜವಾದ ಯೋಗ: ದತ್ತ ಪೀಠದ ಕಿರಿಯಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ

ಮೈಸೂರು: ಯೋಗದ ಮೊದಲನೇ ಲಕ್ಷಣವೇ ನಿಶ್ಯಬ್ದ ಮತ್ತು ಮೌನ. ಯಾವುದೇ ಕೆಲಸವನ್ನು ಆಯಾ ಕಾರ್ಯಕ್ಕೆ ತಕ್ಕಂತೆ ಶ್ರದ್ಧೆಯಿಂದ ಮಾಡುವುದೇ ನಿಜವಾದ ಯೋಗ ಎಂದು ಮೈಸೂರಿನ ಅವಧೂತ ದತ್ತ ಪೀಠದ ಕಿರಿಯ ಪೀಠಾಧಿಪತಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಹೇಳಿದರು.ವಿಶ್ವ ಯೋಗ ದಿನಾಚರಣೆ ಹಾಗೂ ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ ಮೈಸೂರಿನ ಅವಧೂತ ದತ್ತ ಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಯೋಗಾಭ್ಯಾಸ ಹಾಗೂ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದ ಹಾಗೂ ಆದೇಶದಂತೆ…

Read More

ನಾಯಕ ಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು ಶ್ರೀ ಶ್ರೀ.ಪ್ರಸನ್ನಾನಂದ ಪುರಿ ಸ್ವಾಮೀಜಿ

ಚಾಮರಾಜನಗರ. ಜೂನ್ 21; ನಾಯಕ ಜನಾಂಗ ನಿಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ ಅವರ ಭವಿಷ್ಯ ಉಜ್ವಲ ಮಾಡಿ ಎಂದು ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನ ನಂದ ಪುರಿ ಮಹಾಸ್ವಾಮಿಜಿ ಕರೆ ನೀಡಿದರುರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ನಾಯಕ ಜನಾಂಗ ವಾಸ ಮಾಡುತ್ತಿದ್ದೇವೆ ತಮ್ಮ ಮಕ್ಕಳ ಭವಿಷ್ಯ ಉಜ್ವಲಕ್ಕಾಗಿ ಪೋಷಕರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮುಖ್ಯ ವಾಹಿನಿಗೆ ತರಬೇಕೆಂದು ತಿಳಿಸಿದವರುರಾಮಸಮುದ್ರದ ನಾಯಕರ…

Read More

ಮೈ. ಚ. ಜಯದೇವರ ಬದುಕು ನೆನಪು ಪುಸ್ತಕ ಲೋಕಾರ್ಪಣೆ

ಮೈಸೂರು; ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಮೈಸೂರು ಜಿಲ್ಲಾ ಸಮಿತಿ, ಮಂಥನ, ವನವಾಸಿ ಕಲ್ಯಾಣ ಮತ್ತು ಜನಜಾಗರಣ ಟ್ರಸ್ಟ್ ಇವರ ಸಂಯುಕ್ತ ಪ್ರಾಯೋಜಕತ್ವದಲ್ಲಿ ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಮಾಧವ ಕೃಪಾದಲ್ಲಿ ಅವಿಶ್ರಾಂತ ಧ್ಯೇಯಜೀವಿ ಮೈ. ಚ. ಜಯದೇವರ ಬದುಕು ನೆನಪು ಪುಸ್ತಕ ಲೋಕಾರ್ಪಣೆ ಗೊಂಡಿತು.ಈ ಸಂದರ್ಭದಲ್ಲಿ ಜ್ಯೇಷ್ಠ ಸಂಘ ಪ್ರಚಾರಕ ಸು.ರಾಮಣ್ಣ ಮಾತನಾಡಿ, ಸಂಘ ಸರ ಸಂಚಾಲಕ ಡಾ. ಹೆಡ್ಗೆ ಜೀ ಅವರು ಹೀಗೆ ಬಾಳಿದರು ಎಂದು ಹೇಳುವ ಅಸಂಖ್ಯಾತ ಸಾಧಕರು ಸಂಘದಲ್ಲಿ ಇದ್ದಾರೆ….

Read More

ಯೋಗದ ತವರೂರು ಮೈಸೂರಿನ ವಿವಿಧೆಡೆ ಸಂಭ್ರಮದಿಂದ ನಡೆದ ಯೋಗ ದಿನಾಚರಣೆ

ಮೈಸೂರು: ಯೋಗದ ತವರೂರು ಎಂದು ಹೆಸರಾಗಿರುವ ಅರಮನೆ ನಗರಿ ಮೈಸೂರಿನಲ್ಲಿ ಭಾನುವಾರ ವಿವಿಧೆಡೆ, ವಿವಿಧ ಸಂಘ, ಸಂಸ್ಥೆಗಳಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕೇಂದ್ರದ ಮುಂಭಾಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮತ್ತು ಆಯುಷ್ ಇಲಾಖೆ ಮೈಸೂರು ಇವರ ಜಂಟಿ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…

Read More