ಸಂಸದ ಯದುವೀರ್ ಒಡೆಯರ್ರಿಂದ ಇಂದು ಕೇಂದ್ರ ಸರ್ಕಾರದ ಯೋಜನೆಗಳ ಮೇಳ ಆಯೋಜನೆ
ಮೈಸೂರು: ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಸರ್ಕಾರದ ಯೋಜನೆಗಳ ಮೇಳವನ್ನು ಜೂನ್ 23 ರಂದು ಬೆಳಿಗ್ಗೆ 9:30 ಗಂಟೆಯಿಂದ ಕಾಡಾ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಆಯೋಜಿಸಿದ್ದಾರೆ.ಈ ಮೇಳದಲ್ಲಿ ಕೇಂದ್ರ ಸರ್ಕಾರದ ಹಲವು ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿ, ಯೋಜನೆಗಳ ಪ್ರಯೋಜನಗಳನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು…