Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಧನೆಯ ಹಾದಿ ಸುಲಭದ್ದಲ್ಲ, ತಯಾರಿ ಕಠಿಣವಾಗಿರಲಿ: ಡಿಸಿಪಿ ಹರ್ಷ ಪ್ರಿಯಂವದ

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ
ಮೈಸೂರು: “
ಸಾಧನೆಯ ಹಾದಿ ಸುಲಭದ್ದಲ್ಲ; ಕಷ್ಟಪಟ್ಟು ಶ್ರಮಿಸಿದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎಂದು ಮೈಸೂರು ನಗರ ಪೊಲೀಸ್ ಉಪ ಆಯುಕ್ತೆ ಡಾ. ಹರ್ಷ ಪ್ರಿಯಂವದ ತಿಳಿಸಿದರು
ಗುರುವಾರ ಮೈಸೂರಿನ ಮುಕ್ತ ಗಂಗೋತ್ರಿಯಲ್ಲಿರುವ ಗಂಗಾ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು,
ಪದವಿ ಮುಗಿಯುವ ಮುನ್ನವೇ ನಾವು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಸ್ಪಷ್ಟತೆ ಇರಬೇಕು. ಮೊದಲ ಬಾರಿ ವಿಫಲರಾದರೂ ಧೃತಿಗೆಡದೆ, ಕ್ರಮಬದ್ಧ ಅಧ್ಯಯನ ಮುಂದುವರಿಸಿದರೆ ಯಶಸ್ಸು ಖಚಿಡಿತ ಎಂದು ಹೇಳಿದರು.
“ನನ್ನ ತಂದೆ-ತಾಯಿ ಇಬ್ಬರೂ ವೈದ್ಯರಾಗಿದ್ದರಿಂದ ನಾನು ವೈದ್ಯಕೀಯ ಕ್ಷೇತ್ರ ಆರಿಸಿಕೊಳ್ಳಬೇಕೆಂಬ ಆಸೆ ಅವರದಾಗಿತ್ತು. ಆದರೆ, ನನಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಒಲವಿದ್ದಿದ್ದರಿಂದ ಯುಪಿಎಸ್ಸಿ ಪರೀಕ್ಷೆಗೆ ಪೂರ್ಣ ಸಿದ್ಧತೆ ನಡೆಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ನಮ್ಮ ಬದುಕನ್ನೇ ಬದಲಿಸುತ್ತವೆ. ಇವುಗಳನ್ನು ಎದುರಿಸುವ ವಿದ್ಯಾರ್ಥಿಗಳು ನಿಗದಿತ ವಿಷಯಗಳ ಜೊತೆಗೆ ನಿಯಮಿತವಾಗಿ ದಿನಪತ್ರಿಕೆಗಳನ್ನು ಓದಬೇಕು. ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಪುಸ್ತಕಗಳು ಲಭ್ಯವಿದ್ದು, ಅವುಗಳನ್ನು ಓದಿ ಮನನ ಮಾಡಿಕೊಳ್ಳಬೇಕು” ಎಂದು ತಮ್ಮ ಯಶಸ್ಸಿನ ಹಾದಿಯನ್ನು ನೆನಪಿಸಿಕೊಂಡರು.
ಇAದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ಜ್ಞಾನದ ಹರವನ್ನು ವಿಸ್ತರಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೈನಂದಿನ ಪಠ್ಯಗಳ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದ ಪುಸ್ತಕಗಳನ್ನು ಕಡ್ಡಾಯವಾಗಿ ಅಧ್ಯಯನ ಮಾಡಬೇಕು ಎಂದು ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದರು.
ಕಾರ್ಯಕ್ರಮದಲ್ಲಿ ‘ಮುಕ್ತಭಂಡಾರ’ ಎಂಬ ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ಇಂತಹ ತರಬೇತಿ ಶಿಬಿರಗಳು ಎಲ್ಲಾ ವಿಷಯಗಳ ಸಮಗ್ರ ಅಧ್ಯಯನಕ್ಕೆ ಉತ್ತಮ ವೇದಿಕೆಯಾಗಲಿವೆ.ಕಲಾ, ವಾಣಿಜ್ಯ ಮತ್ತು ವಿಜ್ಞಾನ ಹೀಗೆ ಯಾವುದೇ ವಿಭಾಗದ ಹಿನ್ನೆಲೆಯುಳ್ಳವರಿಗೂ ಇದು ಸಹಕಾರಿಯಾಗಿದೆ.ಇದು ಕೇವಲ ಪರೀಕ್ಷೆಗಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ.ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವಾಗ ಸಾಮಾಜಿಕ ಸಮಸ್ಯೆಗಳನ್ನು ಸೂಕ್ಷ÷್ಮವಾಗಿ ಅರ್ಥೆÊಸಿಕೊಂಡು ಪರಿಹಾರ ಕಂಡುಕೊಳ್ಳಲು ಇಂತಹ ಅಧ್ಯಯನಗಳು ಪೂರಕವಾಗಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಾಮುವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿ, “ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿಯನ್ನು ಹೊಂದಿರಬೇಕು. ತಾವು ಏನನ್ನು ಸಾಧಿಸಬೇಕೆಂದುಕೊAಡಿದ್ದಾರೋ, ಅದನ್ನು ಮನಸ್ಸಿನಲ್ಲಿ ದೃಢವಾಗಿ ಸಂಕಲ್ಪಿಸಿ ಶ್ರದ್ಧೆಯಿಂದ ತಯಾರಿ ನಡೆಸಬೇಕು” ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕರಾಮುವಿ ಪರೀಕ್ಷಾಂಗ ಕುಲಸಚಿವ ಡಾ. ಸಿ.ಎಸ್. ಆನಂದಕುಮಾರ್, ಹಣಕಾಸು ಅಧಿಕಾರಿ ಡಾ. ಎಸ್. ನಿರಂಜನ್ ರಾಜ್, ಡಾ. ಶೈಲೇಶ ರಾಜ್ ಅರಸ್, ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರು ಹಾಗೂ ಬಿ. ಗಣೇಶ್ ಕೆ.ಜಿ. ಕೊಪ್ಪಲು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು

—ಕೋಟ್—–
ಪಠ್ಯದ ಜೊತೆಗೆ ಜ್ಞಾನವ ಗಳಿಸಿ,
ಸೋಲಿಗೆ ಹೆದರದೆ ಛಲವನು ಬೆಳೆಸಿ;
ಕ್ರಮಬದ್ಧ ಅಧ್ಯಯನ ನಿರಂತರವಿರಲಿ,
ಶ್ರಮದ ಹಾದಿಯಲಿ ಯಶಸ್ಸು ಸಿಗಲಿ!
-ಡಾ. ಹರ್ಷ ಪ್ರಿಯಂವದ, ಮೈಸೂರು ನಗರ ಪೊಲೀಸ್ ಉಪ ಆಯುಕ್ತೆ