ಎಸ್.ಸಿ.ಬಸವರಾಜುಗೆ ವಿಧಾನ ಪರಿಷತ್ ಸ್ಥಾನ ಮತ್ತು ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ದೇವರಾಜ್ ಟಿ.ಕಾಟೂರು ಒತ್ತಾಯ
ಮೈಸೂರು; ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಸಿ.ಬಸವರಾಜು ಅವರಿಗೆ ವಿಧಾನಪರಿಷತ್ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ.ಕಾಟೂರು ಒತ್ತಾಯಿಸಿದರು.ಮಂಗಳವವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದ ನಾಯಕ ಸಮಾಜದವರಿಗೆ ಸ್ವಾತಂತ್ರ ನಂತರದಿAದಲ್ಲೂ ಕಾಂಗ್ರೇಸ್ ಪಕ್ಷದಿಂದ ವಿಧಾನ ಪರಿಷತ್ ಸ್ಥಾನ ನೀಡದೆ, ರಾಜಕೀಯ ಅನ್ಯಾಯ ಮಾಡಿರುವ ಕಾಂಗ್ರೇಸ್ ಹೈಕಮಾಂಡ್, ಈ ಅನ್ಯಾಯವನ್ನು…