3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು; ಸೀತಾರಾಮ್

ಮೈಸೂರು : ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಶಿವಯೋಗಿಸಿದ್ದರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ಕಾಂಗ್ರೆಸ್ ವರಿಷ್ಠರು ಹಾಗೂ ಮುಖ್ಯಮಂತ್ರಿಗಳನ್ನು ಆಗ್ರಹ ಮಾಡುತ್ತದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವೊ ಸೀತಾರಾಮ್ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸಾಮಾಜಿಕವಾಗಿ, ಕರ್ನಾಟಕದಲ್ಲಿ ಭೋವಿ (ಒಡ್ಡರು) ಸಮುದಾಯವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಸಮುದಾಯದ ಏಳಿಗೆಗಾಗಿ ಸರ್ಕಾರದಲ್ಲಿ ಸೂಕ್ತ ಪ್ರಾತಿನಿದ್ಯದ ಅಗತ್ಯವಿದೆ ಎಂಬುದು ನಮ್ಮ ಮತ್ತು ಸಮುದಾಯದ…

Read More

ತಾಲೂಕು ನಾಯಕರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು : ಮೈಸೂರು ತಾಲೂಕು ನಾಯಕರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಉದ್ಬೂರು ಮಹದೇವ ಸ್ವಾಮಿ ಹೇಳಿದರುನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಕೂಡ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 80% ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ…

Read More

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು: ಪ್ರಧಾನಿಯಾಗಿ ನರೇಂದ್ರ ಮೋದಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮೋದಿಯವರ ಪರವಾಗಿ ಅಭಿನಂದನ ಜಾಥಾ, ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಕಾರ್ಯಕ್ರಮಗಳು ನಡೆದವು.ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ನಗರದ ಅಗ್ರಹಾರ ಸರ್ಕಲ್ ನಿಂದ 101 ಗಣಪತಿ ದೇವಸ್ಥಾನದವರೆಗೆ ಜಾಥಾ ನಡೆದಿದ್ದು, ಪ್ರಧಾನಿ ಮೋದಿ ಅವರ ಪರವಾಗಿ ಘೋಷಣೆ ಕೂಗಿ ಶುಭ ಹಾರೈಸಲಾಯಿತು. ಹಾಗೆಯೇ ನರೇಂದ್ರ ಮೋದಿಯವರ ಹೆಸರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಮಾಡಲಾಯಿತು.ಬಳಿಕ ಮಾತನಾಡಿದ ಶಾಸಕ ಟಿ.ಎಸ್. ಶ್ರೀವತ್ಸ, ಪ್ರಧಾನಿಯಾಗಿ ಮೋದಿಯವರು ದೀರ್ಘಾವಧಿಗೆ…

Read More

ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ…

Read More

ಸ್ವಯಂ ಪ್ರೇರಿತ ರಕ್ತದಾನ ಮಾಡಿ ಜಾಗೃತಿ ಮೂಡಿಸಿದ  ಶಾಸಕ ಅನಿಲ್ ಚಿಕ್ಕಮಾದು

ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ ಮೈಸೂರು: ರಕ್ತದಾನ ಮಾಡುವುದರಿಂದ ಆರೋಗ್ಯ ಮತ್ತಷ್ಟು ಉತ್ತಮವಾಗುತ್ತದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಹೇಳಿದರುಬುಧವಾರ ಮೈಸೂರು ನಗರದ ನ್ಯೂ ಸಯಾಜಿರಾವ್  ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ ಭೇಟಿ ನೀಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ  ಯುವಕರಲ್ಲಿ ರಕ್ತದಾನ ಜಾಗೃತಿ ಮೂಡಿಸಿದರು. ಬಳಿಕ ಮಾತನಾಡಿದ ಅವರು, ದಾನಗಳಲ್ಲಿ ಶ್ರೇಷ್ಠ ದಾನ ಎಂದರೆ ಅದು ರಕ್ತದಾನ.  ರಕ್ತದಾನಕ್ಕೆ ಯಾರು ಬೆಲೆ ಕಟ್ಟಲು ಸಾಧ್ಯವಿಲ್ಲ. ರಕ್ತದಾನ ಮಾಡಿದರೆ ಆರೋಗ್ಯ…

Read More

ನಿರುಪಯುಕ್ತ ಹಾಳೆಗಳಿಂದ ತಯಾರಿಸಿದ ನೋಟ್ ಪುಸ್ತಕ ವಿತರಣೆ

ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ನಿತೀಶ್ ಪಾಟೀಲ್‌ರಿಂದ ಶಾಲಾ ಮಕ್ಕಳಿಗೆ ಹಸ್ತಾಂತರಮೈಸೂರು; ಸಾರ್ವಜನಿಕ ಗ್ರಂಥಾಲಯ ಇಲಾಖೆ, ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯ, ಬಾಲ್ಯ ಫೌಂಡೇಷನ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೋಟ್ ಪುಸ್ತಕಗಳ ಬಳಕೆಯಾಗದ ಹಾಳೆಗಳನ್ನು ಮರುಬಳಕೆ ಮಾಡಿಕೊಂಡು ತಯಾರಿಸಿದ ನೋಟ್ ಪುಸ್ತಕಗಳನ್ನು ನಗರದ ನಾನಾ ಶಾಲೆಗಳ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ನೋಟ್ ಪುಸ್ತಕಗಳಲ್ಲಿ ಬಳಕೆಯಾಗದೇ ಉಳಿಯುವ ಖಾಲಿ ಪುಟಗಳು ಮತ್ತೊಬ್ಬರ ಶೈಕ್ಷಣಿಕ ಅಭ್ಯಾಸಕ್ಕೆ ದಾರಿ ದೀಪವಾಗಬಲ್ಲದು. ಹಾಗಾಗಿ ಅಂತಹ ಖಾಲಿ ಪುಟಗಳನ್ನು ಸಂಗ್ರಹಿಸಿ, ಅದಕ್ಕೆ ಪುಸ್ತಕ ರೂಪ ನೀಡಿ,…

Read More

ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಶ್ರೀನಿವಾಸ್

ಮೈಸೂರು; ಮಾದಕ ವಸ್ತುಗಳು ಹಾಗೂ ಡ್ರಗ್ಸ್ ಬಳಕೆ ಹಾಗೂ ಮಾರಾಟ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಮಾರಾಟ ಹಾಗೂ ಬಳಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂದು ಕರ್ನಾಟಕವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.ಬುಧವಾರ ಮೈಸೂರಿನ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲಿ ್ಲನಡೆದ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ…

Read More

ವಿಶ್ವ ಪರಿಸರ ದಿನ ಅಂಗವಾಗಿ ಸೋಲಾರ್ ಇಂಡಕ್ಷನ್ ಸ್ಟೌವ್‌ಗೆ ಚಾಲನೆ ನೀಡಿದ ಶಾಸಕ ಟಿ.ಎಸ್. ಶ್ರೀವತ್ಸ

ಮೈಸೂರು: ಸನ್ ಪ್ರೀತ್ ಸಸ್ಟೆöÊನೆಬಿಲಿಟಿ ಸೊಲ್ಯೊಷನ್ಸ್ ಸಂಸ್ಥೆಯು ವಿನ್ಯಾಸಗೊಳಿಸಿರುವ ಗೃಹ ಬಳಕೆಯ ಸೋಲಾರ್ ಇಂಡಕ್ಷನ್ ಸ್ಟೌವ್ ಗೆ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರು ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಸಂಪೂರ್ಣ ಸೌರ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸೋಲಾರ್ ಇಂಡಕ್ಷನ್ ಸ್ಟೌವ್ ಅನೇಕ ವಿಶೇಷತೆಗಳಿಂದ ಕೂಡಿದ್ದು, ಇದರಲ್ಲಿ ರಾತ್ರಿ ವೇಳೆಯೂ ಸೇರಿದಂತೆ ಮೂರೂ ಹೊತ್ತಿನ ಅಡುಗೆ ಮಾಡಬಹುದಾಗಿದೆ. ಸರಳ ವಿನ್ಯಾಸ ಮತ್ತು ಸುಲಭವಾಗಿ ಬಳಕೆ ಮಾಡಬಹುದಾದ ಮಾದರಿಯಾಗಿರುವ ಈ ಉಪಕರಣವನ್ನು ಮೊಬೈಲ್ ಆಪ್ ಮುಖಾಂತರವೂ ನಿಯಂತ್ರಿಸಬಹುದಾಗಿದೆ.ಪ್ರಸ್ತುತ…

Read More

ಯೋಗ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಇದೆ; ಶಿವಪ್ರಕಾಶ್

ಮೈಸೂರು; ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಯೋಗ ಶಿಕ್ಷಕರುಗಳ ಸ್ವಂತ ಮಾನ್ಯತೆಯನ್ನು ಪಡೆದಿದ್ದು, ಉದ್ಯೋಗಾವಕಾಶಗಳು ಇದೆ ಎಂದು ಪರಮಹಂಸ ಯೋಗ, ಮಹಾವಿದ್ಯಾಲಯ ಇಂಟರ್‌ನ್ಯಾಷನಲ್ ಯೋಗ ಸ್ಕೂಲ್‌ನ ಛೇರ್ಮನ್ ಶಿವಪ್ರಕಾಶ್ ತಿಳಿಸಿದರು.ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಐವೈಟಿ ಕೋರ್ಸ್ನ್ನು ನುರಿತ ತಜ್ಞರುಗಳ ಸಾರಥ್ಯದಲ್ಲಿ ಯೋಗಾಸನ, ಯೋಗಥೆರಷಿ ಪ್ರಣಾಯಾಮ, ಧ್ಯಾನ ಮುದ್ರಾಥೆರಪಿ, ಯೋಗಶಾಸ್ತç, ಪತಂಜಲಿ ಯೋಗ ಸೂತ್ರ ಅನಾಟಮಿ ಪಿಸಿಯಾಲಜಿ, ಕಲಿಯುವ ವಿಧಾನ, ಕಲಿಸುವ ಕಲೆ, ಆಹಾರಕ್ರಮ ಮನೆ ಮದ್ದು, ಜೀವನ ಕೌಶಲ್ಯ, ಧನಾತ್ಮಕ…

Read More

ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದರು.ಮಂಗಳವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಪಿಟಿಶಿಯನ್ ಹಾಕಿದ್ದಕ್ಕೆ ತಿಂಗಳಿಗೆ 170 ಟಿಎಂಸಿ ನೀರು ಬಿಟ್ಟು, ಉಳಿದ ನೀರನ್ನು ಕರ್ನಾಟಕ ರಾಜ್ಯ ಬಳಕೆ ಮಾಡಿಕೊಳ್ಳುವುದಕ್ಕೆ ಮುಕ್ತ ಅವಕಾಶ ನೀಡಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿ ಪರಿಸರ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಸರ್ಕಾರಕ್ಕೆ…

Read More