Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ ಅನುಮತಿ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ನಿ0ದ ಪ್ರತಿಭಟನೆ ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ ಅನುಮತಿ ನೀಡಬೇಕೆಂದು ಆಗ್ರಹಿಸಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ನಗರದ ಚಿಕ್ಕ ಗಡಿಯಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಮಾತನಾಡಿ, ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ…

Read More

ಕಬಿನಿ ನಾಲೆಗೆ ನೀರು ಕೂಡಲೇ ನೀರು ಹರಿಸಲು ರೈತರ ಒತ್ತಾಯ

ಮೈಸೂರು; ಕಬಿನಿ ಜಲಾಶಯದ ಅಚ್ಚು ಕಟ್ಟು ವ್ಯಾಪ್ತಿಯ ರೈತರು ಸಂಕಷ್ಟದಲ್ಲಿದ್ದು, ದನ, ಕುರುಗಳಿಗೆ ಕುಡಿಯುವ ನೀರು ಮೇವು ತುಂಬಾ ತೊಂದರೆಯಾಗಿದೆ. ಕೆರೆಕಟ್ಟೆಗಳು ಒಣಗಿವೆ . ಆದ್ದರಿಂದ ಕೂಡಲೇ ಕಬಿನಿ ನಾಲೆಗಳಿಗೆ ಕೂಡಲೇ ನೀರು ಹರಿಸುವಂತೆ ರಾಜ್ಯ ಸರ್ಕಾರವನ್ನು ಜಿಲ್ಲೆಯ ತಿ. ನರಸೀಪುರದಲ್ಲಿ ಶುಕ್ರವಾರ ನಡೆದ ರೈತರ ಸಭೆಯಲ್ಲಿ ಒತ್ತಾಯಿಸಲಾಯಿತು.ಕಾವೇರಿ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಕೇವಲ ಸರ್ವ ಪಕ್ಷದ ಮುಖಂಡರನ್ನು ಕರೆದರೆ ಸಾಕಾಗಲ್ಲ. ಕಾವೇರಿ ವ್ಯಾಪ್ತಿಯ ರೈತ ಮುಖಂಡರು ನೈಜ್ಯ ಸಮಸ್ಯೆಗಳನ್ನ ಅರಿತಿರುವ ಕಾರಣ,…

Read More

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಪ್ರತಾಪ್ ಸಿಂಹ ಸ್ಪರ್ಧಿಸಲಿ; ಕಾಂಗ್ರೆಸ್ ಶಾಸಕ ಹರೀಶ್‌ಗೌಡ ಸವಾಲು

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಮಾಜಿ ಸಂಸದ ಪ್ರತಾಪ್ ಸಿಂಹರಿಗೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸವಾಲು ಹಾಕಿದರು.ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಕಲೇಶಪುರ ಪ್ರತಾಪ್ ಸಿಂಹರ ಸ್ವಂತ ಊರು. ಮುಂದಿನ ಚುನಾವಣೆಗೆ ಅದು ಸಾಮಾನ್ಯ ಕ್ಷೇತ್ರವಾದರೆ, ನಾನು ಅಲ್ಲಿಂದಲೇ ಸ್ಪರ್ಧಿಸಲು ನಮ್ಮ ನಾಯಕರಲ್ಲಿ ಟಿಕೆಟ್ ಕೇಳುತ್ತೇನೆ. ಪ್ರತಾಪ್ ಸಿಂಹ ಧೈರ್ಯವಿದ್ದರೆ ಅಲ್ಲೇ ಸ್ಪರ್ಧಿಸಲಿ, ಯಾರು ಗೆಲ್ಲುತ್ತಾರೆ ನೋಡೋಣ ಎಂದು…

Read More

ಸ್ಪರ್ಧಾತ್ಮಕ ಪರೀಕ್ಷೆಗಳು ನಮ್ಮ ಬದುಕನ್ನು ಬದಲಾಯಿಸುತ್ತವೆ; ಕೆ.ಎಲ್. ಸೂರಜ್

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಗಳು ನಮ್ಮ ಬದುಕನ್ನು ಬದಲಾಯಿಸುತ್ತವೆ. ನಿಗದಿತ ಸಮಯದಲ್ಲಿ ಕೆಲಸ ಪಡೆದು ಸಾರ್ವಜನಿಕ ಸೇವೆ ಮಾಡಿ ಎಂದು ಐಪಿಎಸ್ ಅಧಿಕಾರಿ ಕೆ.ಎಲ್. ಸೂರಜ್ ಹೇಳಿದರು.ಶುಕ್ರವಾರ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ ಕೆಪಿಎಸ್‌ಸಿ ಮತ್ತು ಕೆಇಎ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು,ಮುಖ್ಯ ಸಂದೇಶಗಳು,ಗುರಿ ಮತ್ತು ನಿಖರತೆ ಕೆಲಸ ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ, ಒಂದು ಉತ್ತಮ ಕೆಲಸ ಪಡೆಯಿರಿ. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ. ಏನೇ…

Read More

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆಂದು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯಿಂದ ಪ್ರತಿಭಟನೆ

ಮೈಸೂರು; ಕಾವೇರಿ ನೀರು ನಿರ್ವಹಣಾ ಮಂಡಳಿಯು ತಮಿಳುನಾಡಿಗೆ ನೀರು ಬಿಡಲು ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕಾರ ಮಾಡಬೇಕು, ಯಾವುದೇ ಒತ್ತಡಕ್ಕೆ ಮಣಿಯಬಾರದು, ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದೆಂದು ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಚಿತ್ರನಟ ಎಸ್.ಜಯಪ್ರಕಾಶ್ (ಜೆಪಿ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆಂದು ಆಗ್ರಹಿಸಿ ಶುಕ್ರವಾರ ಮೈಸೂರಿನ ಟೌನ್ ಹಾಲ್ ಮುಂಭಾಗದಲ್ಲಿ ಕಾವೇರಿ ಕ್ರಿಯಾ ಸಮಿತಿಯಿಂದ ನಡೆದ ಪ್ರತಿಭಟನಾ ಧರಣಿಯ ನೇತೃತ್ವವಹಿಸಿ ಮಾತನಾಡಿದ ಅವರು, ಈ ಹಿಂದಿನ ಮುಖ್ಯಮಂತ್ರಿಯಾಗಿದ್ದಸಿದ್ದರಾಮಯ್ಯ ನೇತೃತ್ವದ…

Read More

ಕಾವೇರಿ ಭಾಗದ ಜಲಾಶಯಗಳ ವಸ್ತುಸ್ಥಿತಿಯನ್ನು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಸಿಎಂ ಮನವರಿಕೆ ಮಾಡಿಕೊಡಬೇಕು; ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿನ ವಾಟರ್ ಮ್ಯಾನ್ ಆಗಬಾರದು. ನಮ್ಮ ಕಾವೇರಿ ಭಾಗದ ಜಲಾಶಯಗಳ ನಿಜವಾದ ವಸ್ತುಸ್ಥಿತಿಯನ್ನು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದರು.ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ , ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತುಕತೆಯ ಮೂಲಕವೇ ಕಾವೇರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ತಮಿಳುನಾಡಿನಲ್ಲಿರುವುದು ಕಾಂಗ್ರೆಸ್‌ಗೆ ಮಿತ್ರ ಪಕ್ಷವೇ ಅಲ್ಲವೇ? ನಿಮ್ಮ…

Read More

ತಮಿಳುನಾಡಿಗೆ ಎಲ್ಲಾ ನೀರನ್ನು ಹರಿಸಿದ ಬಳಿಕ ಈಗ ಸರ್ವಪಕ್ಷಗಳ ಸಭೆ ಕರೆದರೆ ಏನು ಪ್ರಯೋಜನ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು: ರಾಜ್ಯ ಸರ್ಕಾರ ಕಳೆದ ಎರಡು ತಿಂಗಳಲ್ಲಿ ತಮಿಳುನಾಡಿಗೆ ಎಲ್ಲಾ ನೀರನ್ನು ಹರಿಸಿದ ಬಳಿಕ ಈಗ ಸರ್ವಪಕ್ಷಗಳ ಸಭೆ ಕರೆಯುತ್ತಿರುವುದರಿಂದ ಆಗುವ ಪ್ರಯೋಜನವಾದರೂ ಏನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ನೀರನ್ನೂ ಕೂಡ ತಮಿಳುನಾಡಿಗೆ ಈಗಾಗಲೇ ಹರಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲೇ ನೀರಿನ…

Read More

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು; ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣವೇ ಉನ್ನತ ಮಟ್ಟದ ಕಾನೂನು ಹೋರಾಟ ರೂಪಿಸಬೇಕು. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು. ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗದೆ ಬರಗಾಲ ಆವರಿಸಿದೆ. ಜಲಾಶಯಗಳಲ್ಲಿ ಕುಡಿಯುವುದಕ್ಕೂ ನೀರಿಲ್ಲದಂಹ ಪರಿಸ್ಥಿತಿಯಿದೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನಿತ್ಯವೂ…

Read More

ಗಜ ಲಕ್ಷ್ಮಿ ಅಲಂಕಾರದಲ್ಲಿ ವಿಶೇಷವಾಗಿ ಕಂಗೊಳಿಸುತ್ತಿದ್ದ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ಮನ ತುಂಬಿಕೊ0ಡ ಭಕ್ತ ಸಾಗರ

ಮೈಸೂರು: ಆಷಾಢ ಮಾಸ ಮೂರನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಗಜ ಲಕ್ಷ್ಮಿ ಅಲಂಕಾರದಲ್ಲಿ ವಿಶೇಷವಾಗಿ ಕಂಗೊಳಿಸುತ್ತಿದ್ದ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. .ಮಳೆಯಂತೆ ಸುರಿಯುತ್ತಿದ್ದ ಮೈಕೊರೆಯುವ ಚುಮು, ಚುಮು ಚಳಿ, ಬೀಸುತ್ತಿದ್ದಾ ಥಂಡಿ ಗಾಳಿ, ಮುಸುಕಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿAದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು ನಾಡ ಅಧಿದೇವತೆಯಾದ ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ…

Read More

ಆ.1 ರಂದು ಮೈಸೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಉಡುಗೊರೆಮೈಸೂರು: ಅರಮನೆ ನಗರಿ ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ.1ರಂದು ಆಗಮಿಸಿ, ನಗರದ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾಗಿರುವ ನೂತನ ವಿವೇಕ ಸ್ಮಾರಕ (ಸ್ವಾಮಿ ವಿವೇಕಾನಂದ ಸಾಂಸ್ಕöÈತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದ ವಿಶೇಷತೆಯಾಗಿ ಪ್ರಧಾನಿ ಮೋದಿಯವರಿಗೆ ನೀಡಲೆಂದು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ವಿಶೇಷ ಉಡುಗೊರೆಯೊಂದು ಸಿದ್ಧಗೊಂಡಿದೆ.ಸAಪೂರ್ಣ ಬಿಳಿಯ ಬಣ್ಣದ ವೆಟ್ನಾಂ ಮಾರ್ಬಲ್ ಕಲ್ಲಿನಲ್ಲಿ ವಿವೇಕಾನಂದರ ಮೂರ್ತಿಯನ್ನು…

Read More