Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್; ಎಸ್.ಜಯಪ್ರಕಾಶ್

ಮೈಸೂರು; ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್ ರವರು ಎಂದು ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಸೋಮವಾರ ನಗರದ ರೈಲು ನಿಲ್ದಾಣದ ಬಳಿಯಿರುವ ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ತೀವ್ರವಾಗಿದ್ದ ಕಾಲದಲ್ಲಿ ದೇಶದ ಉಪಪ್ರದಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು ದೇಶದ್ಯಾಂತ ಹಸಿರು ಕ್ರಾಂತಿಯನ್ನು…

Read More

ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ; ಪ್ರೊ. ಎಂ. ಆರ್. ಗಂಗಾಧರ್

ಮೈಸೂರು; ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎಂ. ಆರ್. ಗಂಗಾಧರ್ ಹೇಳಿದರು. ಸೋಮವಾರ ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ 2026-27ರ ದೀಕ್ಷಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ಎಂದು ತಿಳಿಸಿದರು. ದೀಕ್ಷಾರಂಭವು ಜ್ಞಾನದ ಆರಂಭ, ಜೊತೆಗೆ ಕಾಲೇಜನ್ನು ಪರಿಚಯಿಸುವುದು, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವುದು ಹಾಗೂ ಜ್ಞಾನದ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತ್ತು…

Read More

ಪಿರಿಯಾಪಟ್ಟಣ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

​ಅಧ್ಯಕ್ಷರಾಗಿ ಬಲರಾಂ, ಕಾರ್ಯದರ್ಶಿಯಾಗಿ ಬಿ.ಎಸ್.ಹರೀಶ್ ಪಿರಿಯಾಪಟ್ಟಣ:ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಪಟ್ಟಣದ ಕನಕ ಭವನದಲ್ಲಿ ನೆರವೇರಿತು. ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ನೂತನ ಅಧ್ಯಕ್ಷರಾಗಿ ಕಿರನಲ್ಲಿ ಬಲರಾಮ ಕಾರ್ಯದರ್ಶಿಯಾಗಿ ಬಿ.ಎಸ್.ಹರೀಶ್ ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಿಗೆ ಯಶಸ್ವಿನಿ ಸೋಮಶೇಖರ್ ಪ್ರಮಾಣವಚನ ಬೋಧಿಸಿ ಮಾತನಾಡಿದ ಅವರು ರೋಟರಿ ಸಂಸ್ಥೆಯು ಜಗತ್ತಿನಾದ್ಯಂತ ಮಾನವೀಯ ಸೇವೆಗೆ ಹೆಸರಾಗಿದೆ. ನೂತನ ಪದಾಧಿಕಾರಿಗಳು ಸೇವೆಯ ಮೂಲಕ ಸಮಾಜದಲ್ಲಿ ಶಾಶ್ವತ ಮತ್ತು ಸಕಾರಾತ್ಮಕ ಬದಲಾವಣೆ ತರುವ ಕಾರ್ಯಗಳಲ್ಲಿ…

Read More

ಹವ್ಯಾಸಿ ರಂಗಭೂಮಿಯೇ ರಂಗಚಳುವಳಿಯ ಜೀವಾಳ: ಪ್ರಸಾದ್ ಕುಂದೂರುಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ2026’ಕ್ಕೆ ಅದ್ಧೂರಿ ಚಾಲನೆ

ಮೈಸೂರು: ವೃತ್ತಿಪರ ರೆಪರ್ಟರಿಗಳ ಕೊಡುಗೆ ಮಹತ್ವದ್ದಾಗಿದ್ದರೂ, ರಂಗಚಳುವಳಿಯ ಉತ್ಸಾಹ, ಜೀವಂತಿಕೆ ಮತ್ತು ಸೃಜನಶೀಲತೆಯನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಹವ್ಯಾಸಿ ರಂಗಭೂಮಿಯೇ ಎಂದು ಹಿರಿಯ ರಂಗಕರ್ಮಿ ಹಾಗೂ ನಿರಂತರ ಫೌಂಡೇಶನ್ ನಿರ್ದೇಶಕ ಪ್ರಸಾದ್ ಕುಂದೂರು ಹೇಳಿದರು. ನಗರದ ರಂಗಾಯಣದ ಭೂಮಿಗೀತ ರಂಗಮAದಿರದಲ್ಲಿ ಕರ್ನಾಟಕ ಸರ್ಕಾರದ ರಂಗಾಯಣ ಸಂಸ್ಥೆ ಆಯೋಜಿಸಿರುವಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ2026’ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣದ ಆರಂಭಿಕ ದಿನಗಳನ್ನು ಸ್ಮರಿಸಿ, ಬಿ.ವಿ. ಕಾರಂತ ಅವರು ವೃತ್ತಿಪರ ರೆಪರ್ಟರಿಯ ಜೊತೆಗೆ ಹವ್ಯಾಸಿ ತಂಡಗಳಿಗೂ ಸಮಾನ ಗೌರವ ನೀಡಿದ್ದರು….

Read More

ಶ್ರೀ ರಾಘವೇಂದ್ರ ಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನೆ

ಮೈಸೂರು; ಇಲ್ಲಿನ ರಾಮಕೃಷ್ಣ ನಗರದ ವಿವೇಕಾನಂದ ರಸ್ತೆಯಲ್ಲಿರುವ ಶ್ರೀನಿವಾಸ ದೇವಸ್ಥಾನ ಆವರಣದಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನಾ ಮಹೋತ್ಸವವು ಸೋಮವಾರ ನೆರವೇರಿತು.ಬೆಳಿಗ್ಗೆಯಿಂದ ದೇವರಿಗೆ ಅಭಿಷೇಕ, ಹೂವಿನ ಅಲಂಕಾರ, ಗಣಪತಿ ನವಗ್ರಹ ಹೋಮ, ವಿಶೇಷ ವೇದಮಂತ್ರಗಳೊAದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನೆಯನ್ನು ವಿದ್ವಾನ್ ನಿತ್ಯಾಗ್ನಿ ಹೋತ್ರಿ ಶ್ರೀದಾಮೋದರಾವಾರ್ಯ ಬಾಜಪೇಯಿ ಅವರ ನೇತೃತ್ವದಲ್ಲಿ ಜರುಗಿತು.ದೇಸ್ಥಾನದ ಅಧ್ಯಕ್ಷ ಹರೀಶ್‌ರಾವ್, ಟ್ರಸ್ಟಿಗಳಾದ ಸುಧಾರಾವ್, ಗುರುರಾಜ್‌ರಾವ್, ದಾನಿಗಳಾದ ಉದ್ಯಮಿ ಆನಂದ್ ಹಾಗೂ ನೂರಾರು ಭಕ್ತಾಧಿಗಳು ಪ್ರಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಭಕ್ತಾಧಿಗಳಿಗೆ ಪ್ರಸಾದವಾಗಿ…

Read More

ದೀನ, ದುರ್ಬಲರ ಬದುಕಿನ ಉದ್ದಾರಕಕ್ಕೆ ಜೀವನ ಸವೆಸಿದ ಸಂತ ಮಹಾಂತ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿ

ಮೈಸೂರು; ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗ ಮೈಸೂರು ಇದರ ವತಿಯಿಂದ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದ ಹತ್ತಿರದ ಶಿವ ಸನ್ನಿಧಿ ಗೆಳೆಯರ ಬಳಗದ ಕಚೇರಿಯಲ್ಲಿ ಅಗಲಿದ ಚೇತನ ಡಾ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳವರ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಪೂಜ್ಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾತನಾಡಿದ ಕಲಾ ಬಳಗದ ಅಧ್ಯಕ್ಷ ಕಲ್ಮಳ್ಳಿ ನಟರಾಜು, ಸರ್ಕಾರಿ ಉದ್ಯೋಗ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸುವುದು ಅಷ್ಟು÷ ಸುಲಭದ ಮಾತಲ್ಲ. ಲೌಕಿಕವಾಗಿ ವೈಯಕ್ತಿಕ ಬದುಕನ್ನು ಹಸನುಮಾಡಿಕೊಳ್ಳುವುದರಿಂದ ನಾನು ಸುಖ ಸಂತೋಷವಾಗಿ ಜೀವಿಸಬಹುದೇ…

Read More

ಡಾ. ಬಾಬು ಜಗಜೀವನ ರಾಮ್ ಅವರು ಇಡೀ ರಾಷ್ಟ್ರದ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ; ಡಾ. ಡಿ. ತಿಮ್ಮಯ್ಯ

ಮೈಸೂರು: ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನ ರಾಮ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ರಾಷ್ಟçದ ಏಳಿಗೆಗಾಗಿ ಶ್ರಮಿಸಿದ ನಾತಕ. ಅವರ ಆದರ್ಶಗಳು, ದೇಶಭಕ್ತಿ ಮತ್ತು ಧೀಮಂತ ವ್ಯಕ್ತಿತ್ವ ಇಂದಿನ ಯುವ ಪೀಳಿಗೆಗೆ ಸದಾ ಪ್ರೇರಣಾದಾಯಕವಾಗಿದೆ ಎಂದು ವಿಧಾನಸಭಾ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಹೇಳಿದರು.ಸೋಮವಾರ ಜಿಲ್ಲಾಡಳಿತದ ವತಿಯಿಂದ ನಗರದ ರೈಲ್ವೆ ನಿಲ್ದಾಣದಲ್ಲಿರುವ ಡಾ. ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ. ಬಾಬು…

Read More

ಚಾಮುಂಡೇಶ್ವರಿಯ ದರ್ಶನಕ್ಕೆ 2 ಸಾವಿರ ರೂ ಟಿಕೆಟ್ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಮೈಸೂರು; ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆ ಎರಡು ಸಾವಿರ ರೂ ಟಿಕೆಟ್ ನಿಗದಿ ಮಾಡಿರುವುದನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಭಕ್ತಾಧಿಗಳೇ ನಿಮ್ಮಲ್ಲಿ ಎರಡು ಸಾವಿ ರೂ ಇದ್ದರೆ ಮಾತ್ರ ಚಾಮುಂಡಿಬೆಟ್ಟಕ್ಕೆ ಬನ್ನಿ,ಇಲ್ಲವಾದರೆ ಮನೆಯಿಂದಲೇ ಚಾಮುಂಡೇಶ್ವರಿತಾಯಿಗೆ ಕೈ ಮುಗಿದು ಬಿಡಿ ಎಂದು ಚಾಮುಂಡಿ ಬೆಟ್ಟ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ…

Read More

ವನಸಿರಿ ನಾಡಿನ ಯುವ ನಿರ್ದೇಶಕನಿಂದ 2 ಸಿನಿಮಾ ಆಗಸ್ಟ್ ಗೆ ತೆರೆಗೆ

ಎಚ್.ಡಿ.ಕೋಟೆ : ಸ್ಯಾಂಡಲ್ ವುಡ್ ಯುವ ನಟ ಆರ್ಯನ್ ನಟಿ ಜೀವಿತಾ ಪ್ರಭಾಕರ್ ಅಭಿನಯದಲ್ಲಿ ಮೂಡಿಬರುತ್ತಿರುವ love 2 ಲಸ್ಸಿ ಸಿನಿಮಾ ಬಂಟ್ವಾಳ ಹುಡಿಗಿ ಮತ್ತು ಬೆಂಗಳೂರು ಹುಡುಗನ ನಡುವಿನ ನೈಜ ಪ್ರೇಮ ಕಥೆ ಹೊಂದಿರುವ ಚಲನಚಿತ್ರವಾಗಿದೆ, ಈ ಚಿತ್ರದಲ್ಲಿ ಅನೇಕ ಹೆಸರಾಂತ ಕಲಾವಿದರು ನಟಿಸುತ್ತಿದ್ದು ಜನರು ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಬಂದು ನೋಡುವ ಸಿನಿಮಾ ಆಗಲಿದೆ ಎಂದು ಚಿತ್ರದ ಯುವ ನಿರ್ದೇಶಕ ಹರಿಪ್ರಾಣ ಹೇಳಿದರು.ಎಚ್.ಡಿ.ಕೋಟೆ ತಾಲೂಕು ಪತ್ರಕರ್ತರ ಸಂಘದಲ್ಲಿ love 2 ಲಸ್ಸಿ ಚಿತ್ರ ತಂಡ…

Read More