Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಸಹಾಯಕರಾಗಿ ಬಿದ್ದಿದ್ದ ವೃದ್ಧೆಯ ರಕ್ಷಣೆ


ಮೈಸೂರು; ನಗರದ ಪೊಲೀಸ್ ಆಯುಕ್ತರ ಕಚೇರಿ ಬಳಿ ಅಸಹಾಯಕರಾಗಿ ಬಿದ್ದಿದ್ದ ನಿಂಗಮ್ಮ ಎಂಬ ವಯೋವೃದ್ಧೆಯನ್ನು `ಅಕ್ಕ ಪಡೆ’ಯ ಸಿಬ್ಬಂದಿಗಳು ತಕ್ಷಣವೇ ರಕ್ಷಿಸಿದ್ದಾರೆ. ಬಳಿಕ ಅವರನ್ನು ವಿಚಾರಿಸಿದಾಗ, ಅವರು ರೈಲ್ವೆ ಇಲಾಖೆಯ ನಿವೃತ್ತ ನೌಕರರೆಂದೂ ಮತ್ತು ಅವರ ಮನೆ ವೀರನಗೆರೆ ಬಳಿ ಇರುವುದಾಗಿಯೂ ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಕ್ಕ ಪಡೆಯ ಸಿಬ್ಬಂದಿ ವೃದ್ಧೆಯನ್ನು ಸುರಕ್ಷಿತವಾಗಿ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.