
ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2026-27 ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ದೂರ ಶಿಕ್ಷಣದಲ್ಲಿ ಪಡೆಯಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪಿರಿಯಾಪಟ್ಟಣ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಯುಜಿ, ಪಿಜಿ ಕೋರ್ಸ್ಗಳಾದ ಎಂ.ಎ., ಎಂ.ಕಾಂ, ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲಿಯೋ, ಎಂ.ಎಸ್ಸಿ., ಎಂ.ಎಲ್.ಐ.ಎಸ್ಸಿ ಮತ್ತು ಯು.ಜಿ.ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಎಸ್.ಡಬ್ಲಿಯೊ, ಬಿ.ಎಸ್ಸಿ., ಬಿ.ಎಲ್.ಐ.ಎಸ್ಸಿ ಹಾಗೂ ಪಿಜಿ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್ ಗಳು ಮತ್ತು ಹೊಸದಾಗಿ ಪ್ರಾರಂಭವಾಗಿರುವ ಜ್ಯೋತಿರ್ವಿಜ್ಞಾನ ಹಾಗೂ ಲಿಂಗ್ವೆಸ್ಟಿಕ್ ಕೋರ್ಸ್ ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದ್ದು ಹೆಚ್ಚಿನ ಮಾಹಿತಿಗಾಗಿ ಡಿಪಿಬಿಎಸ್ ಪದವಿಪೂರ್ವ ಕಾಲೇಜು ಬಿ.ಎಂ.ರಸ್ತೆ ಬೆಟ್ಟದಪುರ ಸರ್ಕಲ್ ಪಿರಿಯಾಪಟ್ಟಣ ಮೊ.ನಂ.9901423273, ಸಂಪರ್ಕಿಸುವಂತೆ ತಿಳಿಸಿದ್ದಾರೆ.