
ಮೈಸೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇಂದು ನಾಡ ಶಕ್ತಿ ದೇವತೆ ಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಅವರು ದೇವಸ್ಥಾನಕ್ಕೆ ತೆರಳಿ ಜಗನ್ಮಾತೆ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ನಾಡಿನ ಅನ್ನದಾತ ರೈತರಿಗೆ ಹಾಗೂ ಜನತೆಗೆ ಒಳಿತಾಗಲೆಂದು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಹಾಗೂ ಅರ್ಚಕ ಸುನೀಲ್ ಉಪಸ್ಥಿತರಿದ್ದರು.