
ಮೈಸೂರು: ವಿದೇಶಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವುದನ್ನು ಕಡಿಮೆ ಮಾಡಿ, ನಮ್ಮ ದೇಶದಲ್ಲಿ ತಯಾರಾದ ವಸ್ತುಗಳನ್ನು ಹೊರದೇಶಗಳಿಗೆ ಹೆಚ್ಚಾಗಿ ಕಳುಹಿಸಿದಾಗ ಮಾತ್ರ ಭಾರತೀಯ ರೂಪಾಯಿಯ ಮೌಲ್ಯ ವೃದ್ಧಿಯಾಗಲು ಸಾಧ್ಯ ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಹೇಳಿದರು.
ಸೋಮವಾರ ನಗರದ ಹೋಟಲ್ ಪ್ರೆಸಿಡೆಂಟ್ನಲ್ಲಿ ಏರ್ಪಡಿಸಿದ್ದ ರಾಜ್ಯದ ರಫುö್ತ ವಲಯವನ್ನು ವಿಸ್ತರಿಸಿ, ರಫುö್ತ ಪ್ರಮಾಣವನ್ನು ಹೆಚ್ಚಿಸುವ ರಫುö್ತ ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಚೀನಾದಿಂದ ಆಮದು ಮಾಡಿಕೊಳ್ಳುವ ಸೋಲಾರ್ ಪ್ಯಾನಲ್ ಸೇರಿದಂತೆ ಇನ್ನಿತರ ವಿದೇಶಿ ಉತ್ಪನ್ನಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿಲ್ಲ. ಬದಲಾಗಿ ನಾವು ಸ್ಥಳೀಯವಾಗಿ ಉತ್ಪಾದಿಸುವ ಗುಣಮಟ್ಟದ ಪದಾರ್ಥಗಳನ್ನು ಖರೀದಿಸಬೇಕು ಮತ್ತು ನಮ್ಮ ದೇಶದಿಂದ ರಫುö್ತ ಮಾಡುವತ್ತ ಗಮನ ಹರಿಸಬೇಕು. ಚೈನಾ ಉತ್ಪನ್ನಗಳ ಗುಣಮಟ್ಟ ಹಾಗೂ ವಿಶ್ವಾಸಾರ್ಹತೆಯ ಕೊರತೆಯ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕಿದೆ ಎಂದು ತಿಳಿಸಿದರು.
ಈ ರಫುö್ತ ಅಭಿವೃದ್ಧಿ ಹಾಗೂ ತರಬೇತಿ ಕಾರ್ಯಕ್ರಮವು ಆರು ದಿನಗಳ ಕಾಲ ನಿರಂತರವಾಗಿ ನಡೆಯಲಿದ್ದು, ಮಾರುಕಟ್ಟೆಯ ಜಾಗತಿಕ ಸ್ಪರ್ಧೆಗೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ಸರಿಯಾದ ಬೆಲೆಯಲ್ಲಿ ಹೇಗೆ ರಫುö್ತ ಮಾಡಬೇಕೆಂಬುದರ ಕುರಿತು ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದರು.
ರಫುö್ತ ವಲಯಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ 3 ಕೋಟಿ ರೂ. ಹಾಗೂ ರಾಜ್ಯ ಸರ್ಕಾರ 1 ಕೋಟಿ ರೂ. ಅನುದಾನ ನೀಡಿದ್ದು, ರಿಂಗ್ ರಸ್ತೆಯಲ್ಲಿರುವ ಶೇಷಾದ್ರಿಪುರಂ ಸಂಸ್ಥೆಯ ಪಕ್ಕದಲ್ಲೇ ಮೈಸೂರು ರಫುö್ತ ಕೇಂದ್ರ ತಲೆ ಎತ್ತುತ್ತಿದೆ. ಕರ್ನಾಟಕ ಸರ್ಕಾರದ ಕಾರ್ಯದರ್ಶಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯುದ್ಧದ ಕಾರಣಗಳಿಂದಾಗಿ ಸ್ಟೀಲ್, ಟೈಲ್ಸ್ ಮುಂತಾದ ಸಾಮಗ್ರಿಗಳ ಬೆಲೆ ಹೆಚ್ಚಾಗಿ, ಕಾಮಗಾರಿ ಕೊಂಚ ತಡವಾಗಿದ್ದರೂ, ಶೀಘ್ರದಲ್ಲೇ ಇದು ಉದ್ಯಮಿಗಳ ಸೇವೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರಫ್ತಿಗೆ ಸಂಬAಧಿಸಿದ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಕೆಲಸ ಮಾಡಲಿವೆ. ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು, ಮಾರಾಟ ಮಾಡಲು ಹಾಗೂ ಒನ್-ಟು-ಒನ್ ಮೀಟಿಂಗ್ ನಡೆಸಲು ಇಲ್ಲಿ ಉತ್ತಮ ಸೌಲಭ್ಯ ಸಿಗಲಿದೆ ಎಂದರು. ಉದ್ಯಮಿಗಳು ಯಾವುದೇ ಕನ್ಸಲ್ಟೆಂಟ್ಗಳು ಅಥವಾ ಏಜೆಂಟರ ಬಳಿ ಹೋಗಿ ವಂಚನೆಗೆ ಒಳಗಾಗುವ ಮುನ್ನ, ಇಲಾಖೆಯ ಅಧಿಕಾರಿಗಳು ನೀಡುವ ಅಧಿಕೃತ ಹಾಗೂ ಗೌರವಯುತ ಸೇವೆಯ ಮಾಹಿತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು ಮಾತನಾಡಿ, ರಫುö್ತ ಮಾಡುವುದು ಎಂದರೆ ಕೇವಲ ವಿದೇಶಕ್ಕೆ ಸರಕನ್ನು ಕಳುಹಿಸುವುದಲ್ಲ. ಅದು ನಮ್ಮ ದೇಶದ ಗುಣಮಟ್ಟ ಮತ್ತು ಸಾಮರ್ಥ್ಯವನ್ನು ಜಗತ್ತಿಗೆ ಪರಿಚಯಿಸುವ ಪ್ರಕ್ರಿಯೆಯಾಗಿದೆ. ಉತ್ಪನ್ನಗಳನ್ನು ಹೇಗೆ ತಯಾರಿಸಬೇಕು, ಹೇಗೆ ಸಾಗಾಣಿಕೆ ಮಾಡಬೇಕು ಮತ್ತು ನಿಗದಿತ ಸಮಯಕ್ಕೆ ಹೇಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಈ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಮೈಸೂರು ಕೇವಲ ಸಾಂಸ್ಕöÈತಿಕ ರಾಜಧಾನಿಯಷ್ಟೇ ಅಲ್ಲದೆ ಕೈಗಾರಿಕೆ, ಕೃಷಿ, ಆಹಾರ ಸಂಸ್ಕಾರಣೆ, ಮಾಹಿತಿ ತಂತ್ರಜ್ಞಾನ, ಜವಳಿ, ಅಗರಬತ್ತಿ, ಸ್ಯಾಂಡಲ್ ಉತ್ಪನ್ನಗಳು, ಜೇನುತುಪ್ಪ, ಕಾಫಿ, ಮಸಾಲೆ ಪದಾರ್ಥಗಳು, ಆಯುರ್ವೇದ ಉತ್ಪನ್ನಗಳು ಹಾಗೂ ಇಂಜಿನಿಯರಿAಗ್ ಕ್ಷೇತ್ರಗಳಲ್ಲಿ ಉತ್ತಮ ರಫುö್ತ ಅವಕಾಶಗಳನ್ನು ಹೊಂದಿದೆ ಎಂದು ತಿಳಿಸಿದರು.
ನಮ್ಮ ಜಿಲ್ಲೆಯ ಸಾವಿರಾರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಂತರರಾಷ್ಟಿçÃಯ ಮಾರುಕಟ್ಟೆಯನ್ನು ತಲುಪುವ ಸಾಮರ್ಥ್ಯವಿದೆ. ಆದರೆ ಅವರಿಗೆ ಸರಿಯಾದ ಮಾಹಿತಿ, ತರಬೇತಿ, ದಾಖಲಾತಿಗಳ ಅರಿವು ಮತ್ತು ಮಾರುಕಟ್ಟೆ ಸಂಪರ್ಕದ ಕೊರತೆಯಿದೆ. ಈ ತರಬೇತಿಯು ಅಂತಹ ಕೊರತೆಗಳನ್ನು ನೀಗಿಸಲಿದೆ ಎಂದರು.
ಇ-ಕಾಮರ್ಸ್ ಮೂಲಕ ವಿಶ್ವದ ಯಾವುದೇ ದೇಶಕ್ಕಾದರೂ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ಲಭ್ಯವಿದೆ. ಆದ್ದರಿಂದ ನಮ್ಮ ಯುವ ಉದ್ಯಮಿಗಳು ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಮೇಡ್ ಇನ್ ಮೈಸೂರ್ ಮತ್ತು ಮೇಡ್ ಇನ್ ಕರ್ನಾಟಕ ಎಂಬ ಹೆಸರಿನಲ್ಲಿ ಜಾಗತಿಕ ಮಟ್ಟದಲ್ಲಿ ತಲುಪುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು..
ಕಾರ್ಯಕ್ರಮದಲ್ಲಿ ವಿಟಿಪಿಸಿ ರಫುö್ತ ಸೌಲಭ್ಯ ಕೇಂದ್ರದ ಉಪ ನಿರ್ದೇಶಕಿ ಮೇಘಲಾ, ಎಲ್, ಗಣ್ಯರಾದ ಅರವಿಂದ್ ಭಟ್, ಉಮಾ, ರಫುö್ತ ನಿರ್ವಹಣಾ ತರಬೇತಿ ಅಭ್ಯರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು