Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ


ಮೈಸೂರು; ನಗರದ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಪುಟ್ ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ 6 ರವತಿಯಿಂದ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.
ಈ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಹಾಗೂ ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು.
ನಿಗದಿತ ಕಾರ್ಯಕ್ರಮದಂತೆ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ-6 ವ್ಯಾಪ್ತಿಯ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣದವರೆಗೆ ಇರುವ ಇರ್ವಿನ್ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. .
ಪೊಲೀಸ್ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಯ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗಗಳ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ಗಳು, ವ್ಯಾಪಾರ ವಸ್ತುಗಳು, ಪುಟ್ ಬೋಡ್‌ಗಳು, ಪ್ರಚಾರ ಸಾಮಾಗ್ರಿಗಳು ಸೇರಿದಂತೆ ವಿವಿಧ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು. ಪುಟ್ ಪಾತ್ ಅತಿಕ್ರಮಿಸಿ ಕೆಲವು ಅಂಗಡಿಯವರು ಮೆಟ್ಟಿಲುಗಳನ್ನು ನಿರ್ಮಿಸಿದ್ದು, ಅವುಗಳನ್ನು ಒಡೆದು ಹಾಕಲಾಯಿತು. ಅಲ್ಲದೇ ಪುಟ್‌ಪಾತ್‌ನಲ್ಲಿ ಕಾಯಂ ಆಗಿ ನಿಲ್ಲಿಸಿದ್ದ ಗಾಡಿಗಳನ್ನು ಎತ್ತಿ ನಗರಪಾಲಿಕೆಯ ಲಾರಿಗೆ ಹಾಕಲಾಯಿತು. ಅಲ್ಲದೇ ಅಂಗಡಿಯವರು ಪುಟ್ ಪಾತ್‌ನಲ್ಲಿ ನಿರ್ಮಿಸಿದ್ದ ಬೋರ್ಡ್ಗಳನ್ನು ತೆರವುಗೊಳಿಸಿ, ಅವುಗಳನ್ನು ಲಾರಿಗೆ ಹಾಕಲಾಯಿತು. ಅಂಗಡಿಯವರು ಪುಟ್ ಪಾತ್‌ನಲ್ಲಿಟ್ಟಿದ್ದ ವಸ್ತುಗಳನ್ನು ಎತ್ತಿಕೊಂಡು ನಗರಪಾಲಿಕೆಯ ಲಾರಿಗೆ ಹಾಕಿದರು. ಇದಕ್ಕೆ ಅಂಗಡಿ ಮಾಲೀಕರು, ಕೆಲಸದವರು ವಿರೋಧ ವ್ಯಕ್ತಪಡಿಸಿದರೂ, ಅದಕ್ಕೆ ನಗರಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಕ್ಯಾರೆ ಎನ್ನಲಿಲ್ಲ. ಪುಟ್‌ಪಾತ್ ಒತ್ತುವರಿ, ಅತಿಕ್ರಮಣ ತೆರವು ಮಾಡಿ, ಆ ಮೂಲಕ ಪಾದಾಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಯಿತು.
ನಗರದಲ್ಲಿ ಪಾದಚಾರಿಗಳಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿದೆ ಎಂದು ನಗರಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.