
ನಂಜನಗೂಡು; ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು, ಆತನನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಸುರೇಶ್(23) ಪೊಲೀಸರ ಅತಿಥಿಯಾದ ಕಾಮುಕ.ತಂದೆ ತಾಯಿ ಕೂಲಿಗೆ ಹೋಗಿರುವುದ್ದು ಬಾಲಕಿ ಒಂಟಿಯಾಗಿರುವುದನ್ನ ಗಮನಿಸಿ ಮನೆಗೆ ನುಗ್ಗಿದ ಈತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ವೇಳೆ ಬಾಲಕಿಯ ಚೀರಾಡಿದ್ದಾಳೆ. ಅಕ್ಕಪಕ್ಕದ ಮನೆಯವರು ಬಂದು ಆತನನ್ನು ಹಿಡಿದು ಹಿಗ್ಗ ಮಗ್ಗ ಥಳಿಸಿದ ಬಳಿಕ ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.