Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ನಿಮಾನ್ಸ್ ಆಸ್ಪತ್ರೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ


ಮೈಸೂರು; ಜಿಲ್ಲೆಯ ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ಮತ್ತು ಕೊಳಚೆ ನೀರಿನ ಜಾಗದಲ್ಲಿ ನಿಮಾನ್ಸ್ ಆಸ್ಪತ್ರೆಯನ್ನು ಕಟ್ಟುವುದು ಬೇಡ ಮತ್ತು ಆ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲಿಬಿಸುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಪರಿಸರಕ್ಕಾಗಿ ನಾವು ಪ್ರತಿಭಟನೆ ನಡೆಸಿದ್ದು, ಇದಕ್ಕೆ ಕನ್ನಡ ಬಳಗ ಕೆ ಆರ್ ಎಸ್ ಪಕ್ಷ ಇತರೆ ಪ್ರಗತಿಪರ ಸಂಘಟನೆಗಳು ಬೆಂಬಲವನ್ನು ಸೂಚಿಸಿದರು.
ಈ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ, ಮಂಡಕಳ್ಳಿ ಮಹೇಶ್, ಪರಿಸರಕ್ಕಾಗಿ ನಾವು ಹೋರಾಟಗಾರರಾದ ಪರಶುರಾಮ ಗೌಡ , ಪರಿಸರವಾದಿಗಳು ಭಾನುಮೋಹನ್, ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ನಾಗರಾಜು, ಕನ್ನಡಪರ ಹೋರಾಟಗಾರರಾದ ಪರಮೇಶ್, ಗ್ರಾಮದ ನೂರಾರು ರೈತರು ರೈತ ಮಹಿಳೆಯರು ಭಾಗವಹಿಸಿದ್ದರು.