Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾನೂ ಸಚಿವ ಸ್ಥಾನದ ಆಕಾಂಕ್ಷಿ; ಶಾಸಕ ಎ.ಆರ್.ಕೃಷ್ಣಮೂರ್ತಿ


ಮೈಸೂರು; ನಾನು ಮೂರನೇ ಬಾರಿ ಶಾಸಕನಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಬಳಿ ಮನವಿ ಮಾಡಿದ್ದೇನೆ. ಚಾಮರಾಜನಗರ ಜಿಲ್ಲೆಯಲ್ಲಿ ರಾಜುಗೌಡ, ಮಹಾದೇವಪ್ರಸಾದ್, ಪುಟ್ಟರಂಗಶೆಟ್ಟಿ ಸೇರಿದಂತೆ ಅನೇಕರು ಸಚಿವರಾಗಿದ್ದಾರೆ. ಮೀಸಲು ಕ್ಷೇತ್ರದಿಂದ ಗೆದ್ದಿರುವ ನನಗೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡನೀಯ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬುದು ವಿದ್ಯಾರ್ಥಿಗಳ ಬೇಡಿಕೆ. ಈ ವಿಚಾರದಲ್ಲಿ ಬಿಜೆಪಿ ನಾಯಕರ ಸಮರ್ಥನೆ ಸರಿಯಿಲ್ಲ. ರಾಜಕೀಯ ಬಿಟ್ಟು ಮಾತನಾಡಬೇಕು ಎಂದರು.