Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೀಟ್ ಪರೀಕ್ಷೆಗೆ ಸಂಬ0ಧಿಸಿದ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ; ಮಾಜಿ ಸಂಸದ ಪ್ರತಾಪ್ ಸಿಂಹ


ಮೈಸೂರು: ನೀಟ್ ಪರೀಕ್ಷೆಗೆ ಸಂಬ0ಧಿಸಿದ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.
ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ಅವರು,
ನೀಟ್ ಮರುಪರೀಕ್ಷೆ ನಡೆದು, ಫಲಿತಾಂಶ ಪ್ರಕಟಗೊಂಡು ಹಲವು ದಿನಗಳ ನಂತರ ಪ್ರತಿಭಟನೆಗಳು ಆರಂಭವಾಗಿವೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಜ್ಯ ಮತ್ತು ದೆಹಲಿಯ ಕಾಂಗ್ರೆಸ್‌ನೊAದಿಗೆ ಸೇರಿಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ . ಇದು ಪೂರ್ವಯೋಜಿತ ಹುನ್ನಾರ ಎಂದು ಅಭಿಪ್ರಾಯಪಟ್ಟರು. ಹಿಂದೆ ಸಿಎಎ ಮತ್ತು ಕೃಷಿ ಮಸೂದೆಗಳ ವಿರುದ್ಧ ನಡೆದ ಪ್ರತಿಭಟನೆಗಳಂತೆಯೇ ಇದು ಮೋದಿ ಸರ್ಕಾರವನ್ನು ಅಲ್ಲಾಡಿಸುವ ಪ್ರಯತ್ನವಾಗಿದೆ.
ಇಂತಹ ಪ್ರಯತ್ನಗಳಿಗೆ ಅಮೆರಿಕನ್ ಡೀಪ್ ಸ್ಟೇಟ್‌ನಿಂದ ಧನಸಹಾಯ ದೊರೆಯುತ್ತಿದೆ ಎಂದು ಆರೋಪಿಸಿದರು. ಬಾಂಗ್ಲಾದೇಶ, ಶ್ರೀಲಂಕಾ ಮತ್ತು ನೇಪಾಳದಲ್ಲಿ ಸರ್ಕಾರಗಳನ್ನು ಬದಲಾಯಿಸಲು ಇದೇ ರೀತಿಯ ತಂತ್ರಗಳನ್ನು ಬಳಸಲಾಗಿದೆ. ಈಗ ಭಾರತವನ್ನು ಗುರಿಯಾಗಿಸಿಕೊಂಡು ಮೋದಿ ಸರ್ಕಾರವನ್ನು ದುರ್ಬಲಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕಿಡಿಕಾರಿದರು. ದೇಶದ ಹಿತಾಸಕ್ತಿಯನ್ನು ಕಾಪಾಡುವ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಇದು ನಡೆಯುತ್ತಿದೆ ಎಂದು ದೂರಿದರು.