Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ವಿವಿಧ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಸಮಾವೇಶಗೊಂಡ ಮುಖಂಡರು ಮೃತ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನವಾಗಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್. ಭಾಸ್ಕರ್ , ಒಂದು ದೇಶ ಒಂದು…

Read More

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಇಂದು ಬೃಹತ್ ಬೈಕ್ ರ‍್ಯಾಲಿಮೈಸೂರು: ಮೈಸೂರು ಜಿಲ್ಲಾ ಮಾಜಿ ಸೈನಿಕರ ಸಂಘಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಜು.೨೬ರಂದು ಬೃಹತ್ ಬೈಕ್ ರ‍್ಯಾಲಿಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಗಿಲ್ ಯುದ್ದದಲ್ಲಿ ವೀರಮರಣ ಹೊಂದಿದ ದೇಶದ ಸೈನಿಕರನ್ನು ಸ್ಮರಿಸುತ್ತಾ, ಯುವಪೀಳಿಗೆಗೆ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕ್ರೀಡಾಕೂಟಕ್ಕೆ ಚಾಲನೆ

ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು ಮೈಸೂರು : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರ ಕ್ರೀಡಾಕೂಟಕ್ಕೆ ಚಾಲನೆ ದೊರಕಿದ್ದು, ಮೊದಲ ದಿನ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದಲ್ಲಿ ಅಧ್ಯಕ್ಷ -11 ತಂಡವನ್ನು ಮಣಿಸಿದ ಪ್ರಧಾನ ಕಾರ್ಯದರ್ಶಿ-11 ತಂಡ ಗೆಲುವಿನ ನಗೆಬೀರಿದೆ.ಮೈಸೂರು ವಿವಿಯ ಓವಲ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ನಾಲ್ಕು ತಂಡಗಳು ಭಾಗವಹಿಸಿದ್ದವು. ಮೊದಲ ಪಂದ್ಯವನ್ನಾಡಿದ ಅಧ್ಯಕ್ಷ-11 ಗ್ರಾಮಾಂತರ ಉಪಾಧ್ಯಕ್ಷ-11 ತಂಡವನ್ನು 3 ರನ್ ಗಳ…

Read More

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ರದ್ದು ಮಾಡಲು ಆಗ್ರಹಿಸಿ ಕಾಂಗ್ರೆಸ್‌ನಿ0ದ ಪ್ರತಿಭಟನೆ

ಮೈಸೂರು; ನೀಟ್ ಪರೀಕ್ಷೆಯ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡು ೨೧ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರಕಾರ ಪರಿಹಾರ ನೀಡಬೇಕು, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್‌ಟಿಎ) ರದ್ದು ಮಾಡಬೇಕು ಎಂದು ಒತ್ತಾಯಿಸಿ, ನಗರ ಹಾಗೂ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಅಕ್ರಮ ಖಂಡಿಸಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಸರಿಯಲ್ಲ. ಅಕ್ರಮದಿಂದ ವಿದ್ಯಾರ್ಥಿ…

Read More

ಮೈಸೂರು ಸುಂದರವಾಗಿ ಇರಬೇಕಾದರೆ ಜನಗಳ ಸಹಕಾರ ಬೇಕು

ಮೈಸೂರು; ಅರಮನೆ ನಗರಿ ಮೈಸೂರು ಸುಂದರವಾಗಿ ಇರಬೇಕಾದರೆ ಜನಗಳ ಸಹಕಾರ ಬೇಕು. ಹಿಂದಿನ ರಾಜರುಗಳು ನಮಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಅದನ್ನು ಉಳಿಸಿಕೊಳ್ಳುವಂತ ಕೆಲಸ ನಾವು ಮಾಡಬೇಕು ಎಂದು ಮೈಸೂರು ನಗರಪಾಲಿಕೆಯ ನಿವೃತ್ತ ಆಯುಕ್ತ ಇಬ್ರಾಹಿಂ ಹೇಳಿದರು.ಶನಿವಾರ ನಗರದ ಸುಬ್ಬರಾಯನ ಕೆರೆಯಲ್ಲಿರುವ ಸ್ವಾತಂತ್ರö್ಯ ಉದ್ಯಾನವನದಲ್ಲಿ ಮೈಸೂರು ಕನ್ನಡ ವೇದಿಕೆಯಿಂದ ಏರ್ಪಡಿಸಿದ್ದ ಜಯ ಚಾಮರಾಜೇಂದ್ರ ಒಡೆಯರ್ ಮತ್ತು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರಿಗೆ ಸ್ವಚ್ಛತೆ ನಗರಿ ಎಂದು ಎರಡನೇ ಸ್ಥಾನದಲ್ಲಿತ್ತು . ಇದೆಲ್ಲ ಪೌರಕಾರ್ಮಿಕರು…

Read More

ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯರಿಂದ ನೂರಾರು ಮಂದಿ ಭಕ್ತರಿಗೆ ತಪ್ತ ಮುದ್ರಾಧಾರಣೆ

ಮೈಸೂರು; ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಮೈಸೂರಿನ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿಯವರು ಹಾಗೂ ಕಿರಿಯ ಶ್ರೀಗಳಾದ ವಿದ್ಯಾರಾಜೇಶ್ವರತೀರ್ಥಸ್ವಾಮ್ಭಿಜಿಯವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬೆಳಗ್ಗಿನಿಂದಲೇ ಸಹಸ್ರಾರು ಭಕ್ತರು ಶ್ರೀಗಳಿಂದ ಮುದ್ರಾಧಾರಣೆ ಮಾಡಿ ಮಾತನಾಡಿದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿ, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ…

Read More

ನೀಟ್ ಪರೀಕ್ಷೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡದೇ ವಿದ್ಯಾರ್ಥಿಗಳ ಹಿತಾಸಕ್ತಿಗೆ ಆದ್ಯತೆ ನೀಡಬೇಕು: ಸಂತೋಷ್ ಕುಮಾರ್ ಬಿ.ಎಂ.

ಮೈಸೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ದುರದೃಷ್ಟಕರ ಹಾಗೂ ಖಂಡನೀಯ ಘಟನೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೋವುಂಟು ಮಾಡುವ ಸಂಗತಿಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮೈಸೂರು ಮಹಾನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ.ಎಂ. ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವರನ್ನು…

Read More

ಭಾರತದಲ್ಲಿ ಅರಾಜಕತೆಯ ಮೂಲಕ ಯಾವುದೇ ಕ್ರಾಂತಿ ಆಗುವುದಿಲ್ಲ; ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ಕಾಂಗ್ರೆಸ್‌ನವರು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದರೆ ಭಾರತದಲ್ಲಿ ಅರಾಜಕತೆಯ ಮೂಲಕ ಯಾವುದೇ ಕ್ರಾಂತಿ ಆಗುವುದಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುತ್ತಮುತ್ತಲಿನ ರಾಷ್ಟçಗಳಲ್ಲಿ ಏನು ನಡೆದಿದೆಯೋ ಅದೇ ಮಾದರಿಯನ್ನು ಭಾರತದಲ್ಲಿಯೂ ಅನುಸರಿಸುತ್ತಿದ್ದಾರೆ. ಅಂತರರಾಷ್ಟಿçÃಯ ಷಡ್ಯಂತ್ರದ ಕಾರಣದಿಂದ ಹೀಗೆ ಹೋರಾಟ ನಡೆಸುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ’ ಎಂದು ಕಿಡಿಕಾರಿದರು.ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಏನೇ ಸಮಸ್ಯೆಗಳಿದ್ದಲ್ಲಿ ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕು. ಅದನ್ನು ಬಿಟ್ಟು ಕಾಂಗ್ರೆಸ್‌ನವರು ಬೀದಿಯಲ್ಲಿ…

Read More

ಕಾವೇರಿ ನೀರು ಕುರಿತ ಉಭಯ ರಾಜ್ಯಗಳ ಸಿಎಂಗಳ ಮಾತುಕತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು; ಕುರುಬೂರು ಶಾಂತಕುಮಾರ್

ಮೈಸೂರು; ಕಾವೇರಿ ನೀರು ಕುರಿತ ಉಭಯ ರಾಜ್ಯಗಳ ಸಿಎಂಗಳ ಮಾತುಕತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾವೇರಿ ಜೀವನದಿಯು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು. ಕೋರ್ಟ್-ಕಚೇರಿಗಳ ಸುದೀರ್ಘ ವ್ಯಾಜ್ಯಗಳಿಗಿಂತ, ಎರಡು ರಾಜ್ಯಗಳ ನಾಯಕರು ಪರಸ್ಪರ ಗೌರವ ಮತ್ತು ಸೌಹಾರ್ದತೆಯಿಂದ ಕೈಗೊಳ್ಳುವ ನಿರ್ಧಾರಗಳು,…

Read More