
ಮೈಸೂರು; ನಾಡ ಹಬ್ಬ ಮೈಸೂರು ದಸರಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳು ನಡೆಯುವ ಚಾಮುಂಡಿ ವಿಹಾರ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್ ಪರಿಶೀಲಿಸಿದರು.
ಈ ಬಾರಿ ದಸರಾ ಕ್ರೀಡೆಯಲ್ಲಿ ಯಾವುದೇ ನ್ಯೂನತೆ ಉಂಟಾಗದAತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕ್ರೀಡಾಂಗಣದಲ್ಲಿರುವ ದುರಸ್ಥಿ ಕಾಮಗಾರಿಗಳಿದ್ದಲ್ಲಿ ಕೂಡಲೇ ಕೈಗೊಂಡು ಪೂರ್ಣಗೊಳಿಸಿ ಎಂದರು.
ಪರಿಶೀಲನೆಯ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ಉಪಸ್ಥಿತರಿದ್ದರು