Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಿಡ ನೆಡುವ ಮೂಲಕ ಬಾಲಗಂಗಾಧರ ತಿಲಕ್ , ಚಂದ್ರಶೇಖರ ಆಜಾದ್ ಜನ್ಮ ದಿನಾಚರಣೆ

ಮೈಸೂರು: ನಗರದ ಚಾಮುಂಡಿಪುರ0ನಲ್ಲಿರುವ ತಗಡೂರು ರಾಮಚಂದ್ರರಾವ್ವೀರ ಸೇನಾನಿ ಚಂದ್ರಶೇಖರ ಆಜಾದ್ ಹಾಗೂ ಬಾಲಗಂಗಾಧರ ತಿಲಕ್ ಅವರ ಜನ್ಮದಿನಾಚರಣೆಯನ್ನುವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತುಸ್ವರಾಜ್ಯದ ಕನಸನ್ನು ಪ್ರತಿಯೊಬ್ಬ ಭಾರತೀಯನ ಎದೆಯಲ್ಲಿ ಬಿತ್ತಿ, ಅಖಂಡ ರಾಷ್ಟçಭಕ್ತಿಯ ಜಾಗೃತಿ ಮೂಡಿಸಿದ ಕ್ರಾಂತಿವೀರ ಲೋಕಮಾನ್ಯ ಬಾಲಗಂಗಾಧರ ತಿಲಕ್ ಹಾಗೂ ಬ್ರಿಟಿಷರ ಗುಲಾಮಗಿರಿಗೆ ಎಂದೂ ತಲೆಬಾಗದೆ, ಅಂತಿಮ ಉಸಿರಿನವರೆಗೂ ಚಂದ್ರಶೇಖರ ಆಜಾದ್’ಅವರ ಹೋರಾಟವನ್ನು ಈ ವೇಳೆ ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ನಗರ ಪಾಲಿಕೆಯ ಮಾಜಿ ಸದಸ್ಯ ಮಾ.ವಿ.ರಾಮ್ ಪ್ರಸಾದ್,ದಿ ಮೈಸೂರು ಕೋ ಆಪರೇಟಿವ್…

Read More

ತಂಬಾಕು ಬೆಳೆಗಾರರಿಗೆ ಹೆಚ್ಚಿದ ಆರ್ಥಿಕ ನೆರವು ಹೆಚ್ಚಿಸಿದ ಕೇಂದ್ರ ಸರ್ಕಾರ

ಮೈಸೂರು: ಪ್ರಾಕೃತಿಕ ವಿಕೋಪಗಳಿಂದ ಹಾನಿಗೊಳಗಾದ ಎಫ್‌ಸಿವಿ ತಂಬಾಕು ಬೆಳೆಗಾರರಿಗೆ ಮಹತ್ವದ ಪರಿಹಾರವಾಗಿ, ಭಾರತ ಸರ್ಕಾರವು ತಂಬಾಕು ಮಂಡಳಿಯ ಮೂಲಕ ನೀಡಲಾಗುವ ಅನುದಾನ ಮತ್ತು ಬಡ್ಡಿರಹಿತ ಸಾಲದ ಮೊತ್ತವನ್ನು ಹೆಚ್ಚಿಸಿದೆ. ಈ ಮಹತ್ವದ ನಿರ್ಧಾರವು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹಾಗೂ ತಂಬಾಕು ಮಂಡಳಿಯ ಮುಂದೆ ರೈತರ ಪರವಾಗಿ ನಿರಂತರವಾಗಿ ಮನವಿ ಸಲ್ಲಿಸಿದ್ದರ ಫಲವಾಗಿದೆ.ಪ್ರಾಕೃತಿಕ ವಿಕೋಪಗಳಿಂದ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು,…

Read More

ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ; ಡಾ ಎಸ್ ಸೆಲ್ವಕುಮಾರ್

ಮೈಸೂರು ; ಬರ ಪರಿಸ್ಥಿತಿ ತಲೆದೋರಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದುವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಎಸ್ ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಗುರುವಾರ ನಗರದ ಜಿಲ್ಲಾ ಪಂಚಾಯತ್ ನ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬರ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನ, ಜಾನುವಾರುಗಳಿಗೆ ಎಲ್ಲಿಯೂ…

Read More

ಬರಪೀಡಿತ ಜಿಲ್ಲೆ ಘೋಷಣೆ ಮಾಡಿ, ಕಬ್ಬು ಬಾಕಿ ಪ್ರತಿ ಟನ್‌ಗೆ 50 ರೂಪಾಯಿ ಪಾವತಿಗೆ ಒತ್ತಾಯಿಸಿ ಜು. 27ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ

ಮೈಸೂರು; ಬರಪೀಡಿತ ಜಿಲ್ಲೆ ಘೋಷಣೆ ಮಾಡಿ, ಕಬ್ಬು ಬಾಕಿ ಪ್ರತಿ ಟನ್‌ಗೆ 50 ರೂಪಾಯಿ ಪಾವತಿಗೆ ಒತ್ತಾಯಿಸಿ ಜು. 27ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ತಿಳಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದು,್ದ ಜಾನುವಾರುಗಳಿಗೆ ಮೇವು , ಜನರಿಗೆ ಕುಡಿಯಲು ನೀರು ಸಾಕಷ್ಟು ಇಲ್ಲ. ರೈತರು ಹಾಕಿರುವ…

Read More

ತಾಲೂಕಿನ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಪಿರಿಯಾಪಟ್ಟಣ; ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಸರ್ಕಾರಿ ಪ್ರೌಢ ಶಾಲೆಯು “2025-26ನೇ ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರ ರಾಷ್ಟ್ರಮಟ್ಟದ ಪ್ರಶಸ್ತಿ”ಗೆ ಆಯ್ಕೆಯಾಗಿದ್ದು, ಈ ಪ್ರಶಸ್ತಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೊಡುಗೆಯು ಅಪಾರವಾಗಿದೆ.ಪಿರಿಯಾಪಟ್ಟಣ ತಾಲ್ಲೂಕು ಅತ್ತಿಗೋಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಈ ಸರ್ಕಾರಿ ಪ್ರೌಢ ಶಾಲೆಯು ಮಾದರಿ ಶಾಲೆಯಾಗಿದ್ದು, ಈ ಶಾಲೆಯ ಅಭಿವೃದ್ಧಿಗೆ ನರೇಗಾ ಯೋಜನೆಯಡಿ ಸುಮಾರು 49 ಲಕ್ಷ ರೂ. ಹಾಗೂ 15ನೇ ಹಣಕಾಸು ಅನುದಾನದಡಿಯಲ್ಲಿ 3 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಲಾಗಿದೆ.ಮಹಾತ್ಮ…

Read More

ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಮೈಸೂರು; ಈ ಸಾಲಿನ ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆಯನ್ನು ಕೈ ಬಿಡಬೇಕೆಂದು ಆಗ್ರಹಿಸಿ ಗುರುವಾರ ನಗರದಲ್ಲಿ  ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ  ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ನಾನಾ ಘೋಷಣೆಗಳನ್ನು ಕೂಗಿದರು.  ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಕ್ರೀಡೆಯನ್ನು ಮೈಸೂರಿಗೆ, ನಮ್ಮ ಭಾವನೆಗಳಿಗೆ ವಿರುದ್ಧವಾಗಿ ಆಯೋಜನೆ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದರು. ಕಂಬಳ ಕ್ರೀಡೆಗೆ ನಮ್ಮ ಯಾವುದೇ…

Read More

ಓಣಂ ಹಬ್ಬದ ಪ್ರಯುಕ್ತ ಮೈಸೂರು-ಕಣ್ಣೂರು- ಬೆಂಗಳೂರು ದಂಡು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರಮೈಸೂರು; ಓಣಂ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಹಾಗೂ ಸುಗಮ ಪ್ರಯಾಣಕ್ಕೆ ಅನುಕೂಲವಾಗುವಂತೆ, ನೈಋತ್ಯ ರೈಲ್ವೆ ಮೈಸೂರು-ಕಣ್ಣೂರು-ಬೆಂಗಳೂರು ದಂಡು ನಡುವೆ ತಲಾ ಎರಡು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ.ರೈಲು ಸಂಖ್ಯೆ 06227 ಮೈಸೂರು-ಕಣ್ಣೂರು ವಿಶೇಷ ಎಕ್ಸ್ಪ್ರೆಸ್ 25.08.2026 (ಮಂಗಳವಾರ) ರಂದು 22:30 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 14:00 ಗಂಟೆಗೆ ಕಣ್ಣೂರು ತಲುಪಲಿದೆ.ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ…

Read More

ಎಲ್-ನಿನೊ ಭೀತಿ: ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಮೈಸೂರು ಜಿಲ್ಲಾ ಪಂಚಾಯತ್ ಮಾರ್ಗಸೂಚಿ

ಮೈಸೂರು: ಪ್ರಸಕ್ತ ವರ್ಷದಲ್ಲಿ ಎಲ್-ನಿನೋ ಪ್ರಭಾವದಿಂದಾಗಿ ಸಾಧಾರಣಕ್ಕಿಂತ ಕಡಿಮೆ ಮಳೆ ಹಾಗೂ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ತೋಟಗಾರಿಕಾ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ರೈತರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆಗಳನ್ನು ನೀಡಿದ್ದಾರೆ. ಬೆಳೆಗಳ ಮೇಲಾಗುವ ಪ್ರಮುಖ ಪರಿಣಾಮಗಳು: ತೇವಾಂಶದ ಅಭಾವದಿಂದ ಮಣ್ಣಿನಲ್ಲಿ ನೀರಿನ ಕೊರತೆಯುಂಟಾಗಿ ಹನಿ ನೀರಾವರಿಯ ಮೇಲಿನ ಅವಲಂಬನೆ ಹೆಚ್ಚಾಗುತ್ತದೆ ಮತ್ತು ಅಂತರ್ಜಲ ಹಾಗೂ ಜಲಾಶಯಗಳ…

Read More

ಚನ್ನಮ್ಮರವರು ದೇವೇಗೌಡರವರ ಕುಟುಂಬದ ಶಕ್ತಿಯಾಗಿದ್ದರು :  ಪಿ ಪ್ರಶಾಂತ್ ಗೌಡ

ಪಿರಿಯಾಪಟ್ಟಣ ತಾಲೂಕು ಒಕ್ಕಲಿಗರ ಸಂಘದಲ್ಲಿ  ಚನ್ನಮ್ಮರವರಿಗೆ ಶ್ರದ್ಧಾಂಜಲಿ ಸಭೆ  ಪಿರಿಯಾಪಟ್ಟಣ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮರವರು ದೇವೇಗೌಡರವರ ಕುಟುಂಬದ ಶಕ್ತಿಯಾಗಿದ್ದರು ಎಂದು ನಗರ ಪಾಲಿಕೆ ಮಾಜಿ ಸದಸ್ಯರು ಹಾಗೂ ಪಿರಿಯಾಪಟ್ಟಣ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಪಿ ಪ್ರಶಾಂತ್ ಗೌಡ ತಿಳಿಸಿದರು. ಪಟ್ಟಣದ ಒಕ್ಕಲಿಗರ ಸಂಘದ ಕಚೇರಿಯಲ್ಲಿ ದಿವಂಗತ ಶ್ರೀಮತಿ ಚನ್ನಮ್ಮರವರಿಗೆ ಏರ್ಪಡಿಸಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ರಾಜಕೀಯ ವ್ಯವಸ್ಥೆಗೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಕೊಡುಗೆಯಾಗಿ ನೀಡಿದ ಮಹಾತಾಯಿಯಾಗಿದ್ದಾರೆ  ಚನ್ನಮ್ಮರವರು…

Read More

ಸಂಶೋಧಕರು, ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಮೈಸೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ, ಹಾಗೂ ವಿದ್ಯಾರ್ಥಿ ಗಳ ಹೋರಾಟ ಬೆಂಬಲಿಸಿ ನಗರದಲ್ಲಿ ಬುಧವಾರ ಸಂಶೋಧಕರು, ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡನೀಯ ಹಾಗೂ ಅಮಾನವೀಯ. ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ದಮನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಕ್ರಮ ಪ್ರಶ್ನಿಸಿದ…

Read More