ಪೊಲೀಸ್ ಅಧಿಕಾರಿಗೆ ಜಮೀನು ಕೊಡಿಸುವ ಆಮಿಷ ವೊಡ್ಡಿ 65 ಲಕ್ಷ ರೂ ಪಂಗನಾಮ!
ಮೈಸೂರು: ಜಮೀನು ಕೊಡಿಸುವ ಆಮಿಷ ನೀಡಿ ಪೊಲೀಸ್ ಅಧಿಕಾರಿಗೆ ವಂಚಕರು 65 ಲಕ್ಷ ರೂ ಪಂಗನಾಮ ಹಾಕಿರುವ ಪ್ರಕರಣ ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಶ್ರೀನಿವಾಸ್ ವಂಚನೆಗೆ ಒಳಗಾದವರು.ಪದ್ಮಶ್ರೀ ಕನಸ್ಟçಕ್ಷನ್ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಮುಖ್ಯ ಆರೋಪಿ ನಾರಾಯಣಮೂರ್ತಿಯನ್ನು ಬಂಧಿಸಲಾಗಿದೆ. ನಾರಾಯಣಮೂರ್ತಿ ಪತ್ನಿ ಜಯಮಾಲಾ, ಪುತ್ರಿಯರಾದ ಪದ್ಮ, ಭವ್ಯ ಹಾಗೂ ಜಮೀನು ಮಾಲೀಕ ನಾಗೇಗೌಡ ವಿರುದ್ದ ಪ್ರಕರಣ ದಾಖಲಾಗಿದೆ.ನಾರಾಯಣಮೂರ್ತಿ ಪತ್ನಿ ಹಾಗೂ ಇಬ್ಬರು ಪುತ್ರಿಯರು ಮತ್ತು ನಾಗೇಗೌಡ ತಲೆ ನಾಪತ್ತೆಯಾಗಿದ್ದಾರೆ.ಈ…