ಬರನಿರ್ವಹಣೆ: ರಾಗಿ ಸೇರಿದಂತೆ ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಸಲಹೆ
ಮೈಸೂರು: ದೇಶದ ಹಲವು ರಾಜ್ಯಗಳಲ್ಲಿ ಆವರಿಸಿರುವ ಬರದ ಛಾಯೆ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನು ಕಾಡಿದೆ. ಬಹುತೇಕ ಕೃಷಿಯನ್ನೇ ಅವಲಂಬಿಸಿರುವ ಪರಂಪರೆಯ ನೆಲ ಮೈಸೂರು ಕೂಡ ವರುಣನ ಕೃಪೆಗೆ ತುತ್ತಾಗಿದ್ದು, ಜಿಲ್ಲೆಯಲ್ಲಿ ಶೇಕಡ 50 ರಷ್ಟು ಅಧಿಕ ಪ್ರಮಾಣದ ಬಿತ್ತನೆ ಕುಂಠಿತವಾಗಿದೆ. ಹೀಗಾಗಿ ಕಡಿಮೆ ನೀರು ಆಶ್ರಯಿಸುವ ಪರ್ಯಾಯ ಬೆಳೆ ಬಗ್ಗೆ ಗಮನ ಹರಿಸುವಂತೆ ರೈತರಿಗೆ ಕೃಷಿ ಇಲಾಖೆ ಸೂಚಿಸಿದೆ.ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ರೈತರಲ್ಲಿ ಬರ ನಿರ್ವಹಣೆಯ ಬಗ್ಗೆ ನಿರಂತರವಾಗಿ ಅರಿವು ಮೂಡಿಸುತ್ತ ಬಂದಿದ್ದು ಬೆಳೆ ವಿಮೆ…