ಟಿ.ನರಸೀಪುರ ಹೆದ್ದಾರಿ ಅಗಲೀಕರಣಕ್ಕೆ 86 ಮರಗಳ ತೆರವುಮೈಸೂರು: ಜಿಲ್ಲೆಯ ತಿ.ನರಸೀಪುರ ಪ್ರಾದೇಶಿಕ ಅರಣ್ಯ ವಲಯ ವ್ಯಾಪ್ತಿಯ, ಕೆಂಪಯ್ಯನಹುAಡಿ ರಾಷ್ಟ್ರೀಯ ಹೆದ್ದಾರಿ-766 ರ ಮೈಸೂರು-ತಿ.ನರಸೀಪುರ ಮುಖ್ಯರಸ್ತೆ 232.940 ಕಿ.ಮೀ ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಉದ್ದೇಶಿಸಿರುವುದರಿಂದ 86 ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ತೀರ್ಮಾನಿಸಿದೆ.ಸದರಿ ಕಾಮಗಾರಿಗೆ ಅಡಚಣೆ ಉಂಟಾಗುತ್ತಿರುವ ರಸ್ತೆಯ ಎಡ ಬದಿಯಲ್ಲಿರುವ 03 ಸಂಖ್ಯೆ ಅರಳಿ, 03 ಸಂಖ್ಯೆ ಹೊಂಗೆ, 03 ಸಂಖ್ಯೆ ಅಮಟೆ ಮತ್ತು 19 ಸಂಖ್ಯೆ ಬೇವು. 02 ಸಂಖ್ಯೆ ಗೊಬ್ಬಳಿ, 01 ಸಂಖ್ಯೆ…
Month: July 2026
ತಾರಕ, ಹೆಬ್ಬಳ್ಳ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಮಾತ್ರ ಬಳಕೆಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ತಾರಕ, ಹೆಬ್ಬಳ್ಳ ಜಲಾಶಯದ ಜಲಾನಯನ ಪ್ರದೇಶದಲ್ಲಿ ವಾಡಿಕೆಯಂತೆ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಕಾರಣ, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ತಾರಕ ಮತ್ತು ಹೆಬ್ಬಳ್ಳ ಜಲಾಶಯದಲ್ಲಿರುವ ನೀರನ್ನು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿದೆ ಎಂದು ಕಬಿನಿ ಜಲಾಶಯ ವಿಭಾಗದ ತಾರಕ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಹಾಗೂ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.ತಾರಕ ಮತ್ತು…
ಚಾಮುಂಡೇಶ್ವರಿಯಲ್ಲಿ 2.5 ಲಕ್ಷಕ್ಕೂ ಹೆಚ್ಚು ನಮೂನೆಗಳು ಡಿಜಿಟಲೀಕರಣಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸುತ್ತಿದ್ದ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ನಡೆಯುತ್ತಿದ್ದು, 2.5 ಲಕ್ಷಕ್ಕೂ ಹೆಚ್ಚು ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.ವಿಶೇಷ ಪರಿಷ್ಕರಣೆಯ ಪ್ರಗತಿಯನ್ನು ಮೈಸೂರು ಉಪವಿಭಾಗಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿಗಳ ಕಚೇರಿಯು ಬಿಡುಗಡೆ ಮಾಡಿದೆ. ಕ್ಷೇತ್ರದಲ್ಲಿ ಜೂನ್ 16 ರಲ್ಲಿದ್ದ ಒಟ್ಟು 3,57,327 ಮತದಾರರನ್ನು ತಲುಪಲು ತಯಾರಿಸಲಾಗಿದ್ದ ಎಲ್ಲಾ ಗಣತಿ ನಮೂನೆಗಳನ್ನು 341 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಶೇಕಡಾ 100 ರಷ್ಟು ಯಶಸ್ವಿಯಾಗಿ…
ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು
ಮೈಸೂರು: ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಕೆ.ಆರ್. ಆಸ್ಪತ್ರೆಯ ಅಧೀಕ್ಷಕಿ ಹಾಗೂ ಮೂಳೆ ತಜ್ಞೆ ಡಾ. ಹೆಚ್.ಪಿ. ಶೋಭಾ ಹೇಳಿದರು.ಸಮರ್ಥನಂ ವಿಶೇಷ ಚೇತನರ ಸಂಸ್ಥೆಯ ಜೀವನ ಕೌಶಲ್ಯ ತರಬೇತಿ ಕೇಂದ್ರದಿAದ ಮೈಸೂರು ನಗರದ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ 2026-27ನೇ ಸಾಲಿನ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಸ್ವಾಗತ ಕಿಟ್ ವಿತರಣೆ ಹಾಗೂ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂದೆ, ಪತಿ ಅಥವಾ ಮಕ್ಕಳ ಮೇಲೆಯೇ ಅವಲಂಬಿತರಾಗದೆ, ತಮ್ಮ ಸ್ವಂತ ಸಾಮರ್ಥ್ಯದ…
ಉತ್ತಮ ಸಮಾಜ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ; ನಿತ್ಯಾನಂದ ಎಸ್.ಬಿ
ಮೈಸೂರು; ಉತ್ತಮ ಸಮಾಜ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ಎಂದು ಸಂಸ್ಕೃತಿ ಚಿಂತಕ ನಿತ್ಯಾನಂದ ಎಸ್ ಬಿ ಹೇಳಿದರು.ಗುರುವಾರ ಮೈಸೂರಿನ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ 2026- 27 ನೇ ಸಾಲಿನ ಸಾಂಸ್ಕೃತಿಕ ಸಾಹಿತ್ಯಕ ಮತ್ತು ಕ್ರೀಡಾ ವೇದಿಕೆಗಳ ಉದ್ಘಾಟನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು , ವಿದ್ಯಾರ್ಥಿಗಳು ಶ್ರೇಷ್ಠವಾದ ಗುರಿಯನ್ನು ಹೊಂದಿ, ಸತತವಾದ ಪರಿಶ್ರಮದಿಂದ ಸಾಧಿಸುವುದಕ್ಕೆ ಸಾಧ್ಯವಿದೆ ಎಂದರು.ಮನುಷ್ಯನು ಸರಿ ಹೋದರೆ ಬೇರೆಲ್ಲವೂ ಸರಿ ಹೋಗುವುದು ಎಂದು ತಿಳಿದು, ದೇಶವನ್ನು ಬದಲಾಯಿಸದೆ ನಮ್ಮನ್ನು…
ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ
ಮೈಸೂರು: ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಖಾಲಿ ಬಿಂದಿಗೆಗಳನ್ನು ಹಿಡಿದು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಅಗ್ರಹಾರದ ಮಾಧವರಾವ್ ವೃತ್ತದಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಜಮಾಯಿಸಿದ ಪ್ರತಿಭಟನಾಕಾರರು, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಕೊರತೆಯಿಂದ ಜಲಾಶಯಗಳು ಬರಿದಾರಿವೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದ…
ಉದ್ಯೋಗಾಕಾಂಕ್ಷಿಗಳ ಲಾಭಕ್ಕಾಗಿ 08 ನೇ ಸಮಗ್ರ ಅಣುಕು ಪರೀಕ್ಷೆ
ಮೈಸೂರು; ಆಗಸ್ಟ್ 02 ರಂದು ರಾಜ್ಯಾದ್ಯಂತ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ಗಳ ನೇಮಕಾತಿಗಾಗಿ ಸರ್ಕಾರದಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುತ್ತಿರುವ ಉದ್ಯೋಗಾಕಾಂಕ್ಷಿಗಳ ಉಪಯೋಗಕ್ಕಾಗಿ ಈವರೆವಿಗೂ ಮೈಸೂರಿನ ನಗರ ಕೇಂದ್ರ ಗ್ರಂಥಾಲಯ ಪೀಪಲ್ಸ್ ಪಾರ್ಕ್ ಗ್ರಂಥಾಲಯ ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಉಚಿತವಾಗಿ 07 ಅಣಕು ಪರೀಕ್ಷೆಗಳನ್ನು ನಡೆಸಲಾಗಿದ್ದು, ಗುರುವಾರ 08 ನೇ ಸಮಗ್ರ ಅಣುಕು ಪರೀಕ್ಷೆಯನ್ನು ಉದ್ಯೋಗಾಕಾಂಕ್ಷಿಗಳ ಲಾಭಕ್ಕಾಗಿ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆಸಲಾಯಿತು.ಸದರಿ ಅಣಕು ಪರೀಕ್ಷೆಗೆ…
ಯುಜಿಸಿ ನಿಯಮಗಳನ್ನು ಕಟುನಿಟ್ಟಾಗಿ ಪಾಲಿಸಿ:ಪ್ರೋ ಎ.ಪಿ ಜ್ಞಾನಪ್ರಕಾಶ್
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರತಿಯೊಂದು ಕಲಿಕಾರ್ಥಿ ಸಹಾಯ ಕೇಂದ್ರವು ಯುಜಿಸಿಯ 2020 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ, ಪಾರದರ್ಶಕ ಮತ್ತು ಜವಾಬ್ದಾರಿಯುತ ಸೇವೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎ.ಪಿ ಜ್ಞಾನಪ್ರಕಾಶ್ ಅವರು ಹೇಳಿದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026–27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಅಭಿಯಾನವನ್ನು ಅನುಷ್ಠಾನಗೊಳಿಸುವ ಹಾಗೂ ಕಲಿಕಾರ್ಥಿ ಸಹಾಯ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ಯುಜಿಸಿ ನಿಯಮಾವಳಿಗೆ ಅನುಗುಣವಾಗಿ ಬಲಪಡಿಸುವ ಉದ್ದೇಶದಿಂದ,…
ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನದ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸರ ಹೈ ಅಲರ್ಟ್
ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆ.1 ರಂದು ಅರಮನೆ ನಗರಿ ಮೈಸ್ರರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅವರ ಸ್ವಾಗತಕ್ಕೆ ಭರದ ಸಿದ್ಧತೆಗಳು ನಡೆದಿವೆ. ಅಲ್ಲದೆ ಪೊಲೀಸರು, ಗುಪ್ತದಳದವರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.ಮೋದಿಯವರು ಕಾರಿನಲ್ಲಿ ಹಾದು ಹೋಗುವ ರಸ್ತೆಗಳನ್ನು ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ರಸ್ತೆಯ ಪುಟ್ಪಾತ್ಗಳನ್ನು ಸರಿಪಡಿಸಲಾಗಿದೆ. ಅಲ್ಲದೇ ರಸ್ತೆಯ ಎರಡು ಕಡೆಗಳನ್ನು ಜನರು ರಸ್ತೆಗೆ ನುಗ್ಗದಂತೆ ತಡೆಯುವುದಕ್ಕಾಗಿ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ. ರಸ್ತೆಯ ಎರಡು ಬದಿಗಳಲ್ಲೂ ಬಣ್ಣಗಳನ್ನು ಹೊಡೆಯಲಾಗಿದೆ. ಕೆಟ್ಟಿರುವ ಬೀದಿ ದೀಪಗಳ ದುರಸ್ಥಿ ಕಾರ್ಯ ಮಾಡಲಾಗಿದೆ….
ಕೈಗಾರಿಕಾ ಪ್ರೇರಣಾ ಕಾರ್ಯಕ್ರಮ ಯಶಸ್ವಿ
ಮೈಸೂರು: ಸೂಕ್ಷö್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಶ್ರೀ ಗಂಗಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉದ್ಯಮಶೀಲತೆ ಮತ್ತು ಕೈಗಾರಿಕಾ ಪ್ರೇರಣೆ ಕುರಿತು ಉದ್ಯಮಶೀಲತಾ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.100ಕ್ಕೂ ಹೆಚ್ಚು ಯುವಕರು, ಮಹಿಳೆಯರು, ಉದ್ಯಮ ಆರಂಭಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.ಎAಎಸ್ಎAಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಸಹಾಯಕ ನಿರ್ದೇಶಕ ಶಿವಕುಮಾರ್ ಎ. ಅವರು ಇಲಾಖೆಯ ವಿವಿಧ ಯೋಜನೆಗಳು, ಉದ್ಯಮಿಗಳಿಗೆ ದೊರೆಯುವ ಸೇವೆಗಳು,…