Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ಅಪಾರವಾದದ್ದು : ರೋಟರಿ ಕ್ಲಬ್ ಅಧ್ಯಕ್ಷ ಬಲರಾಮ್ 

ಪಿರಿಯಾಪಟ್ಟಣ : ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ಅಪಾರವಾದದ್ದು ಎಂದು ಪಿರಿಯಾಪಟ್ಟಣ ರೋಟರಿ ಕ್ಲಬ್ ಅಧ್ಯಕ್ಷ ಬಲರಾಮ್ ತಿಳಿಸಿದರು. ಪಿರಿಯಾಪಟ್ಟಣ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಕುಂದನಹಳ್ಳಿ ಕೂರ್ಗ್ ವಾಟರ್ ಪಾರ್ಕ್ ನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಶೌರ್ಯವನ್ನು ಮೆರೆದ ಈ ದಿನ ಮುಂದಿನ ಪೀಳಿಗೆಗೆ ಪ್ರೇರಣೆಯ ದಿನವಾಗಿದೆ ನಮ್ಮ ದೇಶದ ಸೈನಿಕರು ಮಳೆ, ಗಾಳಿ, ಬಿಸಿಲು, ಚಳಿ ಎನ್ನದೆ ಹಗಲಿರುಳು ದೇಶಕ್ಕಾಗಿ ದುಡಿಯುತ್ತಿದ್ದಾರೆ…

Read More

ರಾಗಿ ಖರೀದಿ ಮಾಡಿದ ಹಣವನು ಶೀಘ್ರ ಬಿಡುಗಡೆಗೊಳಿಸಿ : ಹೊಸೂರು ಕುಮಾರ್

ಪಿರಿಯಾಪಟ್ಟಣ : ರಾಗಿ ಖರೀದಿ ಮಾಡಿದ ಹಣವನು ಶೀಘ್ರ ಬಿಡುಗಡೆಗೊಳಿಸಬೇಕು ಹಾಗೂ ತಾಲೋಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ತಿಳಿಸಿದರು.  ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಿ ತಹಶೀಲ್ದಾರ್ ನಿಸರ್ಗ ಪ್ರಿಯರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ಸರ್ಕಾರ ರೈತರಿಂದ ರಾಗಿ ಖರೀದಿ ಮಾಡಿ 5 ತಿಂಗಳು ಕಳೆದರು ಸರ್ಕಾರ…

Read More

ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶದಂತೆ ದಿನನಿತ್ಯ 3500 ಕೂಸಸ್ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ; ಕುರುಬೂರು ಶಾಂತಕುಮಾರ್

ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಪ್ರಸಕ್ತ ಸನ್ನಿವೇಶದಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕೆ.ಆರ್.ಎಸ್, ಕಬಿನಿ, ಹಾರಂಗಿ…

Read More

ಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕು ; ನಿತೇಶ್ ಪಾಟೀಲ್

ಮೈಸೂರು: ಮೈಸೂರು ಭಾಗದಲ್ಲಿರುವ ಜಲಾಶಯಗಳ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕು ಎಂದು ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿಯ ಅಧ್ಯಕ್ಷರು ಹಾಗೂ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ತಿಳಿಸಿದ್ದಾರೆ.ಸರ್ಕಾರದ ಜಲಸಂಪನ್ಮೂಲ ಇಲಾಖೆಯು ಸೂಚಿಸಿರುವಂತೆ ಪ್ರಸಕ್ತಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿರುವ್ಯದರಿಂದ, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿರುವ ಹಿನ್ನಲೆಯಲ್ಲಿ, ರಾಷ್ಟಿçÃಯ ಹಾಗೂ ಜಲನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾದ ಕಾರಣ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ…

Read More

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ

ಮೈಸೂರು: ಆಷಾಢ ಮಾಸದ ಶುಕ್ರವಾರಗಳ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ಸುರಕ್ಷಿತ, ಶಾಂತಿಯುತ ಮತ್ತು ಸುಗಮ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತವು ವಿಶೇಷ ಸಂಚಾರ ಮತ್ತು ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಶಿಷ್ಟಾಚಾರದ ವ್ಯಾಪ್ತಿಗೆ ಒಳಪಡುವ ವಾಹನಗಳನ್ನು ಹೊರತುಪಡಿಸಿ, ಉಳಿದ ಯಾವುದೇ ಇತರೆ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳಿಗೆ ಅಷಾಢ ಶುಕ್ರವಾರ ಚಾಮುಂಡಿ ಬೆಟ್ಟ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ವಾಹನ ಪ್ರವೇಶಕ್ಕೆ ಸಂಬAಧಿಸಿದAತೆ ಸಲ್ಲಿಸಲಾಗುವ ಯಾವುದೇ ರೀತಿಯ…

Read More

ವಿಜಯ ವಿಠಲ ಕಾಲೇಜಿನಲ್ಲಿ ಜಿ.ಎಸ್. ಶಿವರುದ್ರಪ್ಪ – ಕವಿ ಕಾವ್ಯ ನಮನ”

ಮೈಸೂರು; ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಕವಿ, ರಾಷ್ಟç ಕವಿ ಜಿ.ಎಸ್. ಶಿವರುದ್ರಪ್ಪ ಅವರ ಸಾಹಿತ್ಯ, ಕಾವ್ಯ ಮತ್ತು ಕನ್ನಡ ಭಾಷೆಗೆ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಜಿ.ಎಸ್. ಶಿವರುದ್ರಪ್ಪ – ಕವಿ ಕಾವ್ಯ ನಮನ ಕರ‍್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬಿ. ಬಾಲಕೃಷ್ಣಯ್ಯ, ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಿ.ಎಸ್. ಶಿವರುದ್ರಪ್ಪ ಅವರು ಕನ್ನಡ…

Read More

ದಸರಾ ಹಿನ್ನಲೆ ಕ್ರೀಡಾಂಗಣಗಳ ಪರಿಶೀಲನೆ

ಮೈಸೂರು; ನಾಡ ಹಬ್ಬ ಮೈಸೂರು ದಸರಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳು ನಡೆಯುವ ಚಾಮುಂಡಿ ವಿಹಾರ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್ ಪರಿಶೀಲಿಸಿದರು.ಈ ಬಾರಿ ದಸರಾ ಕ್ರೀಡೆಯಲ್ಲಿ ಯಾವುದೇ ನ್ಯೂನತೆ ಉಂಟಾಗದAತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕ್ರೀಡಾಂಗಣದಲ್ಲಿರುವ ದುರಸ್ಥಿ ಕಾಮಗಾರಿಗಳಿದ್ದಲ್ಲಿ ಕೂಡಲೇ ಕೈಗೊಂಡು ಪೂರ್ಣಗೊಳಿಸಿ ಎಂದರು.ಪರಿಶೀಲನೆಯ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ…

Read More

ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ; ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್

ಮೈಸೂರು: ನಾನು ಸಾರ್ವಜನಿಕ ಜೀವನದಲ್ಲಿ ಮುಂದುವರೆಯುತ್ತೇನೆ. ಆದರೆ ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.ಮಂಗಳವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ನಸಿದ್ದರಾಮಯ್ಯ ಅವರು ಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂಬುದು ಬ್ಲಾಕ್ ಮೇಲ್ ತಂತ್ರವಾಗಿದೆ. ಅವರು ಹಿಂದುಳಿದ ವರ್ಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗವಾಗಿ ಹೇಳಲಿ. ಅವರು ಬರಿ ಬೊಗಳೆ ಬಿಡೋದು ಹಾಗೂ ಡೋಂಗಿ ಆಟ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.ಪ್ರಜಾಪ್ರಭುತ್ವ…

Read More

ಹೊಸಗನ್ನಡದ ಸಿರಿತನಕ್ಕೆ ಹಳಗನ್ನಡವೇ ಬೇರು:ನಾಡೋಜ ಡಾ. ಹಂಪ ನಾಗರಾಜಯ್ಯ

ಮೈಸೂರು: ಹೊಸಗನ್ನಡದ ಹೂವುಗಳು ಕಂಗೊಳಿಸುತ್ತಿದ್ದರೆ, ಅದಕ್ಕೆ ಹಳಗನ್ನಡವೇ ಬೇರು ಕಾರಣ. ಹಳೆಗನ್ನಡ ಕಾವ್ಯಗಳು ಕಠಿಣವಾದವುಗಳಲ್ಲ, ಅವುಗಳನ್ನು ಓದುತ್ತಾ ಹೋದಂತೆ ವ್ಯಾಖ್ಯಾನಗಳು ಸುಲಭವಾಗಿ ಅರ್ಥವಾಗುತ್ತವೆ ಎಂದು ಹಿರಿಯ ವಿದ್ವಾಂಸ ನಾಡೋಜ ಡಾ. ಹಂಪ ನಾಗರಾಜಯ್ಯ ಹೇಳಿದರು.ಮಂಗಳವಾರ ನಗರದ ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಮತ್ತು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರಿಗೆ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ…

Read More