ಗಿಡಗಳನ್ನು ನೆಡುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಣೆ
ಮೈಸೂರು; ಕಾರ್ಗಿಲ್ ವಿಜಯ ದಿವಸವನ್ನು ಇಂದು ಟೀಂ ಮೈಸೂರು ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು, ಇಂದಿರಾನಗರ ಜೊತೆಗೂಡಿ ೪೦ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು.ಇಟ್ಟಿಗೆಗೂಡಿನ ಮಕ್ಕಳ ಉದ್ಯಾನವನದಲ್ಲಿ ೪೦ ಗಿಡಗಳನ್ನು ನೆಟ್ಟು ವೀರ ಯೋಧರಿಗೆ ಗೌರವ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಲಾಯಿತು.ಈ ವೇಳೆ ಮಾತನಾಡಿದ ತಂಡದ ಮುಖಂಡ ಗೋಕುಲ್ ಗೋವರ್ಧನ್,ಯೋಧರು ದೇಶವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟಿರುತ್ತಾರೆ, ಆದರೆ ದೇಶದ ಒಳಗೆ ಇರುವ ನಾಗರೀಕರು ಪರಿಸರ ಸಂರಕ್ಷಣೆ ಹಾಗೂ ಹಸಿರು…