Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ; ಪ್ರಧಾನ ಮಂತ್ರಿ ನರೇಂದ್ರ ಮೋದಿ

ಮೈಸೂರು; ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಶನಿವಾರ ಮೈಸೂರಿನಲ್ಲಿ ರಾಮಕೃಷ್ಣ ಆಶ್ರಮದಿಂದ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು,ಭಾರತದ ಯುವಶಕ್ತಿಯಿಂದಾಗಿಯೇ ಇಂದು ಭಾರತವು ವಿಶ್ವದಲ್ಲೇ 3ನೇ ಅತಿ ದೊಡ್ಡ ಸ್ಟಾರ್ಟ್ಅಪ್ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದರು. ದೇಶವೇ ಮೊದಲು. ಯುವಕರೇ ದೇಶದ ಶಕ್ತಿಯಾಗಿದ್ದಾರೆ. ದೇಶದ ಅಭಿವೃದ್ಧಿಗೆ ಯುವ ಶಕ್ತಿ ಅತ್ಯಗತ್ಯವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹಳ ಮಹತ್ವವಾದದ್ದು, ಹಾಗಾಗಿ ಯುವಕರಿಗೆ ಸರಿಯಾದ…

Read More

ವಿವೇಕಾನಂದರ ಸ್ಪೂರ್ತಿ ಇಂದಿನ ಸಮಾಜಕ್ಕೆ ಅಗತ್ಯ: ಡಿ.ಕೆ. ಶಿವಕುಮಾರ್

ಮೈಸೂರು, ಆ. 1: ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ಚಿಂತನೆಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಯುವಜನತೆ ಅವರ ಆತ್ಮವಿಶ್ವಾಸ, ಸೇವಾ ಮನೋಭಾವ ಹಾಗೂ ರಾಷ್ಟ್ರಭಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆದ ವಿವೇಕ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವ್ಯಕ್ತಿತ್ವ ನಿರ್ಮಾಣದ ಮೂಲಕವೇ ರಾಷ್ಟ್ರ ನಿರ್ಮಾಣ ಸಾಧ್ಯ ಎಂಬ ಸ್ವಾಮಿ ವಿವೇಕಾನಂದರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದರು. ರಾಮಕೃಷ್ಣ ಆಶ್ರಮವು ಶಿಕ್ಷಣ, ಸಂಸ್ಕಾರ ಮತ್ತು ಮಾನವಸೇವೆಯ…

Read More

ವೈನಾಡಿನಲ್ಲಿ ಭರ್ಜರಿ ಮಳೆ; ಇಂದೇ ಕಬಿನಿ ಜಲಾಶಯ ಭರ್ತಿ ಸಾಧ್ಯತೆ 

ಸುರಕ್ಷಿತ ಸ್ಥಳಗಳಿಗೆ ತೆರಳಲು ಕಾರ್ಯಪಾಲಕ ಎಂಜನಿಯರ್ ಮನವಿ  ಎಚ್.ಡಿ.ಕೋಟೆ:  ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯ ಈ ಬಾರಿ ತಡವಾಗಿ ಭರ್ತಿಯಾಗುವತ್ತ ಸಾಗಿದೆ.  2284 ಅಡಿ ಸಾಮರ್ಥ್ಯದ  ಕಪಿಲಾ ಜಲಾಶಯ ಶನಿವಾರ ಗರಿಷ್ಠ ಮಟ್ಟ ತಲುಪಿದ್ದು, 2281 ಅಡಿ ನೀರು ಸಂಗ್ರಹವಾಗಿದೆ.  ಪ್ರಸ್ತುತ ಅಣೆಕಟ್ಟೆಗೆ 16 ರಿಂದ 18 ಸಾವಿರ  ಕ್ಯೂಸೆಕ್‌ ನೀರಿನ ಒಳಹರಿವು ಬರುತ್ತಿದ್ದು,  6 ರಿಂದ 8 ಸಾವಿರ ಕ್ಯೂಸೆಕ್ ನೀರು  ಹೊರಬಿಡಲಾಗಿದೆ. ಹೀಗಾಗಿ ಭಾನುವಾರ  ಜಲಾಶಯ ಸಂಪೂರ್ಣ…

Read More

ಕಬಿನಿ ಅಚ್ಚುಕಟ್ಟು  ನಾಲೆಗಳಿಗೆ ನೀರು  ಹರಿಸುವಂತೆ  ಒತ್ತಾಯಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ಚಳುವಳಿ 

ಹೆಚ್.ಡಿ.ಕೋಟೆ.  ಕಾವೇರಿ ಉಳಿಸಿ ಕಬಿನಿ ಅಚ್ಚುಕಟ್ಟು  ನಾಲೆಗಳಿಗೆ ನೀರು  ಹರಿಸುವಂತೆ  ಒತ್ತಾಯಿಸಿ ರಾಜ್ಯ ರೈತ ಸಂಘದ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ  ತಾಲೂಕಿನ ಹ್ಯಾಂಡ್ ಪೋಸ್ಟ್  ಸರ್ಕಲ್ ನಲ್ಲಿ  ರಸ್ತೆ ತಡೆ ಚಳುವಳಿ ನಡೆಸಲಾಯಿತು.  ಮಳೆಯಿಲ್ಲದೆ  ಕಬಿನಿ  ಅಚ್ಚುಕಟ್ಟು ರೈತರು ಸಂಕಷ್ಟದಲ್ಲಿದ್ದಾರೆ.  ರೈತ ಸಂಕುಲಕ್ಕೆ ಜೀವನಾಡಿಯಾಗಿರುವ ದನ ಕರುಗಳಿಗೆ ಕುಡಿಯುವ ನೀರಿಗಾಗಿ ಅತೀವ ತೊಂದರೆಯಾಗಿದ್ದು ಕೆರೆಕಟ್ಟೆಗಳು ಒಣಗಿವೆ.   ಕೂಡಲೇ ಕಬಿನಿ ಅಚ್ಚುಕಟ್ಟು  ನಾಲೆಗಳಿಗೆ ನೀರು ಹರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಯಿತು.  ಕುರುಬೂರು ಶಾಂತಕುಮಾರ್ ಮಾತನಾಡಿ, ಕಾವೇರಿ…

Read More

ಸಿಎಂ ಆದ ಬಳಿಕ ಮೈಸೂರಿಗೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ

*ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು.ಮೈಸೂರು: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಶನಿವಾರ ಆಗಮಿಸಿದ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು.ಮೈಸೂರಿಗೆ ಆಗಮಿಸಿದ ಅವರಿಗೆ ವಿಳ್ಳೇದೆಲೆಯಿಂದ ಮಾಡಿದ ಭಾರೀ ಗಾತ್ರದ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತ ಕೋರಲಾಯಿತು.ನಗರದ ಕಾರಂಜಿಕೆರೆ ವೃತ್ತದ ಬಳಿ ಜಮಾವಣೆಗೊಂಡ ಪಕ್ಷದ ಕಾರ್ಯಕರ್ತರು ಡಿ.ಕೆಶಿವಕುಮಾರ್ ಅವರನ್ನು ಸ್ವಾಗತಿಸಿ ಮೆರವಣಿಗೆ ನಡೆಸಿದರು. ಡಿಕೆಶಿ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು….

Read More

ಅಣೆಕಟ್ಟು ತುಂಬಿದಾಗ ನದಿಗೆ ನೀರು ಹರಿಸಲೇಬೇಕಾಗುತ್ತದೆ; ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ಮೈಸೂರು ಜಿಲ್ಲೆಯ ಎಚ್.ಡಿ.,ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನದಿಗೆ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಾಗದು. ಹಾಗಾಗಿ ಜಲಾಶಯದಿಂದ ನೀರು ಬಿಡಬಾರದೆಂದು ಸಂಘಟನೆಗಳು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಮನವಿ ಮಾಡಿದರು.ಶನಿವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಬಿನಿ ಜಲಾಶಯದ ನೀರಿನ ಸಂಗ್ರಹಣೆ ಬಗ್ಗೆ ಅಧಿಕಾರಿಗಳು ಪ್ರತಿ ಗಂಟೆಗೊಮ್ಮೆ ನನಗೆ ಮಾಹಿತಿ ನೀಡುತ್ತಿದ್ದಾರೆ. ಪ್ರಕೃತಿ ಯಾರ ಸ್ವತ್ತೂ ಅಲ್ಲ. ಪ್ರಕೃತಿಯ…

Read More

ಮೈಸೂರು ಭಾರತದ ಪುರಾತನ ಸಾಂಸ್ಕೃತಿಕ ಕೇಂದ್ರವಾಗಿದೆ; ಪ್ರಧಾನಿ ನರೇಂದ್ರ ಮೋದಿ

ಮೈಸೂರು; ಮೈಸೂರು ಭಾರತದ ಪುರಾತನ ಸಾಂಸ್ಕೃತಿಕ ಕೇಂದ್ರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಣ್ಣಿಸಿದರು.ಶನಿವಾರ ಮೈಸೂರಿನ ನಾರಾಯಣಶಾಸ್ತಿç ರಸ್ತೆಯಲ್ಲಿ ರಾಮಕೃಷ್ಣ ಆಶ್ರಮದಿಂದ ಸುಮಾರು 45 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡದಲ್ಲಿಯೇ ಮೊದಲಿಗೆ ಎಲ್ಲರಿಗೂ ನಮಸ್ಕಾರಗಳು ಎಂದು ಭಾಷಣ ಆರಂಭಿಸಿ, ನಾಡ ಶಕ್ತಿದೇವತೆಯಾದ ತಾಯಿ ಚಾಮುಂಡೇಶ್ವರಿಗೆ ನಮಿಸಿದರು. ಮೈಸ್ರರಿಗೆ ಬಂದಿರುವುದು ನನಗೆ ಸಂತೋಷವನ್ಮ್ನAಟು ಮಾಡಿದೆ. ಮೈಸೂರು ಭಾರತದ ಪುರಾತನ ವಿಶಿಷ್ಟವಾದ ಸಾಂಸ್ಕೃತಿಕ ಕೇಂದ್ರವಾಗಿದೆ. ಇಲ್ಲಿನ ಸಂಸ್ಕೃತಿ, ಪರಂಪರೆ, ದೇವಸ್ಥಾನಗಳು, ಅರಮನೆ,…

Read More