Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವೋಟ್ ಚೋರಿ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಸ್ಐ ಆರ್ ಪ್ರಯೋಗ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ 

ಪಿರಿಯಾಪಟ್ಟಣ: ದೇಶದಾದ್ಯಂತ ನಡೆದ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವು ವೋಟ್ ಚೋರಿ ಮೂಲಕ ಅಧಿಕಾರಕ್ಕೆ ಬಂದಿದ್ದು ಕರ್ನಾಟಕದಲ್ಲಿಯೂ ಸಹ ಅಧಿಕಾರದ ಚುಕ್ಕಾಣಿ ಹಿಡಿಯಲು ಎಸ್ ಐಆರ್ ಪ್ರಯೋಗ ಮಾಡುವ ಪ್ರಯತ್ನ ನಡೆಸುತ್ತಿದೆಯೆಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 5 ಕೋಟಿ 56 ಲಕ್ಷ ಮತದಾರರು ನೊಂದಣಿಯಾಗಿದ್ದು ಇವರ ಪೈಕಿ 1ಕೋಟಿ5ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಹಾಕಿದರೆ. ಡೆತ್, ಡಿಲಿಟ್, ಅಥರ್ಸ್, ಆಬ್ಸೆಂಟ್ ಎಂಬ ಕಾರಣಗಳನ್ನು ನೀಡಿ ಇಷ್ಟು ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ ಮೈಸೂರು ಜಿಲ್ಲೆಯಲ್ಲಿ 565869, ಪಿರಿಯಾಪಟ್ಟಣದಲ್ಲಿ 21795 ಮತದಾರರನ್ನು ಪಟ್ಟಿಯಿಂದ ಹೊರಗಿದ್ದಾರೆ. ಸ್ಥಳೀಯ ಶಾಸಕರಾದ ಕೆ.ವೆಂಕಟೇಶ ಮತ್ತು ಅವರ ಮಗ ನಿತಿನ್ ವೆಂಕಟೇಶ್ ಅವರ ನಿರಂತರ ಪ್ರಯತ್ನ, ಬಿಎಲ್ ಎ,ಕಾರ್ಯಕರ್ತರ ಶ್ರಮದಿಂದಾಗಿ ತಾಲೂಕಿನಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಮತದಾರರು ಮ್ಯಾಪಿಂಗ್ ಮುಗಿದಿದೆ. ಮೈಸೂರಿನ ಚಾಮರಾಜ, ಕೃಷ್ಣರಾಜ , ನರಸಿಂಹರಾಜ ಕ್ಷೇತ್ರಗಳಲ್ಲಿ ಹೆಚ್ಚು ಮತದಾರರು ಪಟ್ಟಿಯಿಂದ ಹೊರ ಉಳಿದಿದ್ದಾರೆ ಪಿರಿಯಾಪಟ್ಟಣ ಕ್ಷೇತ್ರದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಉಳಿದಿರುವ 5 ದಿನದಲ್ಲಿ ಹೆಚ್ಚು ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸಿದರೆ ಮತ್ತಷ್ಟು ಮತದಾರರನ್ನು ಪಟ್ಟಿಗೆ ಸೇರ್ಪಡಿಸಬಹುದು.

ಬಿಎಲ್ಓ ಗಳು ಮತದಾರರಿಗೆ ಸರಿಯಾದ ಮಾಹಿತಿ ನೀಡದೇ ಅವರು ನೀಡುವ ಅರ್ಜಿಗಳನ್ನು ಡಿಜಿಟಲ್ ಮಾಡುತ್ತಿದ್ದಾರೆ ಇದರಿಂದ ಮುಂದಿನ ದಿನಗಳಲ್ಲಿ ಅವರಿಗೆ ನೋಟಿಸ್ ನೀಡಿ ತಹಶೀಲ್ದಾರ ಕಚೇರಿಯನ್ನು ಅಲೆಯುವಂತೆ ಮಾಡುತ್ತಾರೆ. ಕೆಲವು ಭಾಗಗಳಲ್ಲಿ 2002 ರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಪರವಾಗಿಲ್ಲ ಎನ್ವರೇಷನ್ ಫಾರಂ ಭರ್ತಿ ಮಾಡಿ ಸಾಕು ಎನ್ನುತ್ತಿದ್ದಾರೆ ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಎಸ್ ಸಿ , ಎಸ್.ಟಿ ಸಮುದಾಯವನ್ನು ಗುರಿಯಾಗಿದ್ದಾರೆ ಇದಕ್ಕೆ ಕಾರಣವೆಂದರೆ ಈ ವರ್ಗದವರು ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಬೆಂಬಲಿಸುತ್ತಾರೆ ಎಂಬುದು ಇದಕ್ಕೆ ಕಾರಣವಾಗಿದೆ ಎಂದರು.ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ ತಾಲೂಕಿನಲ್ಲಿ ಸರಿಸುಮಾರು199000 ಮತದಾರರಿದ್ದು ಇದರಲ್ಲಿ 21700 ಮತದಾರರು ವಿವಿಧ ಕಾರಣಗಳಿಂದ ಕೈಬಿಡಲಾಗಿದೆ. ಇದೇ ತಿಂಗಳು 8 ನೇ ತಾರೀಕು ಗಣತಿ ನಮೂನೆ ಅರ್ಜಿ ನೀಡಲು ಕೊನೆಯ ದಿನವಾಗಿದೆ. ಅದರಿಂದ ತಾಲ್ಲೋಕಿನ ಎಲ್ಲ ಮತದಾರರು ಪಟ್ಟಿಯಿಂದ ಹೊರಗುಳಿಯದೆ ಅಗತ್ಯವಿರುವ ದಾಖಲೆಗಳನ್ನು ನೀಡಿ ಪಟ್ಟಿಯಲ್ಲಿ ಹೆಸರು ಇರುವಂತೆ ನೋಡಿಕೊಳ್ಳಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದು ತಾಲೂಕಿನಲ್ಲಿ ಶೇಕಡಾ 90 ರಷ್ಟು ಮತದಾರರನ್ನು ಅಪ್ಲೋಡ್ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರಘಟಕ ಅಧ್ಯಕ್ಷ ಅಶೋಕ ಕುಮಾರ್ ಗೌಡ, ರಘು ಉಪಸ್ಥರಿದ್ದರು.