Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಿಮಾನ್ಸ್ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸದಿದ್ದರೆ ಉಸ್ತುವಾರಿ ಸಚಿವರ ಮನೆಗೆ ಮುತ್ತಿಗೆಮೈಸೂರು; ಮೈಸೂರು ತಾಲ್ಲೂಕಿನ ವರುಣ ಹೋಬಳಿಯ ಗುಡುಮಾದನಹಳ್ಳಿ ಗ್ರಾಮದ ಸರ್ವೆ ನಂ.8, 60 ಮತ್ತು 68 ಗಳಲ್ಲಿ ಸುಮಾರು 20 ಎಕರೆ ಸರ್ಕಾರಿ ಭೂಮಿಯಲ್ಲಿ ರೂ.100 ಕೋಟಿ ವೆಚ್ಚದ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಆಸ್ಪತ್ರೆಯನ್ನು ಅತೀ ಶೀಘ್ರವಾಗಿ ನಿರ್ಮಾಣ ಮಾಡಬೇಕೆಂದು ಮೈಸೂರು ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಕೆ.ಉಮಾಮಹೇಶ್ವರಿ ಆಗ್ರಹಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ನಾಲ್ವಡಿ ಸ್ಮರಣೆ ನಮ್ಮನಿತ್ಯ ಮಂತ್ರವಾಗಲಿ; ವಿಧಾನ ಪರಿಷತ್ ಸದಸ್ಯ ಆರ್.ರಘು ಕೌಟಿಲ್ಯ

ಮೈಸೂರು; ರಾಮ ರಾಜ್ಯದ ಕಲ್ಪನೆಯನ್ನು ಅಕ್ಷರಶಃ ಸಾಕಾರಗೊಳಿಸಿ ಮೈಸೂರು ಸಂಸ್ಥಾನದ ಅಭಿವೃದ್ಧಿಯಲ್ಲಿ ಶಾಶ್ವತ ನೆನಪುಗಳ ಕೊಡುಗೆಗಳನ್ನು ಕೊಟ್ಟು ಯುಗ ಪುರುಷ ಎನಿಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು, ಅಭಿವೃದ್ಧಿಯ ಯೋಧನಾಗಿ ‘ರಾಜರ್ಷಿ’ ಎಂದು ಕರೆಸಿಕೊಂಡರು ಎಂದು ವಿಧಾನ ಪರಿಷತ್ ಸದಸ್ಯ ಆರ್. ರಘು ಕೌಟಿಲ್ಯ ಸ್ಮರಿಸಿದರು.ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ನಾಲ್ವಡಿಯವರ ಪುಣ್ಯಸ್ಮರಣೆ ಅಂಗವಾಗಿ ಮೈಸೂರಿನ ನೀಲಗಿರಿ ರಸ್ತೆಯಲ್ಲಿರುವ ಮಧುವನದ ಅವರ ಐಕ್ಯ ಮಂದಿರದಲ್ಲಿ ನಮನ ಸಲ್ಲಿಸಿ ಮಾತನಾಡಿದ ಅವರು,ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೊಟ್ಟ ಕೊಡುಗೆಗಳ…

Read More

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಎಬಿವಿಪಿ ಆಗ್ರಹ

ಮೈಸೂರು; ಉಪನ್ಯಾಸಕರಿಲ್ಲದ ಸರ್ಕಾರಿ ಕಾಲೇಜುಗಳಲ್ಲಿ ತಕ್ಷಣವೇ ಉಪನ್ಯಾಸಕರ ನೇಮಕಾತಿ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಎಬಿವಿಪಿ ಆಗ್ರಹಿಸಿದೆ.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್‌ನ ಮೈಸೂರು ಜಿಲ್ಲಾ ಸಂಚಾಲಕ ನಂದನ್ ಕುಮಾರ್ ಹೆಚ್, ರಾಜ್ಯದಲ್ಲಿ ಸುಮಾರು 430+ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಅವುಗಳು ಇಂದು “ಶಿಕ್ಷಕರಿಲ್ಲದ ಶಿಕ್ಷಣ ಸಂಸ್ಥೆಗಳಾಗಿ” ಮಾರ್ಪಟ್ಟಿವೆ. ರಾಜ್ಯದ ಮೂಲೆ ಮೂಲೆಗಳ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವಲಂಬಿಸಿರುವ ಈ ಕಾಲೇಜುಗಳಲ್ಲಿ , ಅತಿಥಿ ಉಪನ್ಯಾಸಕರ ನೇಮಕಾತಿ…

Read More

ಕಾವೇರಿ ವಿವಾದಕ್ಕೆ ಸಂಕಷ್ಟ ಸೂತ್ರವೊಂದೇ ಪರಿಹಾರ; ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು; ಕಾವೇರಿ ವಿವಾದವನ್ನು ಕೊನೆಗಾಣಿಸಲು ಸಂಕಷ್ಟ ಸೂತ್ರವೊಂದೇ ಪರಿಹಾರವೆಂದು ಕರ್ನಾಟಕ ರಾಜ್ಯ ರೈತ ಸಂಘ ಅಭಿಪ್ರಾಯಪಟ್ಟಿದೆ.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಕಾವೇರಿ ಜಲವಿವಾದದ ನ್ಯಾಯಾಧಿಕರಣವಾಗಲೀ, ಸರ್ವೋಚ್ಚ ನ್ಯಾಯವಾಗಲಿ ತನ್ನ ತೀರ್ಪಿನಲ್ಲಿ ಸಂಕಷ್ಟ ಬಂದಾಗ ನೀರು ಹಂಚಿಕೆ ಬಗ್ಗೆ ಸ್ಪಷ್ಟ ಆದೇಶ ಮಾಡದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ. ಈಗಲಾದರೂ ನೀರಿನ ಕೊರತೆ ಇದ್ದಾಗ ಸಂಕಷ್ಟ ಸೂತ್ರವನ್ನು ರಚಿಸುವುದು ಅಗತ್ಯವಾಗಿದೆ ಎಂದು ಹೇಳಿದರು.ಕೇಂದ್ರ ಸರ್ಕಾರ ಕಾವೇರಿ ವಿವಾದದ…

Read More

ಚಾಮುಂಡಿಪುರ0ನಲ್ಲಿ ವಿಜೃಂಭಣೆಯ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

ಮೈಸೂರು: ನಗರದ ಚಾಮುಂಡಿಪುರ0ನ ಬಸವ ಬಳಗ ಸಂಘದ ವತಿಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ (ಜನ್ಮೋತ್ಸವ) ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿ0ದ ಆಚರಿಸಲಾಯಿತು.ಚಾಮುಂಡಿಪುರ0 ವೃತ್ತದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೂಜಾ ಕಾರ್ಯಕ್ರಮದ ನಂತರ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.ಈ ಸಂದರ್ಭದಲ್ಲಿ ಬಸವ ಬಳಗ ಸಂಘದ ಅಧ್ಯಕ್ಷ ಸಂದೀಪ್ ಸಿ., ಗೌರವಾಧ್ಯಕ್ಷ ಅಂಬಳೆ ಶಿವಣ್ಣ, ಉಪಾಧ್ಯಕ್ಷ ಎಂ. ಬಸವರಾಜು, ಪ್ರಮುಖರಾದ ಮರಿಸ್ವಾಮಿ, ಮಹೇಶ್…

Read More

ವಿಜಯ ವಿಠಲ ಕಾಲೇಜಿನಲ್ಲಿ ಪರಿಸರ ಸಂರಕ್ಷಣಾ ದಿನಾಚರಣೆ

ಮೈಸೂರು; ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ವೇದಿಕೆ ಮತ್ತು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಯಿತು. ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿ.ಎಸ್.ಟಿ.ಆರ್.ಐ.ನ ನಿವೃತ್ತ ಹಿರಿಯ ವಿಜ್ಞಾನಿ ಡಾ. ಟಿ. ತಿಪ್ಪೇಸ್ವಾಮಿ ಮಾತನಾಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಹಸಿರು ಮನೆ ಅನಿಲಗಳು ಪರಿಸರದ ಮೇಲೆ ಉಂಟು ಮಾಡುವ ದುಷ್ಪರಿಣಾಮಗಳು, ಅವುಗಳಿಂದ ಉಂಟಾಗುವ ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯ ಕುರಿತು ಮಾಹಿತಿ ನೀಡಿದರು. ಓಝೋನ್ ಪದರದ…

Read More

ಚಾಮುಂಡಿಪುರ0ನಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

ಮೈಸೂರು: ನಗರದ ಚಾಮುಂಡಿಪುರAನ ಬಸವ ಬಳಗ ಸಂಘದ ವತಿಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ (ಜನ್ಮೋತ್ಸವ) ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿAದ ಆಚರಿಸಲಾಯಿತು.ಚಾಮುಂಡಿಪುರA ವೃತ್ತದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೂಜಾ ಕಾರ್ಯಕ್ರಮದ ನಂತರ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.ಈ ಸಂದರ್ಭದಲ್ಲಿ ಬಸವ ಬಳಗ ಸಂಘದ ಅಧ್ಯಕ್ಷ ಸಂದೀಪ್ ಸಿ., ಗೌರವಾಧ್ಯಕ್ಷ ಅಂಬಳೆ ಶಿವಣ್ಣ, ಉಪಾಧ್ಯಕ್ಷ ಎಂ. ಬಸವರಾಜು, ಪ್ರಮುಖರಾದ ಮರಿಸ್ವಾಮಿ, ಮಹೇಶ್…

Read More