
ಮೈಸೂರು; ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಮೈಸೂರು ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಚಾಮುಂಡಿಬೆಟ್ಟದ ಪಾದದ ಬಳಿ ಆಗಮಿಸಿದ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ನೀಡಲಾಯಿತು.
ತಾಯಿ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಸಾವಿರಾರೂ ಭಕ್ತಾಧಿಗಳು ತಾಯಿಗೆ ಹರಕೆ ತಿರಿಸಲು ಬೆಟ್ಟದ ಪಾದದಿಂದ ಬೆಟ್ಟದ ಮೇಲೆ ವರೆಗೂ ಅರಿಶಿನ ಕುಂಕುಮ ಹಚ್ಚುತ್ತಾರೆ. ಅಂತಹ ಮಹಿಳಾ ಭಕ್ತಾಧಿಗಳಿಗೆ ಅರಿಶಿನ ಕುಂಕುಮ ಹಾಗೂ ಬಳೆಗಳನ್ನು ನೀಡಿ ಮೈಸೂರ್ ಪಾಕ್ ವಿತರಿಸಿ ಅವರಿಗೆ ತಾಯಿ ಚಾಮುಂಡೇಶ್ವರಿ ಒಳಿತನ್ನು ನೀಡಲಿ ಎಂದು ಹಾರೈಸಿದರು
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಮಂಡಳಿಯ ಮಾಜಿ ನಿರ್ದೇಶಕಿ ರೇಣುಕಾರಾಜ್, ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ರಂಜಿತಾ ಸುಬ್ರಹ್ಮಣ್ಯ, ಶ್ವೇತಾ ಅಶೋಕ್, ರಮ್ಯಾ, ಲತಾ, ಹಾಗೂ ಇನ್ನಿತರರು ಹಾಜರಿದ್ದರು.