
ಮೈಸೂರು: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಕöÈತ ಪಾಠಶಾಲೆಯ ಉಪನ್ಯಾಸಕ, ಪಂಡಿತ ಪ್ರಹ್ಲಾದಾಚಾರ್ಯ ಕಾನಡೆ ಅವರು ಶ್ರೀ ಭಂಡಾರಕೇರಿ ಮಠ ಕೊಡಮಾಡುವ ಪ್ರತಿಷ್ಠಿತ `ಅಥರ್ವೋದ್ಘೋಷ ವಾಕ್ಪತಿ’ ರಾಷ್ಟಿçÃಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಮಗ್ರವಾಗಿ ಅಥರ್ವವೇದವನ್ನು ಅಧ್ಯಯನ ಮಾಡಿ ನೂರಾರು ವಿದ್ಯಾರ್ಥಿಗಳಿಗೆ ಅದನ್ನು ಕಂಠಪಾಠ ಮಾಡಿಸುವ ಮೂಲಕ ಬೋಧನಾ ಕ್ರಮದಲ್ಲಿ ವಿಭಿನ್ನ ಸಾಧನೆ ಮಾಡಿರುವ ಕಾನಡೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿರುವುದಾಗಿ ಮಠದ ಪೀಠಾಧಿಪತಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.
ಪ್ರಶಸ್ತಿಯು ಸನ್ಮಾನ ಪತ್ರ, ಸ್ಮರಣಿಕೆ, ನಗದು ಪುರಸ್ಕಾರ ಒಳಗೊಂಡಿದೆ. ಉಡುಪಿ ಸಮೀಪದ ಬಾರ್ಕೂರಿನ ಭಂಡಾರಕೇರಿ ಮೂಲ ಮಠದಲ್ಲಿ 47ನೇ ಚಾತುರ್ಮಾಸ ಮತ್ತು ಆದರ್ಶ ಕೀರ್ತಿಶೇಷ ಶ್ರೀವಿದ್ಯಾಮಾನ್ಯತೀರ್ಥರ ಪೀಠಾರೋಹಣ ಶತಮಾನೋತ್ಸವ ಸಂಭ್ರಮಾಚರಣೆ ಸಂದರ್ಭದ ಅಂಗವಾಗಿ ಆ. 7 ರ ಸಂಜೆ 6ಕ್ಕೆ ನಡೆಯಲಿರುವ ವಿದ್ವತ್ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮೈಸೂರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಭಂಡಾರಕೇರಿ ಶಾಖಾ ಮಠ ಪ್ರಕಟಣೆ ತಿಳಿಸಿದೆ.