Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾನು ಕಿಕ್ ಬ್ಯಾಕ್ ಪಡೆದಿದ್ದರೆ ತನಿಖೆ ಮಾಡಲಿ. ನನ್ನನ್ನಾಗಲಿ, ದೇವೇಗೌಡರನ್ನಾಗಲಿ ಕೊಂಡುಕೊಳ್ಳಲು ಸಾಧ್ಯವಿಲ್ಲ ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ನಾನು ಕಿಕ್ ಬ್ಯಾಕ್ ಪಡೆದಿದ್ದರೆ ತನಿಖೆ ಮಾಡಲಿ. ನನ್ನನ್ನಾಗಲಿ, ದೇವೇಗೌಡರನ್ನಾಗಲಿ ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದರು.
ಭಾನುವಾರ ಬೆಳಗ್ಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ ಡಿಎಲ್‌ಎಫ್ ಕಂಪನಿಯಿAದ ಕಿಕ್ ಬ್ಯಾಕ್ ಪಡೆದಿದ್ದಾರೆ’ ಎಂಬ ತಮ್ಮ ವಿರುದ್ಧದ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ‘ಕೇರಳದ ಕಾಂಗ್ರೆಸ್ ಮುಖ್ಯಮಂತ್ರಿಗೂ, ಪ್ರಧಾನಿಯಾಗಲು ಹೊರಟಿರುವ ದೆಹಲಿಯ ವ್ಯಕ್ತಿಗೂ-ಡಿಎಲ್‌ಎಫ್‌ಗೂ ಸಂಬAಧವೇನು ಎಂಬುದನ್ನು ಹೇಳಲಿ, ಆಗ ಸತ್ಯವೆಲ್ಲವೂ ಗೊತ್ತಾಗುತ್ತವೆ. ರಾಜ್ಯದಲ್ಲಿ ಸರ್ಕಾರ ಅವರದೇ ಇದೆಯಲ್ಲವೇ ತನಿಖೆ ಮಾಡಿಸಲಿ’ ಎಂದು ತಿರುಗೇಟು ನೀಡಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ, ಸಿಂಗಪುರದ ಒಂದು ಕಂಪನಿ ಬೆಂಗಳೂರಿನ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ನಿರ್ವಹಿಸಲು ತಯಾರಿರುವುದಾಗಿ ಹೇಳಿತ್ತು. ಅದು ಸಿಂಗಪುರದಲ್ಲಿ ಹೇಗೆ ಅನುಷ್ಠಾನಗೊಳಿಸಿದೆ ಎಂಬುದನ್ನು ನೋಡಲೆಂದು ನಾನು ಅಧಿಕಾರಿಗಳ ನಿಯೋಗ ಕರೆದೊಯ್ದಿದ್ದೆ. ಆಗ ಈ ‘ನೈಸ್’ ವ್ಯಕ್ತಿಯೂ ಬಂದಿದ್ದರು, ಅವರಿಗೆ ಏನು ಹೇಳಿ ಕಳಿಸಿದೆ ಎಂಬುದನ್ನು ಕೇಳಲಿ. ಲಾಟರಿ ನಿಷೇಧಿಸುವಾಗ, ತಮಿಳುನಾಡಿನಿಂದ ಬ್ಯಾಗ್ ಹಿಡಿದುಕೊಂಡು ಬಂದು ನನ್ನಿಂದ ಉಗಿಸಿಕೊಂಡವರು ಯಾರು?’ ಎಂದು ಖಾರವಾಗಿ ಕೇಳಿದರು. ನನ್ನನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ನನ್ನ ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ, ನನ್ನ ಧ್ವನಿಯನ್ನೂ ನಿಲ್ಲಿಸಲು ಆಗಲ್ಲ ಎಂದು ಕಿಡಿಕಾರಿದರು.
ಬಿಡದಿ ಟೌನ್‌ಶಿಪ್‌ನಲ್ಲಿ ನನಗೆ ಯಾವುದೇ ಹಠ ಇಲ್ಲ. ಬಹುಶಃ ಅವರಿಗೆ ಹಠ ಇರಬೇಕು. ಬಿಡದಿ ಟೌನ್‌ಶಿಪ್ ಹೆಸರಲ್ಲಿ ಲೂಟಿ ಹೊಡೆಯುವ ಸ್ಕೀಮ್ ಇದು. “ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಯೋಜನೆಗಳಿಂದ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಜನರು ನಂಬುವ ಹಾಗೇ ಜಾಹೀರಾತನ್ನು ಕೊಡಿ. ಬಿಡದಿ ಭೂಮಿ ಫಲವತ್ತಾದ ಭೂಮಿ ಎಂದು ಕಾಂಗ್ರೆಸ್ ಸದನ ಸಮಿತಿ ವರದಿಯಲ್ಲಿ ಎಲ್ಲವೂ ಇದೆ. ಬಿಡದಿ ಪ್ರಾಜೆಕ್ಟ್ ನಿಲ್ಲಿಸುವ ಬಗ್ಗೆ ನಾನೇ ಸದನದಲ್ಲಿ ಹೇಳಿದ್ದೇನೆ. ಈಗ ಬಿಡದಿ ಲೂಟಿ ಹೊಡೆಯಲು ಹೊರಟಿದ್ದಾರೆ. ಇದೇ ಡಿ.ಕೆ.ಶಿವಕುಮಾರ್ ಸದನ ಸಮಿತಿಯಲ್ಲಿ ಇದ್ದರಲ್ಲ… ನಾನು ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿದ್ದೇನೆ” ಎಂದು ಹೇಳಿದರು.
“ಬಿಡದಿ ಟೌನ್ ಶಿಪ್ ಯಾವ ಕಾರಣಕ್ಕೂ ಆಗಲ್ಲ. ‘ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಮತ್ತೊಂದು ಸಮಿತಿಯಿಂದ ವರದಿ ಪಡೆಯಲು ಹೊರಟಿರುವುದು ನಗೆಪಾಟಲಲ್ಲದೇ ಬೇರೇನೂ ಅಲ್ಲ. 2006ರಲ್ಲಿ ಸದನ ಸಮಿತಿಯೇ ಸತ್ಯಶೋಧನಾ ವರದಿ ಕೊಟ್ಟಿದೆ, ಅದೇನಾಯಿತು? ಈಗೇಕೆ ಸಮಿತಿ ರಚಿಸಿದ್ದೀರಿ? ಆ ಸಮಿತಿಯಲ್ಲಿ ಸದಸ್ಯರಿದ್ದವರೇ ಈಗ ಮುಖ್ಯಮಂತ್ರಿ ಆಗಿದ್ದಾರೆ. ಸಿಎಂ ಆದವರಿಗೆ ಪರಿಜ್ಞಾನ ಬೇಡವೇ?’ ಎಂದು ಡಿಕೆಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರು, ಹೆಣ್ಮಕ್ಕಳು ಭದ್ರವಾಗಿದ್ದರೆ ಬಿಡದಿ ಟೌನ್ ಶಿಪ್ ಆಗಲ್ಲ. ‘ಬಿಡದಿ ಟೌನ್‌ಶಿಪ್ ವಿರೋಧಿಸಿ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ನಮ್ಮ ಶಾಸಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ನಾನು ಹೋಗುತ್ತಿಲ್ಲ’ ಎಂದು ತಿಳಿಸಿದರು.
ಕೆಟ್ಟ ಭ್ರಷ್ಟ ಸರ್ಕಾರಕ್ಕೆ ತಿರುಗೇಟು ಕೊಡಲಿಕ್ಕೆ ನಮ್ಮ ಶಾಸಕರು ಸಿದ್ದರಿದ್ದಾರೆ. ವಿಪಕ್ಷಗಳು ಮಾತನಾಡಿದರೆ ಗೌರವ ಕೊಡುತ್ತಿಲ್ಲ. ಅಧಿಕಾರದ ಮದದಿಂದ ವಿಪಕ್ಷಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಬೀದಿ ಬದಿ ವ್ಯಾಪಾರಸ್ಥರನ್ನು ಎತ್ತಿಸಿದ್ದೀರಿ? ಅವರಿಗೆ ಪರ್ಯಾಯ ಮಾರ್ಗ ಕೊಟ್ಟಿದ್ದೀರಾ?. ಕೃಷ್ಣಭೈರೇಗೌಡರು ನಾನು ಖರೀದಿ ಮಾಡಿದ ಜಾಗ ಒತ್ತುವರಿ ಅಂದಿದ್ದಿರಾ?, ಅದಕ್ಕೆ ಎಸ್‌ಐಟಿ ಕೂಡ ರಚನೆ ಮಾಡಿದ್ದಾರೆ. ಒಂದೂವರೆ ವರ್ಷ ಅಧಿಕಾರ ಮಾತ್ರ ಬಾಕಿ ಇರೋದು” ಎಂದು ಎಚ್ಚರಿಕೆ ನೀಡಿದರು.
ನೈಸ್ ರೋಡ್ ಟೋಲ್ ಸಂಗ್ರಹ ವಿಚಾರವಾಗಿ ಮಾತನಾಡಿ, “ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇದನ್ನು ಹೇಳಿರುವುದು ರಾಜ್ಯ ಸರ್ಕಾರದ ಪರ ವಾದ ಮಂಡಿಸಿರುವ ವಕೀಲರು. ಹೀಗಾಗಿ ನಾನು ರೈತರಿಗೆ ಟೋಲ್ ಕಟ್ಟಬೇಡಿ ಅಂತ ಹೇಳಿದ್ದೀನಿ. ಪ್ರಿಯಾಂಕ ಖರ್ಗೆಯವರು ಕಾಂಪಿಟೇಷನ್‌ನಲ್ಲಿ ಮಾತನಾಡುತ್ತಾರೆ. ಟೋಲ್ ಸಂಗ್ರಹ ಮಾಡುತ್ತಿರುವುದು ಕೇಂದ್ರ ಸರ್ಕಾರ ಅಂದಿದ್ದಾರೆ. ಯಾರು ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಅರಿವಿರಲಿ” ಎಂದು ಕಿಡಿಕಾರಿದರು.