ಮೈಸೂರು ವಿವಿ ಕುಲಸಚಿವರಾಗಿ (ಮೌಲ್ಯಮಾಪನ) ಪ್ರೊ. ಕೆಂಪೇಗೌಡ ಬಿ.ಕೆ ನೇಮಕಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ (ಮೌಲ್ಯಮಾಪನ) ಪ್ರೊ. ಕೆಂಪೇಗೌಡ ಬಿ.ಕೆ. ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಸ್ತುತ ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರಾಗಿರುವ ಪ್ರೊ. ಕೆಂಪೇಗೌಡ ಅವರನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ.ನೇಮಕಾತಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಸೂಚನೆಯಲ್ಲಿ…
Day: August 11, 2026
ಶಾಸಕ ತನ್ವೀರ್ ಸೇಠ್ಗೆ ಮುಂದೆ ಅವಕಾಶ ಸಿಗಬಹುದು; ಸಚಿವ ಯು.ಟಿ.ಖಾದರ್
ಮೈಸೂರು: ರಾಜ್ಯದಲ್ಲಿ ನನ್ನನ್ನೂ ಒಳಗೊಂಡು ನಾಲ್ವರು ಅಲ್ಪಸಂಖ್ಯಾತ ನಾಯಕರಿಗೆ ‘ಕಾಂಗ್ರೆಸ್ ಪಕ್ಷವು ಸದ್ಯ ಸಚಿವರಾಗುವ ಅವಕಾಶವನ್ನು ನೀಡಿದೆ. ಮುಂದೆ ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೂ ಖಂಡಿತ ಅವಕಾಶ ಸಿಗಲಿದೆ’ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.ಶಾಸಕ ತನ್ವೀರ್ ಸೇಠ್ಗೆ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಮಂಗಳವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ತನ್ವೀರ್ ಸೇಠ್ ಅವರು ಖಂಡಿತ ಸಚಿವ ಸ್ಥಾನಕ್ಕೆ ಅರ್ಹರಿದ್ದಾರೆ. ಭವಿಷ್ಯದಲ್ಲಿ…
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಇನ್ನಷ್ಟು ಸಕ್ರಿಯ ಆಗಬೇಕು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ಗೆ ಶಕ್ತಿ ತುಂಬಬೇಕು; ಮಾಜಿ ಸ್ಪೀಕರ್ ರಮೇಶ್ ಕುಮಾರ್
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಇನ್ನಷ್ಟು ಸಕ್ರಿಯ ಆಗಬೇಕು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ಗೆ ಶಕ್ತಿ ತುಂಬಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.ಮಂಗಳವಾರ ನಗರದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ 79ನೇ ಹುಟ್ಟುಹಬ್ಬದ ಹಿನ್ನೆಲೆ ನಡೆದ ಪೊಲಿಟಿಕಲ್ ಮಾರ್ಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿಶ್ರಾಂತಿ ಪಡೆಯದೇ ಪಕ್ಷಕ್ಕೆ ದುಡಿಯಬೇಕು. ಪಕ್ಷದತ್ತ ಜನರನ್ಮು ಸೆಳೆಯುವ ಶಕ್ತಿ ಸಿದ್ದರಾಮಯ್ಯ ಅವರಿಗೆ ಅವಕಾಶ ಇದ್ದು, ಅವರ ಬೆನ್ನಿಗೆ ನಾವೆಲ್ಲ…
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ. ಈ. ಸಿ. ನಿಂಗರಾಜ್ ಗೌಡ
ಮೈಸೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಲಯನ್ ಗಾರ್ಡನ್ ಸಿಟಿ ಸಂಸ್ಥೆಯ ಕಾರ್ಯದರ್ಶಿ ಡಾ. ಈ. ಸಿ. ನಿಂಗರಾಜ್ ಗೌಡ ಹೇಳಿದರು.ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮೈಸೂರಿನ ಹೆಬ್ಬಾಳದ ಹತ್ತೀರ ಇರುವ ಕೆಬಿಲ್ ಸಿಲಿಕಾನ್ ಸಿಟಿ ಬಡಾವಣೆಯ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮೈಸೂರು ಲಯನ್ ಗಾರ್ಡನ್ ಸಿಟಿ ಸಂಸ್ಥೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು , ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಕಾರ್ಯಕ್ರಮವಾಗದೆ, ಪ್ರತಿಯೊಬ್ಬರ…
ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆ ತರುವ ಕೆಲಸ ಮಾಡುತ್ತೇವೆ; ಆರೋಗ್ಯ ಸಚಿವ ಯು.ಟಿ.ಖಾದರ್
• ಸಭಾಪತಿ ವಿಚಾರದಲ್ಲಿ ಕೀಳು ರಾಜಕೀಯ ಬೇಡ: ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲಮೈಸೂರು: ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆ ತರುವ ಕೆಲಸ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೂ ಸಹ ಕರ್ನಾಟಕದಲ್ಲಿ ನಗರ ಪ್ರದೇಶವನ್ನು ಬಿಟ್ಟರೆ ಗ್ರಾಮೀಣ ಭಾಗದಲ್ಲಿ ಜನರ ಆರೋಗ್ಯದ ಕಾಳಜಿ ಮಾಡುತ್ತಿರುವುದು ಸರ್ಕಾರಿ ಆಸ್ಪತ್ರೆಗಳೇ. ಇವುಗಳ ಸುಧಾರಣೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.ಬೆಂಗಳೂರಿನ ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ…
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರಹಸ್ಯ ಸಭೆ ನಡೆಸಿದ ಮೈಸೂರು ಮೂವರು ಮಾಜಿ ಸಚಿವರು !
ಮೂವರಿಗೆ ಪ್ರತ್ಯೇಕವಾಗಿ ಸಮುದಾಯದ ಬೆಂಬಲವಿದ್ದರೂ, ಸಚಿವ ಸ್ಥಾನ ನೀಡದ್ದಕ್ಕೆ ತೀವ್ರ ಅಸಮಾಧಾನ*ಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ಮೈಸೂರು: ತಮಗೆ ಸಮುದಾಯಗಳ ಭಾರೀ ಬೆಂಬಲವಿದ್ದರೂ ಕೂಡ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರವಾಗಿ ಅಸಮಾಧಾನಗೊಂಡಿರುವ ಮೈಸೂರಿನ ಮೂವರು ಮಾಜಿ ಸಚಿವರುಗಳಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಹಾಗೂ ತನ್ವೀರ್ ಸೇಠ್ ಅವರು ಮಂಗಳವಾರ ನಗರದಲ್ಲಿ ರಹಸ್ಯವಾಗಿ ಸಭೆ ನಡೆಸಿ, ಚರ್ಚಿಸಿದರು.ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಗುಪ್ತವಾಗಿ ಸಭೆ ನಡೆಸಿದ ಈ ಮೂವರು ಮಾಜಿ ಸಚಿವರು, ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇವೆ. ಸಚಿವ ಸ್ಥಾನವನ್ನೂ…
ರೈತರ ನಡಿಗೆ-ದೆಹಲಿಯ ಕಡೆಗೆ ; ಆ. 16 ರಿಂದ ಕಿಸಾನ್ ಬಚಾವೋ ಪಾದಯಾತ್ರೆ ; ಕುರುಬೂರು ಶಾಂತಕುಮಾರ್
ಮೈಸೂರು; ರೈತರ ಹಕ್ಕುಗಳು ಮತ್ತು ಕೃಷಿಯ ಭವಿಷ್ಯವನ್ನು ಉಳಿಸುವ ಉದ್ದೇಶದಿಂದ ಹರಿಯಾಣ ಗಡಿ ಕನೋರಿಯಿಂದ ದೆಹಲಿಯ ತನಕ 13 ದಿನಗಳ “ಕಿಸಾನ್ ಬಚಾವೋ ಪಾದಯಾತ್ರೆ”ಯನ್ನು ಆಗಸ್ಟ್ 16ರಿಂದ 29ರವರೆಗೆ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟಿçÃಯ ಸಹ ಸಂಚಾಲಕ ಕುರುಬುರು ಶಾಂತಕುಮಾರ್ ತಿಳಿಸಿದರು.ಮಂಗಳವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ರೈತರ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ ವರ್ಷ ದೇಶದ ರೈತರಿಗಾಗಿ 130 ದಿನಗಳು ಉಪವಾಸ ಸತ್ಯಾಗ್ರಹ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ…
ಮಳೆ ಮುಂದುವರಿದರೆಷ್ಟೇ ತಮಿಳುನಾಡಿಗೆ ನಿತ್ಯವೂ 1 ಟಿಎಂಸಿ ನೀರು ಹರಿಸಲು ಸಾಧ್ಯ, ಇಲ್ಲದಿದ್ದರೆ ಗೋವಿಂದ !
ಮೈಸೂರು: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯವೂ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ಮೇಲುಸ್ತುವಾರಿ ಸಮಿತಿ ಸೂಚನೆ ನೀಡಿರುವುದು ಕಾವೇರಿ ಕಣಿವೆಯ ಜನರಿಗೆ ಆಘಾತವನ್ನುಂಟು ಮಾಡಿದೆ. 12 ಸಾವಿರ ಕ್ಯೂಸೆಕ್ ನೀರು ಎಂದರೆ ಬರೋ ಬರೀ 1 ಟಿಎಂಸಿ. ನಿತ್ಯವೂ ತಮಿಳುನಾಡಿಗೆ ಇಷ್ಟು ಪ್ರಮಾಣದ ನೀರನ್ನು ಈಗ ಕಾವೇರಿ ಕಣಿವೆಯ ಜಲಾಶಯುಗಳಿಂದ ಹರಿಸಬೇಕಾಗಿದೆ. ಆದರೆ ಸಮಾಧಾನದ ವಿಷಯ ಎಂದರೆ, ಕಾವೇರಿ ಕಣಿವೆಯಲ್ಲಿರುವ ಜಲಾಶಯಗಳ ಹಿನ್ನೀರಿನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು…